ಶಹಾಬಾದ: ಪ್ರತಿಯೊಬ್ಬರು ವ್ಯಕ್ತಿಗತ ಸ್ವಚ್ಛತೆ ಹಾಗೂ ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ ಕೋವಿಡ್ 3ನೇ ಅಲೆ ಬಾರದಂತೆ ಸಹಕರಿಸಬೇಕೆಂದು ತಹಸೀಲ್ದಾರ ಸುರೇಶ ವರ್ಮಾ ಕಾರ್ಮಿಕರಿಗೆ ನೀಡಿದರು.
ಅವರು ನಗರದ ಸಿಬರಕಟ್ಟ ಬಡಾವಣೆಯ ನಿಜಲಿಂಗಮ್ಮ ದೇವಸ್ಥಾನದ ಆವರಣದಲ್ಲಿ ಕಾರ್ಮಿಕ ಇಲಾಖೆ ಕಲಬುರಗಿ, ಸಂಸ್ಕಾರ ಪ್ರತಿμÁ್ಠನ ಹಾಗೂ ಜಾಗೃತಿ ಯುವ ಸೇವಾಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಟ್ಟಡ ಕಾರ್ಮಿಕರು ಕೂಲಿಕಾರ್ಮಿಕರು ಹಾಗೂ ವಲಸೆ ಕಾರ್ಮಿಕರಿಗೆ ಸುರಕ್ಷಾ ಕಿಟ್ಗಳನ್ನು ವಿತರಿಸಿ ಮಾತನಾಡಿದರು.ಸಲಾಯಿತು.
ಕಾರ್ಮಿಕರ ಅಭಿವೃದ್ಧಿಗಾಗಿ ಇಲಾಖೆಯು ಸಾಕಷ್ಟು ಸೌಕರ್ಯಗಳನ್ನು ಕಲಿಸಿದೆ.ಅವರ ರಕ್ಷಣೆಯ ದೃಷ್ಠಿಯಿಂದ ಸುರಕ್ಷಾ ಕಿಟ್ಗಳನ್ನು ವಿತರಣೆ ಮಾಡಲಾಗುತ್ತಿದೆ.ಯಾವುದೇ ಕಾರಣಕ್ಕೂ ಕಿಟ್ಗಳನ್ನು ದುರುಪಯೋಗಪಡಿಸಿಕೊಳ್ಳದೇ ಬಳಕೆ ಮಾಡುವ ಮೂಲಕ ಜೀವ ರಕ್ಷಣೆಗೆ ಮುಂದಾಗಬೇಕಂದು ಹೇಳಿದರು.
ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಮಾತನಾಡಿ,ಜಗತ್ತಿನಾದ್ಯಂತ ವ್ಯಾಪಿಸಿದ್ದ ಮೊದಲ ಹಾಗೂ ಎರಡನೇ ಕೊರೋನಾ ಅಲೆಯಿಂದಾಗಿ ಜನರು ಹಲವು ಸಂಕಷ್ಟಗಳನ್ನು ಎದುರಿಸಿದ್ದಾರೆ. ಹಾಗಾಗಿ 3ನೇ ಅಲೆ ಬಾರದಂತೆ ನಾವು ಎಚ್ಚರಿಕೆ ವಹಿಸಬೇಕಾಗಿದೆ ಎಂದು ತಜ್ಞರು ಸೂಚಿಸಿದ್ದು, ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಜಾಗೃತರಾಗಬೇಕು ಎಂದು ತಿಳಿಸಿದರು.
ಸಂಸ್ಕಾರ ಪ್ರತಿμÁ್ಠನದ ವಿಠ್ಠಲ್ ಚಿಕಣಿ, ಜಾಗೃತಿ ಯುವ ಸೇವಾ ಸಂಸ್ಥೆಯ ಹಣಮಂತ ಜಾಧವ, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣಾ ನಾಟೀಕಾರ, ಭಗವಾನ ದಂಡಗೂಲಕರ್, ರಾಮಸ್ವಾಮಿ ದೇವಕರ್, ರಾಮಣ್ಣ ಇಬ್ರಾಹಿಂಪುರ, ಯಲ್ಲಪ್ಪ ಬಾಂಬೆ, ದುರ್ಗಪ್ಪ ದೇವಕರ, ನಾಗರಾಜ ಕುಸಾಳೆ, ದುರ್ಗಪ್ಪ ಪವಾರ, ರಮೇಶ ಪವಾರ,ಸಂಜಯ ವಿಟ್ಕರ್, ಮೈಲಾರಿ, ಇತರರು ಉಪಸ್ಥಿತರಿದ್ದರು.
ಕಲಬುರಗಿ: ಕೃಷಿ ವಿಜ್ಞಾನ ಕೇಂದ್ರ, ರದ್ದೇವಾಡ್ಗಿಯಲ್ಲಿ ಪಿಎಮ್ ಕಿಸಾನ್ ಸಮ್ಮಾನ್ ನಿಧಿ 18ನೇ ಕಂತು ಬಿಡುಗಡೆ ಕಾರ್ಯಕ್ರಮದ ನೇರ ಪ್ರಸಾರದ…
ಕಲಬುರಗಿ: ಶಿವಯೋಗ ಸಾಧನೆ, ದಾಸೋಹ, ಕಾಯಕ ನಿಷ್ಠೆ, ಸತ್ಯ- ಧರ್ಮ-ನ್ಯಾಯ ಮೊದಲಾದ ಅಷ್ಟಗುಣಗಳನ್ನು ಅಳವಡಿಸಿಕೊಂಡು ಬದುಕಿದ ಶರಣೆ ಗುಡ್ಡಾಪೂರ ದಾನಮ್ಮ. 12…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಅ.8 ರಂದು ಇಳಿಹೊತ್ತು 4.15 ಕ್ಕೆ ನಗರದ ಕನ್ನಡ ಭವನದ ಸಾಹಿತ್ಯ…
ಕಲಬುರಗಿ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನ 16ನೇ ಸಂಸ್ಥಾಪನಾ ದಿನಾಚರಣೆಯನ್ನು 22ನೇ ನವೆಂಬರ್ 2024 ರಂದು ರಾಯಚೂರು ಮುಖ್ಯ ಆವರಣದಲ್ಲಿ…
ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…
ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…