ಬಿಸಿ ಬಿಸಿ ಸುದ್ದಿ

ಅಪ್ಪ ಮಗನ ಪುಸ್ತಕ ಬಿಡುಗಡೆಗೆ ಬಂದವರು ಏನಂದರು ಗೊತ್ತಾ?

ಕಲಬುರಗಿ: ಈ ಜಗತ್ತಿನಲ್ಲಿ ಪುಸ್ತಕಗಳು ಮನುಕುಲದ ವಿಕಾಸ, ಬೆಳವಣಿಗೆ ಮಾಡಿವೆ.ಅಂತರಂಗವನ್ನು ಅರಳಿಸುತ್ತವೆ ಎಂದು ಕರ್ನಾಟಕ ಕೇಂದ್ರೀಯ ವಿವಿ ಕುಲಪತಿ ಪ್ರೊ. ಎಚ್.ಎಂ. ಮಹೇಶ್ವರಯ್ಯ ಅಭಿಪ್ರಾಯಪಟ್ಟರು.

ರಾಷ್ಟ್ರಕೂಟ ಪುಸ್ತಕ ಮನೆ ಹಾಗೂ ಸಂಸ್ಕೃತಿ ಪ್ರಕಾಶನ, ಕನ್ನಡ ಸಾಹಿತ್ಯ ವಿಭಾಗ ವಿಜಿ ಮಹಿಳಾ ಕಾಲೇಜು, ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ ಸಹಯೋದಲ್ಲಿ ನಗರದ ವಿ.ಜಿ. ಮಹಿಳಾ ಕಾಲೇಜಿನಲ್ಲಿ ಇಂದು ಆಯೋಜಿಸಿದ್ದ ಪತ್ರಕರ್ತ- ಲೇಖಕ ಮಹಿಪಾಲರಡ್ಡಿ ಮುನ್ನೂರ, ಅವರ ಪುತ್ರ ವಿಜಯಭಾಸ್ಕರರೆಡ್ಡಿ ಬರೆದ ಮಾಧ್ಮಮ ಮುಖಿ, ನೆನಪಿನ ಪಡಸಾಲೆ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಕಲಬುರಗಿ ಸಾಂಸ್ಕೃತಿಕ ವಾಗಿ ತುಂಬಾ ಶ್ರೀಮಂತವಾಗಿದೆ ಎಂದು ಹೇಳಿದರು.

ಎರಡೂ ಕೃತಿಗಳನ್ನು ಕತೆಗಾರ್ತಿ ಸಂಧ್ಯಾ ಹೊನಗುಂಟಿಕರ ಪರಿಚಯಿಸಿದರು. ವಿಜಯಭಾಸ್ಕರರೆಡ್ಡಿ ಕವಿತೆಗಳು
ಮುಗ್ದ, ಸಹಜ, ಸರಳ ಕವಿತೆಗಳಾಗಿದ್ದು, ಕ್ಯಾಚಿ ಟೈಟಲ್ ಕಾವ್ಯಗಳಿವೆ. ಒಳ್ಳೆಯ ಪ್ರತಿಮೆಗಳನ್ನು ಉತ್ತಮವಾಗಿ ಬಳಸಿದ್ದಾರೆ ಎಂದರು.

ಮಾಧ್ಯಮ ಕ್ಷೇತ್ರದಲ್ಲಿನ ಅನುಭವಗಳನ್ನು ಪೇರಿಸಿ ಮಾಧ್ಯಮದ ವಿವಿಧ ಮುಖಗಳನ್ನು ಮಹಿಪಾಲ ಅವರು ಅನಾವರಣಗೊಳಿಸಿದ್ದಾರೆ ಎಂದು ಅವರು ತಿಳಿಸಿದರು. ಮುಖ್ಯ ಅತಿಥಿಯಾಗಿದ್ದ ಹಿರಿಯ ಪತ್ರಕರ್ತ ಜಿ.ಎನ್. ಮೋಹನ ಮಾತನಾಡಿ, ಅಪ್ಪ ಮಕ್ಕಳ ಕ್ರಿಯಾಶೀಲತೆಗೆ ಈ ಪುಸ್ತಗಳೆ ಸಾಕ್ಷಿಯಾಗಿ ಎಂದು ಹೇಳಿದರು.
ಹಿರಿಯರಾದ ಚಿನ್ನಪ್ಪರೆಡ್ಡಿ ತುಳೇರ, ಶರಣಬಸವ ವಿವಿ ಕುಲಸಚಿವ (ಮೌಲ್ಯಮಾಪನ) ಡಾ. ಲಿಂಗರಾಜ ಶಾಸ್ತ್ರಿ ಅತಿಥಿಗಳಾಗಿದ್ದರು.

