ಬಿಜೆಪಿ: ಪಕ್ಷದ ಮುಖಂಡರನ್ನು ಕಡೆಗಣಿಸಿದಕ್ಕೆ ರಾಜೀನಾಮೆ

0
245

ಶಹಾಬಾದ: ಭಂಕೂರ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದಕ್ಕೆ ಮತ್ತು ಆಯ್ಕೆ ಮಾಡುವಲ್ಲಿ ಪಕ್ಷದ ಹಿರಿಯ ಮುಖಂಡರ ಅಭಿಪ್ರಾಯ ಕೇಳದಿರುವುದಕ್ಕೆ ಚಿತ್ತಾಪೂರ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಪಾಟೀಲ, ಭಂಕೂರ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ವಿರೇಶ ಹಿರೇಮಠ ಹಾಗೂ ಚಿತ್ತಾಪೂರ ಯುವ ಮೋರ್ಚಾ ಉಪಾಧ್ಯಕ್ಷ ಉಮೇಶ ಪೂಜಾರಿ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಲಿದ್ದೆವೆ ಎಂದು ಚಿತ್ತಾಪೂರ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಪಾಟೀಲ ಇತರರು ಸುದ್ದಿಗಾರರಿಗೆ ತಿಳಿಸಿದರು.

ಭಂಕೂರ ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಸ್ಥಾನಕ್ಕೆ ರವಿವಾರ ನಡೆದ ಸಭೆಯಲ್ಲಿ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರನ್ನು ತಾಲೂಕಾ ಅಧ್ಯಕ್ಷ ಕಡೆಗಣಿಸಿದ್ದಾರೆ. ಅಲ್ಲದೇ ಆಯ್ಕೆ ಮಾಡುವ ಸಂದರ್ಭದಲ್ಲಿ ಈ ಬಗ್ಗೆ ಪಕ್ಷದ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಪಾಟೀಲ, ಶಂಕರಗೌಡ ಶಂಕರವಾಡಿ ಅವರ ಅಭಿಪ್ರಾಯವೂ ಕೇಳಿಲ್ಲ. ಹಾಗೇ ಸಭೆಯ ಬಗ್ಗೆ ತಿಳಿಸಿಲ್ಲ.

Contact Your\'s Advertisement; 9902492681

ಪಕ್ಷದ ಸಿದ್ಧಾಂತದ ವಿರುದ್ಧವಾಗಿ ಆಯ್ಕೆ ಪ್ರಕ್ರಿಯೆ ನಡೆದಿರುವುದಕ್ಕೆ ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದರಿಂದ ನಮ್ಮೆಲ್ಲರಿಗೂ ಅಸಮಾಧಾನವಾಗಿದೆ. ಆದ್ದರಿಂದ ಮನನೊಂದು ಚಿತ್ತಾಪೂರ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಪಾಟೀಲ, ಭಂಕೂರ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ವಿರೇಶ ಹಿರೇಮಠ ಹಾಗೂ ಚಿತ್ತಾಪೂರ ಯುವ ಮೋರ್ಚಾ ಉಪಾಧ್ಯಕ್ಷ ಉಮೇಶ ಪೂಜಾರಿ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಲಿದ್ದೆವೆ. ಪಕ್ಷದ ಸಾಮನ್ಯ ಕಾರ್ಯಕರ್ತರಾಗಿ ಪಕ್ಷವನ್ನು ಸಂಘಟಿಸುತ್ತೆವೆ.

ಈ ಸಂದರ್ಭದಲ್ಲಿ ಶಿವಕುಮಾರ ಟೆಂಗಳಿ, ಶಾಂತು ಸೌಕಾರ, ಚಂದ್ರಕಾಂತ ಮಚಾನೂರ, ವಿಜಯಕುಮಾರ ಗುತ್ತೆದಾರ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here