ವಿವಿಧ ಪಕ್ಷ ತೋರೆದು ಬಾಲರಾಜ್ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

0
12

ಸೇಡಂ: ಸೇಡಂ ಮತಕ್ಷೇತ್ರದ ಹುಡಾ ಕೆ ಗ್ರಾಮದ ಮುಖಂಡರು ವಿವಿಧ ಪಕ್ಷಗಳು ತೊರೆದು ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ವೇಳೆ ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಮಾತನಾಡಿ ಬಿಜೆಪಿ ಮತ್ತು ಕಾಂಗ್ರೆಸ್ ನಿಂದ ಜನ ಬೇಸರಗೊಂಡಿದ್ದಾರೆ. ಕ್ಷೇತ್ರದ ಜನರು ಬದಲಾವಣೆ ಬಯಸುತ್ತಿದ್ದಾರೆ. ಇದರಿಂದ ಮುಂಬರವ ತಾಪಂ ಜಿಪಂ ಚುನಾವಣೆಯಲ್ಲಿ ಸೇಡಂ ಮತಕ್ಷೇತ್ರದ ಎಲ್ಲಾ ಜಿ.ಪಂ ತಾ.ಪಂ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧೆ ಮಾಡಿಸಿ ಅತಿ ಹೆಚ್ಚು ಜಿ.ಪಂ-ತಾ.ಪಂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವು ಸಾಧಿಸುವ ವಿಶ್ವಾಸವಿದೆ. ಈ ಚುನಾವಣೆ ಯಲ್ಲಿ ಯುವಕರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಮುಖಂಡರಾದ ಪ್ರಕಾಶ್, ಸಂತೋಷ್, ಸಚಿನ್,ಈರಣ್ಣ ಬಡದಾಳ, ಸಾಬಣ್ಣಾ, ದೇವಪ್ಪಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು .

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here