ಕಾಲೇಜನ ಪ್ರಾಚಾರ್ಯ ಡಾ. ಈಶ್ವರಯ್ಯ ಮಠ ಅಧ್ಯಕ್ಷತೆ ವಹಿಸಿದ್ದರು. ಪ್ರಭಾಕರ ಜೋಶಿ ನಿರೂಪಿಸಿದರು. ಸಿದ್ಧಪ್ರಸಾದರೆಡ್ಡಿ ಸ್ವಾಗತಿಸಿದರು. ಮಹಿಪಾಲರೆಡ್ಡಿ ಮುನ್ನೂರ ಪ್ರಾಸ್ತಾವಿಕ ಮಾತನಾಡಿದರು. ಬಿ.ಎಚ್. ನಿರಗುಡಿ ವಂದಿಸಿದರು.

ಮಾಜಿ ಉಪಸಭಾಪತಿ ಚಂದ್ರಶೇಖರರೆಡ್ಡಿ ಮದನಾ, ಎ.ಕೆ. ರಾಮೇಶ್ವರ, ಸ್ವಾಮಿರಾವ ಕುಲಕರ್ಣಿ, ಪಿ.ಎಂ. ಮಣ್ಣೂರ, ಸುರೇಶ ಬಡಿಗೇರ, ಸಿದ್ಧರಾಮ ಹೊನ್ಕಲ್, ಎಸ್.ಎಸ್. ಪಾಟೀಲ, ಡಾ.ಲಕ್ಷ್ಮೀ ಶಂಕರ ಜೋಶಿ, ಡಾ. ಸುಜಾತಾ ಜಂಗಮಶೆಟ್ಟಿ, ಎಲ್.ಬಿ.ಕೆ. ಆಲ್ದಾಳ, ರತ್ನಕಲಾ ಮಹಿಪಾಲರೆಡ್ಡಿ, ಚಾಮರಾಜ ದೊಡ್ಡಮನಿ ಇತರರು ಇದ್ದರು.

emedialine

Recent Posts

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…

10 hours ago

ಭ್ರಷ್ಟಾಚಾರ ರಹಿತ ವಿವಿಗೆ ಆದ್ಯತೆ: ರಾಘವೇಂದ್ರ ಭೈರಪ್ಪ

ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…

11 hours ago

ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…

11 hours ago

ಸಚಿವ ಸಂಪುಟ ಸಭೆಯಲ್ಲಿ ವಿವಿಧ ಬೇಡಿಕೆ ಈಡೇರಿಕ್ಕೆಗೆ ಆಗ್ರಹ

ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…

11 hours ago

ಸೇಡಂ: ನೀರಿನಲ್ಲಿ ಮುಳುಗಿ ಮೃತ ಕುಟುಂಬಕ್ಕೆ ಸರ್ಕಾರದಿಂದ 3 ಎಕ್ಕರೆ ಜಮೀನು ನೀಡಿ

ಕಲಬುರಗಿ: ಸೇಡಂ ತಾಲೂಕಿನ ಕುರುಗುಂಟ ಗ್ರಾಮದ  ರಾಜು ನಾಮವಾರ್ ಸಂಗಾವಿ ಹೊಳೆಯಲ್ಲಿ ಮುಳಗಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 3 ಎಕ್ಕರೆ …

11 hours ago

ಟಿಎಪಿಸಿಎಂ ಅಧ್ಯಕ್ಷರಾಗಿ ಪಾಟೀಲ್ ಅವಿರೋಧ ಆಯ್ಕೆ

ಕಲಬುರಗಿ: ಸಹಕಾರಿ ಕ್ಷೇತ್ರದ ಇಲ್ಲಿನ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ (ಟಿಎಪಿಸಿಎಂ) ಸಂಘದ ಅಧ್ಯಕ್ಷರಾಗಿ ಶರಣಬಸಪ್ಪ ಜಗದೀಶ ಪಾಟೀಲ್…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420