ಅಧಿಕಾರಕ್ಕಾಗಿ ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ; ಯು.ಬಸವರಾಜ್

0
232

ಬೆಂಗಳೂರು: ಭೀಕರ ಬರಗಾಲಕ್ಕೆ ನಲುಗಿರುವ ಜನತೆಯ ಸಂಕಷ್ಟಗಳಿಗೆ ಸ್ಪಂಧಿಸಬೇಕಿದ್ದ ಶಾಸಕರು ಹಾಗೂ ವಿರೋಧ ಪಕ್ಷ ಬಿಜೆಪಿ ಅಧಿಕಾರಕ್ಕಾಗಿ ಸರ್ಕಾರವನ್ನು ಅಸ್ಥಿರಗೊಳಿಸಲಾಗುತ್ತಿದೆ ಎಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಯು.ಬಸವರಾಜ್ ಟೀಕಿಸಿದ್ದಾರೆ.

Contact Your\'s Advertisement; 9902492681

ರಾಜ್ಯ ಭೀಕರ ಬರಗಾಲವನ್ನೆದುರಿಸುತ್ತಿದೆ ಮತ್ತು ರೈತರ ಆತ್ಮಹತ್ಯೆಗಳು ಹೆಚ್ಚುತ್ತಿವೆ. ಇಂತಹ ಸಂದರ್ಭದಲ್ಲಿ ಜನಪ್ರತಿನಿಧಿಗಳಾದ ರಾಜ್ಯದ ಶಾಸಕರು ಮತ್ತು ವಿರೋಧ ಪಕ್ಷ ಬಿಜೆಪಿ, ಮುಂಬರುವ ವಿಧಾನ ಸಭಾ ಅಧಿವೇಶನದಲ್ಲಿ ರಚನಾತ್ಮಕ ಚರ್ಚೆಯಲ್ಲಿ ತೊಡಗಿ ಜನತೆಗೆ ಸರಿಯಾದ ಪರಿಹಾರ ಹುಡುಕ ಬೇಕಾಗಿತ್ತು. ಆದರೆ ಅದರ ಬದಲಾಗಿ ಜನಪರವಾದ ಈ ಕೆಲಸಗಳನ್ನು ಸಂಪೂರ್ಣಾವಾಗಿ ಕಡೆಗಣಿಸಿ, ಕೇವಲ ಅಧಿಕಾರದಾಹಿ ಮನೋಭಾವದಿಂದ ಕೆಲ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು, ರಾಜ್ಯಪಾಲರಿಗೆ ರಾಜಿನಾಮೆ ನೀಡುವ ಮೂಲಕ ರಾಜ್ಯದ ಮೈತ್ರಿ ಸರಕಾರವನ್ನು ಅಸ್ಥಿರಗೊಳಿಸಲಾಗುತ್ತಿದೆ. ಬಿಜೆಪಿಯ ಪ್ರಯತ್ನಕ್ಕೆ ಕುಮ್ಮಕ್ಕು ನೀಡಿದ ರಾಜ್ಯದ ರಾಜಕಿಯ ಬೆಳವಣಿಗೆ ತೀವ್ರ ನಾಚಿಕೆಗೇಡಿನದ್ದಾಗಿದ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಬಲವಾಗಿ ಖಂಡಿಸಿದೆ ಎಂದರು.

ಈ ಬೆಳವಣಿಗೆ ರಾಜ್ಯದ ಮತದಾರರು ಮತನೀಡಿ ಇವರನ್ನು ಅಯ್ಕೆ ಮಾಡಿದ್ದುದರ ಕರ್ತವ್ಯದ ತೀವ್ರ ದುರುಪಯೋಗವಾಗಿದೆ. ಮತದಾರರು ಇದನ್ನು ಗಮನಿಸಲಿದ್ದಾರೆಂಬ ಕನಿಷ್ಠ ಭಯವು ಇಲ್ಲದ ನಿರ್ಲಜ್ಯ ನಡೆಯಾಗಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.

ನಿರಂತರವಾಗಿ ರಾಜ್ಯ ಮೈತ್ರಿ ಸರಕಾರಕ್ಕೆ ಅಗತ್ಯ ಮತದಾರರ ಬೆಂಬಲವಿಲ್ಲವೆಂದು ಸುಳ್ಳು ಹೇಳಿ ಜನರನ್ನು ವಂಚಿಸುತ್ತಿರುವ ಮತ್ತು ರಾಜ್ಯ ಸರಕಾರವನ್ನು ಅಸ್ಥಿರಗೊಳಿಸುವ ಮತ್ತು ಶಾಸಕರನ್ನು ಖರೀದಿಸುವ ಕುದುರೆ ವ್ಯಾಪಾರಕ್ಕೆ ಪ್ರಚೋದನೆ ನೀಡುವುದನ್ನೇ ಕಾಯಕ ಮಾಡಿಕೊಂಡಿರುವ ವಿರೋಧ ಪಕ್ಷ ಬಿಜೆಪಿ ಮತ್ತು ಅದರ ಮುಖಂಡತ್ವಕ್ಕೆ ಹಾಗೂ ಇಂತಹ ಅಧಿಕಾರದಾಹಿ ಮನೋಭಾವದ ಮತ್ತು ತಮ್ಮನ್ನೇ ಮಾರಾಟಕ್ಕಿಟ್ಟುಕೊಂಡ ಶಾಸಕರಿಗೆ ಸರಿಯಾದ ಪಾಠವನ್ನು ಕಲಿಸಬೇಕೆಂದು ಜನತೆಗೆ ಕರೆ ನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here