ತಳವಾರ ಜನಾಂಗಕ್ಕೆ ಪರಿಶಿಷ್ಟ ಪಂಗಡ ಪತ್ರ ವಿತರಣೆಗೆ ಒತ್ತಾಯಿಸಿ ಸಿಎಂಗೆ ಮನವಿ

ಕಲಬುರಗಿ: ಕೇಂದ್ರ ಸರಕಾರದ 19-03-2020ರ ಆದೇಶದಂತೆ ತಳವಾರ ಸಮುದಾಯದ ಜನಾಂಗಕ್ಕೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ತಳವಾರ ಎಸ್.ಟಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಡಾ. ಸರ್ದಾರ ರಾಯಪ್ಪ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

19-03-2020ರಂದು ಕೇಂದ್ರ ಸರ್ಕಾರ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅನುಮೋದನೆ ಪಡೆದು ರಾಷ್ಟ್ರಪತಿಯವರ ಅಂಕಿತದೊಂದಿಗೆ ಸಿಧ್ಧಿ, ಪರಿವಾರ ಮತ್ತು ತಳವಾರ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯಪತ್ರ ಹೊರಡಿಸಿದೆ. ಅದರಂತೆ ರಾಜ್ಯ ಸರಕಾರವು ಕೂಡ ಕೇಂದ್ರ ಸರ್ಕಾರದ ಆದೇಶವನ್ನು ಪರಿಗಣಿಸಿ 08-05-2020ರಂದು ರಾಜ್ಯಪತ್ರ ಹೊರಡಿಸಿ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡಿತ್ತು.

ಆದರೆ ಪ್ರಬಲ ಸಮುದಾಯದವರ ಒತ್ತಡ, ರಾಜಕೀಯ ಮೇಲಾಟದಿಂದ ತಳವಾರ ಸಮುದಾಯದ ಜನರಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡುವುದನ್ನು ನಿಲ್ಲಿಸಿತು. ಹಾಗೆಯೇ ‘ಇದು ನಿಮಗೆ ಸಂಬಂಧಿಸಿದ್ದಲ್ಲ ಕೇಂದ್ರ ಸರಕಾರಕ್ಕೆ ಕ್ಲಾರಿಫಿಕೇಶನ್ ಕೇಳುತ್ತೇವೆ, ಎಂದು ಸರ್ಕಾರ ನಮ್ಮ ಭವಿಷ್ಯದ ಜೀವನ ನರಕಕ್ಕೆ ನೂಕಿತು. ಈಗ ಅಧಿಕಾರಿಗಳು ದಿನನಿತ್ಯ ನಮಗೆ ಚಿತ್ರಹಿಂಸೆ ಕೊಡುಟ್ಟು ಸಿಕ್ಷಿಸುದ್ದಾರೆ ಎಂದು ತಮ್ಮ ಅಳಲು ತೊಡಿಕೊಂಡರು.

ರಾಜ್ಯ ಸರಕಾರದ ನಡೆಯಿಂದ ನಮಗಾದ ಅನ್ಯಾಯವನ್ನು ಖಂಡಿಸಿ ಹೋರಾಟ ಆರಂಭವಾದ ದಿನದಿಂದ ಪ್ರಸ್ತುತ ವರೆಗೂ ಹೇಳುತ್ತೇವೆ ತಳವಾರ ಒಂದು ಸ್ವತಂತ್ರ ಪದ, ಅದು ಯಾವ ಸಮುದಾಯ, ಜಾತಿಗೂ ಸಂಬಂಧಿಸಿದ್ದಲ್ಲವೆಂದು, ನಮ್ಮ ವಾದದ ಪ್ರತಿ ಧ್ವನಿಯಂತೆ ಕೇಂದ್ರ ಸರಕಾರವು ಕೂಡ ಧ್ವನಿಯತ್ತಿದೆ, ಈಗಲಾದರೂ ಕೂಡ ಸರಿಯಾದ ಸ್ಪಷ್ಟೀಕರಣ ಕೊಟ್ಟು ತಳಸಮುದಾಯಕ್ಕೆ ನ್ಯಾಯ ಕೊಡಿಸುವ ಕೆಲಸ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ಮಾಡಬೇಕು ಎಂದು ಆಗ್ರಹಿಸಿದರು.

ಸರಕಾರ ಸೂಕ್ತವಾಗಿ ಸ್ಪಂದಿಸಿದ್ದರೆ, ಮುಂದೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಅದಕ್ಕೆ ಸರ್ಕಾರವೆ ನೇರ ಹೊಣೆ ಹೊಣೆಯಾಗಬೇಕಾತ್ತದೆ ಎಂದು ಸರಕಾರಕ್ಕೆ ಮನವಿ ಪತ್ರ ನೀಡುವ ಮೂಲಕ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಕೊತ್ಲಪ್ಪ ಮುತ್ಯಾ ತೊನಸನಹಳ್ಳಿ, ರವಿ ಶ್ಯಾಬಾದ, ಬೆಳ್ಳೆಪ್ಪ ಖಣದಾಳ ಸೇರಿದಂತೆ ಮುಂತಾದವರು ಇದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

47 mins ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

6 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

17 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

19 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

19 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

19 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420