ಬಿಸಿ ಬಿಸಿ ಸುದ್ದಿ

ಡಾ. ಫ.ಗು. ಹಳಕಟ್ಟಿ ವಚನ ವಿನ್ಯಾಸಕಾರ: ಡಾ. ಈಶ್ವರ ಮಂಟೂರ

ಕಲಬುರಗಿ: ಜನಸಾಹಿತ್ಯದ ತಾಯಿಬೇರು ವಚನ ಸಾಹಿತ್ಯ. ಜೀವಾನುಭವದಿಂದ ವಾಸ್ತವಿಕ ನೆಲೆಗಟ್ಟಿನ ಮೇಲೆ ಒಡಮೂಡಿದ ವಚನ ಸಾಹಿತ್ಯ ಜನ ಬದುಕುವ ಸಾಹಿತ್ಯ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಅಪ್ಪಾರಾವ ಅಕ್ಕೋಣಿ ತಿಳಿಸಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಯುವ ಘಟಕದ ವತಿಯಿಂದ ಡಾ. ಫ.ಗು. ಹಳಕಟ್ಟಿ ಅವರ ಬದುಕು-ಬರಹ ಕುರಿತು ನಗರದ ವಿಶ್ವನಾಥರೆಡ್ಡಿ ಮುದ್ನಾಳ ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಇಂದು ಆಯೋಜಿಸಿದ್ದ ಜಿಲ್ಲಾ ಮಟ್ಟದ ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಜನರ ಹೃದಯಕ್ಕೆ ತಟ್ಟುವ ಇಂತಹ ವಚನ ಸಾಹಿತ್ಯವನ್ನು ಸಂಗ್ರಹಿಸಿಕೊಟ್ಟ ಫ.ಗು. ಹಳಕಟ್ಟಿಯವರನ್ನು ಕನ್ನಡಿಗರು ಸದಾ ಸ್ಮರಿಸಬೇಕು ಎಂದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕುಪೇಂದ್ರ ಪಾಟೀಲ ಆಶಯ ನುಡಿ ನುಡಿದರು. ವೀರಶೈವ ವಿದ್ಯಾವರ್ಧಕ ಸಂಘದ ಜಂಟಿ ಕಾರ್ಯದರ್ಶಿ ಎಸ್.ಡಿ. ನಿಜಗುಣಿ ಮುಖ್ಯ ಅತಿಥಿಯಾಗಿದ್ದರು. ಪ್ರಾಚಾರ್ಯರಾದ ಡಾ. ಪ್ರೇಮಾ ಅಪಚಂದ ಅಧ್ಯಕ್ಷತೆ ವಹಿಸಿದ್ದರು. ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಶಿವರಾಜ ಅಂಡಗಿ ವೇದಿಕೆಯಲ್ಲಿದ್ದರು.

ಗೋಷ್ಠಿ-೧: ಶರಣ ಸಾಹಿತ್ಯಕ್ಕೆ ಫ.ಗು. ಹಳಕಟ್ಟಿ ಅವರ ಕೊಡುಗೆ ವಿಷಯ ಕುರಿತು ಹುನ್ನೂರ-ಮದರಖಂಡಿ ಬಸವ ಜ್ಞಾನ ಗುರುಕುಲದ ಡಾ. ಈಶ್ವರ ಮಂಟೂರ ಮಾತನಾಡಿ, ಕನ್ನಡದ ಅನರ್ಘ್ಯರತ್ನದಂತಿರುವ ವಚನ ಸಾಹಿತ್ಯ ಬೆಳಕಿಗೆ ಬರಲು ಫ.ಗು. ಹಳಕಟ್ಟಿಯವರ ಕೊಡುಗೆ ಅಪಾರವಾಗಿದ್ದು, ಮನೆ, ಮಠ-ಮಂದಿರಗಳ ಜಗಲಿ ಮೇಲೆ ಪೂಜೆಗೊಂಡು ಹಾಳಾಗುತ್ತಿದ್ದ ವಚನದ ಕಟ್ಟುಗಳನ್ನು ಸಂರಕ್ಷಿಸಿ ಪರಿಷ್ಕರಿಸಿ ಅವರು ಕೊಟ್ಟಿದ್ದರಿಂದಲೇ ನಾವಿಂದು ವಚನ ಸಾಹಿತ್ಯ, ಅದರ ಪ್ರಸ್ತುತತೆ, ವಾಸ್ತವಿಕತೆ ಇತ್ಯಾದಿಗಳ ಬಗ್ಗೆ ಮಾತನಾಡುವಂತಾಗಿದೆ ಎಂದು ಹೇಳಿದರು.
ಪೂಜಿಸುವ ಕೈಗಳು ಕಾಯಕ ಮಾಡಬೇಕು, ಜೀವನ ಅಶಾಶ್ವತ ಸಾಹಿತ್ಯ ಶಾಶ್ವತ, ಬದಲಾವಣೆಗೆ ಹಾತೊರೆದು ಕೆಲಸ ಮಾಡಿದರೆ ಯಶಸಸ್ಸು ನಮ್ಮ ಕಣ್ಣ ಮುಂದೆ ಇರುತ್ತದೆ ಎಂದು ನುಡಿದ ಹಳಕಟ್ಟಿಯವರು, ಕುಶಾಗ್ರಮತಿ, ತಾಳ್ಮೆ, ಆತ್ಮಸ್ಥೈರ್ಯದಿಂದ ಮುನ್ನುಗ್ಗಿದರೆ ಅಸಾಧ್ಯವಾದುದು ಸಾಧ್ಯವಾಗಬಲ್ಲದು. ಕೆಲಸ ಆಗುವವರೆಗೆ ಛಲ ಬಿಡಬಾರದು ಎಂದು ಬದುಕಿನ ಸೂತ್ರ ಹೇಳಿಕೊಟ್ಟಿದ್ದಾರೆ. ಅವರು ಕೇವಲ ವಚನಗಳನ್ನು ಮಾತ್ರ ಸಂಗ್ರಹಿಸಲಿಲ್ಲ.

