ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ ಲಿಂಗರಾಜ ಶಾಸ್ತ್ರೀ  ಸಂತಾಪ ಸಭೆ

ಕಲಬುರಗಿ: ಬೀದರ ಜಿಲ್ಲೆಯ ಬಸವಕಲ್ಯಾಣದ ಬಳಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಡಾ.ಲಿಂಗರಾಜ ಶಾಸ್ತ್ರೀ ಅವರಿಗೆ ಸಂತಾಪ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು ಮತ್ತು ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಸಂತಾಪ ಸಭೆಯಲ್ಲಿ ಭಾ?ಣಕಾರರು ಬಹುಮುಖ ವ್ಯಕ್ತಿತ್ವದ ಡಾ. ಲಿಂಗರಾಜ ಶಾಸ್ತ್ರೀಯವರು ವಿಶ್ವವಿದ್ಯಾಲಯಕ್ಕೆ ನೀಡಿದ ಕೊಡುಗೆ ಸ್ಮರಿಸಿದರು.

ಡಾ.ಶಾಸ್ತ್ರೀಯವರ ಸಹಪಾಠಿಯಾಗಿದ್ದ ಶgಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಅವರು ಡಾ. ಶಾಸ್ತ್ರಿಯವರ ವಿದ್ಯಾರ್ಥಿ ಜೀವನ, ರಾಜಕೀಯ ನಡೆ ಮತ್ತು ಶಿಕ್ಷಣ ತಜ್ಞರಾಗಿ ಸಲ್ಲಿಸಿದ ಸೇವೆಯನ್ನು ಸ್ಮರಿಸಿ ತಮ್ಮ ಜೊತೆಗಿದ್ದ ಅವರ ದೀರ್ಘ ಒಡನಾಟವನ್ನು ನೆನಪಿಸಿಕೊಂಡರು. ಡಾ.ಶಾಸ್ತ್ರೀಯವರ ಸಾವು ನನಗೆ ವೈಯಕ್ತಿಕವಾಗಿ ತೀವ್ರ ದುಃಖ ತಂದಿದೆ ಇದು ತುಂಬಲಾರದ ನ? ಎಂದರು.

ಡಾ.ಶಾಸ್ತ್ರೀಯವರು ತಮ್ಮ ವಿದ್ಯಾರ್ಥಿ ದಿನಗಳಲ್ಲಿಯೂ, ವಿದ್ಯಾರ್ಥಿ ನಾಯಕರಾಗಿ ಮತ್ತು ರಾಜಕೀಯ ಕಾರ್ಯಕರ್ತರಾಗಿ, ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮ ಚಾಣಾಕ್ಷತೆಯನ್ನು ಪ್ರದರ್ಶಿಸುತ್ತಿದ್ದರು. ಹಲವು ವ?ಗಳ ಕಾಲ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಡಾ. ಶಾಸ್ತ್ರೀಯವರು ತಮ್ಮನ್ನು ತಾವು ಶಿಕ್ಷಣತಜ್ಞರಾಗಿ ಪರಿವರ್ತಿಸಿ ಉತ್ತಮ ಶಿಕ್ಷಕರಾಗಿ ಅನೇಕರ ಮೆಚ್ಚುಗೆಯನ್ನು ಗಳಿಸಿದ್ದಾರೆ ಎಂದು ಶ್ರೀ ದೇಶಮುಖ ಹೇಳಿದರು. ಅವರ ಅಕಾಲಿಕ ಮರಣವು ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಮತ್ತು ಶರಣಬಸವ ವಿಶ್ವವಿದ್ಯಾಲಯಕ್ಕೆ ತುಂಬಲಾರದ ನ?ವಾಗಿದೆ.

ವಿಶ್ವವಿದ್ಯಾಲಯದ ಕುಲಪತಿ ಡಾ.ನಿರಂಜನ.ವಿ.ನಿಷ್ಠಿ ಅವರು ಸಂತಾಪ ಸಭೆಯಲ್ಲಿ ಮಾತನಾಡುತ್ತಾ ಉತ್ತಮ ಆಡಳಿತಗಾರರಾಗಿದ್ದ ಡಾ.ಶಾಸ್ತ್ರೀಯವರ ಸಾವಿನ ಸುದ್ದಿಯನ್ನು ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರಿಗೆ ತಿಳಿಸಿದಾಗ ತೀವ್ರ ಅಘಾತ ವ್ಯಕ್ತಪಡಿಸಿ ಅವರು ಹೇಳಿದ ಮೊದಲ ಪದವೆಂದರೆ, ಡಾ.ಶಾಸ್ತ್ರೀಯವರ ಮಕ್ಕಳನ್ನು ಸಂಘ ಮತ್ತು ವಿಶ್ವವಿದ್ಯಾಲಯ ನೋಡಿಕೊಳ್ಳಬೇಕು ಎಂದು ಹೇಳಿದರು.

