ಸಾಧನೆ ಎಂಬುದು ಸಾಧಕನ ಸ್ವತ್ತು: ನೀಲಕಂಠರಾವ ಪಾಟೀಲ

ಶಹಾಬಾದ: ಸಾಧನೆ ಎಂಬುದು ಯಾರ ಸ್ವತ್ತಲ್ಲ.ಅದು ಸಾಧಕನ ಸ್ವತ್ತು ಎಂಬುದಕ್ಕೆ ಭಂಕೂರ ಗ್ರಾಮದ ಚೇತನ.ಎಸ್.ರಾವೂರ ಅವರೇ ಉದಾಹರಣೆಯಾಗಿದ್ದಾರೆ ಎಂದು ಚಿತ್ತಾಪೂರ ಬಿಜೆಪಿ ಅಧ್ಯಕ್ಷ ನೀಲಕಂಠರಾವ ಪಾಟೀಲ ಹೇಳಿದರು.

ಅವರು ರವಿವಾರ ಭಂಕೂರ ಗ್ರಾಮದ ಚೇತನ್ ಶರಣಪ್ಪ ರಾವೂರ್ ಅವರು ಭಾರತೀಯ ವಾಯುಸೇನೆಗೆ ಆಯ್ಕೆಯಾಗಿದ್ದಕ್ಕೆ ಭಂಕೂರ ಗ್ರಾಮದ ವತಿಯಿಂದ ಆಯೋಜಿಸಲಾದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ಪ್ರತಿಭೆಯ ಅನಾವರಣಕ್ಕೆ ಇಂದು ವಿಭಿನ್ನ ಅವಕಾಶಗಳಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸಮುದಾಯದ ಸಹಕಾರವನ್ನು ಪರಿಪೂರ್ಣವಾಗಿ ಪಡೆದು ಶೈಕ್ಷಣಿಕ ಸಾಧನೆಗೆ ಬಳಸಿಕೊಳ್ಳಬೇಕು ಎಂದರು.

ಭಂಕೂರ ಗ್ರಾಪಂ ಸದಸ್ಯ ಲಕ್ಷ್ಮಿಕಾಂತ ಕಂದಗೂಳ ಮಾತನಾಡಿ, ಸಾಧನೆಗೆ ಬೇಕಿರುವುದು ಗಂಭೀರ ಆಸಕ್ತಿ. ಸಾಧನೆ ಸಾಧಕನ ಸ್ವತ್ತೇ ವಿನಃ ಸೋಮಾರಿಯ ಸ್ವತ್ತಲ್ಲ. ಶೈಕ್ಷಣಿಕವಾಗಿ ಇಂದು ಅನೇಕ ಅವಕಾಶಗಳಿದ್ದು ಪರಿಪೂರ್ಣ ಮಾಹಿತಿಯೊಂದಿಗೆ ಲಭ್ಯ ಅವಕಾಶಗಳನ್ನು ಬಳಸಿಕೊಳ್ಳುವ ಚಿಂತನೆ ವಿದ್ಯಾರ್ಥಿಗಳಲ್ಲಿ ಬರಬೇಕು. ನಿರಂತರ ಪರಿಶ್ರಮ ಮತ್ತು ವಿಭಿನ್ನ ಆರೋಗ್ಯಕರ ಚಿಂತನೆಗಳು ಮನುಷ್ಯನನ್ನು ಪರಿಪೂರ್ಣನನ್ನಾಗಿಸುತ್ತವೆ. ಕನಸುಗಳನ್ನು ಸಾಕಾರಗೊಳಿಸಿಕೊಳ್ಳುವ ಸಾಧನೆ ಎಲ್ಲರ
ಆದ್ಯತೆಯಾಗಿರಬೇಕು. ಮಹತ್ತನ್ನೇ ಯೋಚಿಸಬೇಕು. ಆಗ ಮಾತ್ರ ಸಣ್ಣ ಪ್ರಮಾಣದ ಸಾಧನೆಯಾದರೂ ಕೈಗೆಟುಕುತ್ತದೆ ಎಂದರು.

