ಶಹಾಬಾದ: ಲಸಿಕೆ ತೆಗೆದುಕೊಳ್ಳಲು ನಿರಾಸಕ್ತಿ ತೋರುವ ಜನರನ್ನು ಆಯಾ ವಾರ್ಡನ ನಗರಸಭೆಯ ಎಲ್ಲಾ ಸರ್ವ ಸದಸ್ಯರು ಲಸಿಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಪ್ರೇರೇಪಿಸಿ ಲಸಿಕೆ ತೆಗೆದುಕೊಳ್ಳುವಂತೆ ಮಾಡಿ ಸಹಕರಿಸಿ ಎಂದು ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.
ಅವರು ಮಂಗಳವಾರ ಕೋವಿಡ್ ಲಸಿಕಾ ಅಭಿಯಾನದ ನಿಮಿತ್ತ ನಗರಸಭೆಯ ಸಭಾಂಗಣದಲ್ಲಿ ಆಯೋಜಿಸಲಾದ ಸಭೆಯಲ್ಲಿ ಮಾತನಾಡಿದರು.
ಇದೇ ಸೆಪ್ಟೆಂಬರ್ 17 ರಂದು ನಡೆಸಿದ ಲಸಿಕಾ ಅಭಿಯಾನದಲ್ಲಿ ಗುರಿ ಮುಟ್ಟಲು ಸಾಧ್ಯವಾಗಿಲ್ಲ. ಜನರು ಬರಲು ಮುಂದಾಗುತ್ತಿಲ್ಲ.ಅಲ್ಲದೇ ಲಸಿಕೆ ಬಗ್ಗೆ ತಪ್ಪು ಸಂದೇಶಗಳನ್ನು ಹರಡಿಸಿದ್ದಾರೆ. ಕೆಲವು ಜನರು ಅಸಡ್ಡೆ, ನಿರಾಸಕ್ತಿ ತೋರುತ್ತಿರುವುದು ಕಂಡು ಬರುತ್ತಿದೆ. ಕೋವಿಡ್ ಮೂರನೇ ಅಲೆ ಬರುವ ಮುನ್ನವೇ ನಗರದಲ್ಲಿ ಎಲ್ಲರೂ ಲಸಿಕೆ ಪಡೆದರೆ, ಕೋವಿಡ್ ವಿರುದ್ಧ ಹೋರಾಡುವ ರೋಗ ನಿರೋಧಕ ಶಕ್ತಿ ಉಂಟಾಗುತ್ತದೆ.
ಆದ್ದರಿಂದ ತಮ್ಮ ತಮ್ಮ ವಾರ್ಡಗಳಲ್ಲಿ ಲಸಿಕೆ ತೆಗೆದುಕೊಳ್ಳದ ಜನರನ್ನು ಗುರುತಿಸಿ, ಲಸಿಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಪ್ರೇರೇಪಿಸಿ ತೆಗೆದುಕೊಳ್ಳುವಂತೆ ಮಾಡುವುದು ಮತ್ತು ಕೋವಿಡ್ ಮುಕ್ತ ವಾರ್ಡ ಆಗಿ ಮಾಡುವುದು ನಿಮ್ಮ ಕರ್ತವ್ಯ. ಅದನ್ನು ಯಶಸ್ವಿಯಾಗಿ ಮಾಡಲು ಎಲ್ಲರ ಸಹಕಾರ ಮುಖ್ಯ ಎಂದು ಹೇಳಿದರು.
ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಮಾತನಾಡಿ, ಸರ್ಕಾರ ಸಾರ್ವಜನಿಕರಿಗೋಸ್ಕರ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದು ಇದರ ಸದುಪಯೋಗವಾಗುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು.
ಕೋವಿಡ್ ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮವಿಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡಿ. ಅಲ್ಲದೇ ಸಮುದಾಯದಲ್ಲಿ ಕೋವಿಡ್ ಹರಡದಂತೆ ಮಾಡಲು ಕೋವಿಡ್ ಲಸಿಕೆ ಪಡೆಯುವುದು ಅಗತ್ಯವಿದೆ ಎಂದು ಹೇಳಿದರು.
ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಉಪಾಧ್ಯಕ್ಷೆ ಸಲೀಮಾ ಬೇಗಂ, ಪರಿಸರ ಅಭಿಯಂತರ ಮುಜಾಮಿಲ್ ಅಲಂ, ಎಇ ಶಾಂತರೆಡ್ಡಿ ದಂಡಗುಲಕರ್, ವ್ಯವಸ್ಥಾಪಕ ಶರಣಗೌಡ ಪಾಟೀಲ ಸೇರಿದಂತೆ ನಗರಸಭೆಯ ಸರ್ವ ಸದಸ್ಯರು ಇದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…