ವಿಶ್ವವಿದ್ಯಾಲಯದ ಕುಲಸಚಿವ ಡಾ. ಅನಿಲಕುಮಾರ ಬಿಡವೆ ಅವರು ತಮ್ಮ ಭಾ?ಣದಲ್ಲಿ ಕಳೆದ ಒಂದು ದಶಕಕ್ಕೂ ಹೆಚ್ಚು ಕಾಲ ಆಪ್ತರಾಗಿದ್ದ ಡಾ.ಶಾಸ್ತ್ರೀಯವರ ಸಾವು ನನಗೆ ವೈಯಕ್ತಿಕ ನ? ಉಂಟುಮಾಡಿದೆ ಮತ್ತು ಅವರ ಒಡನಾಟದ ನೆನಪುಗಳು ಸ್ಮೃತಿಪಟಲದಲ್ಲಿ ಶಾಶ್ವತವಾಗಿ ಅಚ್ಚಳಿಯದೆ ಉಳಿಯುತ್ತವೆ, ಅವರು ತುಂಬಾ ಒಳ್ಳೆಯ ಮನಸ್ಸಿನವರಾಗಿದ್ದರು ಎಂದರು.

ಡಾ.ಬಿಡವೆ ಅವರು ಮಾತನಾಡುತ್ತಾ ಡಾ.ಶಾಸ್ತ್ರೀಯವರ ರಾಜಕೀಯದ ಸುದೀರ್ಘ ಅವಧಿಯಲ್ಲಿ ಎಲ್ಲರ ಜೊತೆ ನಿಕಟ ಸಂಪರ್ಕ ಹೊಂದಿದ್ದು ಸರ್ಕಾರದ ಮಟ್ಟದಲ್ಲಿ ವಿಶ್ವವಿದ್ಯಾಲಯದ ಕೆಲಸಗಳನ್ನು ಸುಲಭವಾಗಿ ಕೈಗೊಳ್ಳಲು ಬಹಳ ಸಹಾಯಕವಾಗಿವೆ ಎಂದು ಹೇಳಿದರು. ಸಮ-ಕುಲಪತಿ ಪ್ರೊ ವಿ.ಡಿ.ಮೈತ್ರಿ ಅವರು ತಮ್ಮ ಭಾ?ಣದಲ್ಲಿ ಡಾ.ಶಾಸ್ತ್ರೀ ಬಿಕ್ಕಟ್ಟಿನ ಸಮಯದಲ್ಲಿ ಅವಲಂಬಿಸಬೇಕಾದ ವ್ಯಕ್ತಿ ಮತ್ತು ಅವರ ಮುಖದಲ್ಲಿ ಎಂದೆಂದಿಗೂ ಮುಗುಳ್ನಗೆಯೊಂದಿಗೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುತ್ತಿದ್ದರು ಎಂದು ಹೇಳಿದರು.

ಡಾ.ಶಾಸ್ತ್ರೀಯವರ ನೆನಪುಗಳನ್ನು ವಿಶ್ವವಿದ್ಯಾಲಯ ಮತ್ತು ಸಂಘದಲ್ಲಿ ಅವರ ಜೊತೆ ಸಂಬಂಧ ಹೊಂದಿದ್ದವರ ಮನಸ್ಸಿನಿಂದ ತೆಗೆದುಹಾಕಲು ಬಹಳ ಸಮಯ ತೆಗೆದುಕೊಳ್ಳಬಹುದು ಎಂದು ಹೇಳಿದರು. ವಿವಿ ಡೀನ್ ಡಾ.ಲಕ್ಷ್ಮೀ ಪಾಟೀಲ ಮಾಕಾ ತಮ್ಮ ಭಾ?ಣದಲ್ಲಿ ಡಾ ಶಾಸ್ತ್ರಿ ಇನ್ನಿಲ್ಲವೆಂದು ನಂಬಲು ಸಾಧ್ಯವಾಗುತ್ತಿಲ್ಲ ಮತ್ತು ಅವರ ಸಾವು ವಿಶ್ವವಿದ್ಯಾಲಯ ಮತ್ತು ಸಂಘದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಗೂ ಆಘಾತ ತಂದಿದೆ ಎಂದು ಹೇಳಿದರು.

ಹಣಕಾಸು ಅಧಿಕಾರಿ ಪ್ರೊಫೆಸರ್ ಕಿರಣ್ ಮಕಾ ಅವರು ತಮ್ಮ ನುಡಿಗಳಲ್ಲಿ ಡಾ. ಶಾಸ್ತ್ರಿಯವರು ಸರ್ಕಾರಿ ಕಚೇರಿಗಳಲ್ಲಿ ವ್ಯಾಪಕ ಸಂಪರ್ಕ ಹೊಂದಿದ್ದರು ಮತ್ತು ಇದು ವಿಶ್ವವಿದ್ಯಾಲಯದ ಹಲವು ಪ್ರಸ್ತಾವನೆಗಳಿಗೆ ಸರಕಾರದ ಮಟ್ಟದಲ್ಲಿ ಅನುಮತಿಗಳನ್ನು ಪಡೆಯಲು ಸಹಾಯವಾಗುತ್ತಿತ್ತು ಎಂದರು. ಡೀನ್ ಡಾ.ಬಸವರಾಜ ಮಠಪತಿ ಮತ್ತು ಆಂಗ್ಲ ವಿಭಾಗದ ಡೀನ್ ಡಾ.ಎಸ್.ಜಿ.ಡೊಳ್ಳೇಗೌಡರ ಈ ಸಂದರ್ಭದಲ್ಲಿ ಮಾತನಾಡಿದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

1 hour ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

4 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

9 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

9 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

11 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420