ಗ್ರಾಪಂ ಸದಸ್ಯ ಈರಣ್ಣ ಕಾರ್ಗಿಲ್ ಮಾತನಾಡಿ, ಪರಿಶ್ರಮದ ಬದುಕು ಯಾವಾಗಲೂ ಉತ್ತಮವಾದ ಭವಿಷ್ಯವನ್ನೇ ಕೊಡುತ್ತದೆ. ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವೈವಿಧ್ಯಮಯ ಆಯ್ಕೆಗಳ ಸಾಧ್ಯಾಸಾಧ್ಯತೆಯನ್ನು ಅರಿತುಕೊಳ್ಳಬೇಕು. ಆ ಮೂಲಕ ಸಾಮಾಜಿಕ ಕ್ಷೇತ್ರದಲ್ಲೂ ಗುರ್ತಿಸಿಕೊಳ್ಳುವಂತಾಗಬೇಕು. ಶೈಕ್ಷಣಿಕ ಸಾಧನೆ ನಿಂತನೀರಾಗ ಬಾರದು. ನಿರಂತರತೆಯನ್ನು ಕಾಯ್ದುಕೊಳ್ಳಬೇಕು ಎಂದರು.

ಯಲ್ಲಾಲಿಂಗ ನಾಗೂರ್, ಪ್ರಕಾಶ ಪಾಟೀಲ, ಸಂತೋμï ಕಲಶೆಟ್ಟಿ, ಈರಪ್ಪ ಹೂಗಾರ್. ಮಲ್ಲಿಕಾರ್ಜುನ ಶಿರಗೊಂಡ, ಭರತ್ ಮುತ್ತಗಾ, ಮಂಜುನಾಥ ರೆಡ್ಡಿ, ಗಂಗಾರಾಮ, ಶಿವಕುಮಾರ ಟೆಂಗಳಿ,ಮಲ್ಲಿಕಾರ್ಜುನ ಮಾಲಗತ್ತಿ, ಚಂದ್ರಕಾಂತ ಮಾಚನೂರ,ಉಮೇಶ ಗುತ್ತೆದಾರ, ಪ್ರಶಾಂತ ಮಾನಕರ್ ಸೇರಿದಂತೆ ಇತರರು ಹಾಜರಿದ್ದರು.

emedialine

Recent Posts

ಬಾಪೂಜಿ ರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆ ವಿಶೇಷ ಗಾಂಧಿಜಿ ಶಾಸ್ತ್ರೀಜಿ ಜಯಂತಿ ಆಚರಣೆ

ಸುರಪುರ: ಬಾಪೂಜಿ ರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆಯಿಂದ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ವಿಶೇಷವಾಗಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್…

39 mins ago

ಜನಪದ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಪ್ರೊ. ಶೋಭಾದೇವಿ ಚೆಕ್ಕಿ ಆಯ್ಕೆ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನವೆಂಬರ್ ಮೊದಲ ವಾರದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿರುವ ಒಂದು ದಿನದ ಕಲಬುರಗಿ ಜಿಲ್ಲಾ ಪ್ರಥಮ…

42 mins ago

ರೈತರಿಗೆ ಪಲ್ಸ್ ಮ್ಯಾಜಿಕ್ ವಿತರಣೆ

ಕಲಬುರಗಿ: ಕೃಷಿ ವಿಜ್ಞಾನ ಕೇಂದ್ರ, ರದ್ದೇವಾಡ್ಗಿಯಲ್ಲಿ ಪಿಎಮ್ ಕಿಸಾನ್ ಸಮ್ಮಾನ್ ನಿಧಿ 18ನೇ ಕಂತು ಬಿಡುಗಡೆ ಕಾರ್ಯಕ್ರಮದ ನೇರ ಪ್ರಸಾರದ…

4 hours ago

ಗುಡ್ಡಾಪುರ ದಾನಮ್ಮ ದೇವಿಯ ತೊಟ್ಟಿಲ

ಕಲಬುರಗಿ: ಶಿವಯೋಗ ಸಾಧನೆ, ದಾಸೋಹ, ಕಾಯಕ ನಿಷ್ಠೆ, ಸತ್ಯ- ಧರ್ಮ-ನ್ಯಾಯ ಮೊದಲಾದ ಅಷ್ಟಗುಣಗಳನ್ನು ಅಳವಡಿಸಿಕೊಂಡು ಬದುಕಿದ ಶರಣೆ ಗುಡ್ಡಾಪೂರ ದಾನಮ್ಮ. 12…

4 hours ago

ಅ.8 ರಂದು ದಸರಾ ಕಾವ್ಯ ಸಂಭ್ರಮ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಅ.8 ರಂದು ಇಳಿಹೊತ್ತು 4.15 ಕ್ಕೆ ನಗರದ ಕನ್ನಡ ಭವನದ ಸಾಹಿತ್ಯ…

4 hours ago

ಕೃಷಿ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನ 16ನೇ ಸಂಸ್ಥಾಪನಾ ದಿನಾಚರಣೆಯನ್ನು 22ನೇ ನವೆಂಬರ್ 2024 ರಂದು ರಾಯಚೂರು ಮುಖ್ಯ ಆವರಣದಲ್ಲಿ…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420