ವಚನ ಸಾರವನ್ನು ಸಹ ಸಂಗ್ರಹಿಸಿಕೊಡುವ ಮೂಲಕ ಶರಣ ಚರಿತ್ರಾಮೃತಕ್ಕೆ ಮುನ್ನುಡಿ ಬರೆದಿದ್ದಾರೆ. ಅಂತೆಯೇ ಅವರನ್ನು ವಚನ ವಿನ್ಯಾಸಕಾರ, ವಚನ ಗುಮ್ಮಟ, ವಚನ ಪಿತಾಮಹ ಎಂದು ಕರೆಯುತ್ತಾರೆ ಎಂದು ತಿಳಿಸಿದರು.
ನಿವೃತ್ತ ಕೃಷಿ ಅಧಿಕಾರಿ ಬಸವರಾಜ ಎಸ್. ಪುಣ್ಯಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ಡಾ. ಜಯಶ್ರೀ ದಂಡೆ ಅಧ್ಯಕ್ಷತೆ ವಹಿಸಿದ್ದರು. ಸಮಾಜಿಕ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಡಾ. ಫ.ಗು. ಹಳಕಟ್ಟಿಯವರ ಕೊಡುಗೆ ಕುರಿತು ಸರ್ಕಾರಿ ಮಹಾವಿದ್ಯಾಲಯದ ಕನ್ನಡ ಸಹ ಪ್ರಾಧ್ಯಾಪಕ ಡಾ. ಕಲ್ಯಾಣರಾವ ಪಾಟೀಲ ಮಾತನಾಡಿದರು. ವಚನೋತ್ಸವ ಪ್ರತಿಷ್ಠಾನದ ಅಧ್ಯಕ್ಷ ಡಾ. ಬಸವರಾಜ ಮೋದಿ ಮುಖ್ಯ ಅತಿಥಿಯಾಗಿದ್ದರು. ಹಟಗಾರ ಸಮಾಜದ ರಾಜ್ಯಾಧ್ಯಕ್ಷ ಆರ್.ಸಿ. ಘಾಳೆ ಅಧ್ಯಕ್ಷತೆ ವಹಿಸಿದ್ದರು.

ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಹಿರಿಯ ವಕೀಲ ಬಾಬುರಾವ ಮಂಗಾಣೆ ಸಮಾರೋಪ ನುಡಿಗಳನ್ನಾಡಿದರು. ಶಿವರಾಜ ಅಂಡಗಿ ಅಧ್ಯಕ್ಷತೆ ವಹಿಸಿದ್ದರು. ವಿಜಯಕುಮಾರ ತೇಗಲತಿಪ್ಪಿ ಸ್ವಾಗತಿಸಿದರು. ಡಾ. ಶರಣಬಸಪ್ಪ ವಡ್ಡನಕೇರಿ ನಿರೂಪಿಸಿದರು. ಸಂಗಮೇಶ ಕರಡಿ ವಂದಿಸಿದರು. ಬಿ.ಎಂ. ಪಾಟೀಲ ಕಲ್ಲೂರ, ಶರಣಬಸವ ಮಂಗಲಗಿ, ವಿನೋದಕುಮಾರ ಜೇನೆವರಿ, ಚಾಂದಪಾಶಾ, ಡಾ. ಶೈಲಜಾ ಬಾಗೇವಾಡಿ, ವಿಶ್ವನಾಥ ಮಂಗಲಗಿ, ಶಿವಶರಣ ಪಾಟೀಲ, ರಮೇಶ ದೊಡ್ಡಮನಿ, ರಾಜಶೇಖರ ಮರಪಳ್ಳಿ, ಸಿದ್ಧಲಿಂಗೇಶ್ವರ ಶಿರೂರಮಠ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

58 mins ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

3 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

3 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

3 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

4 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420