ಕಲಬುರಗಿ: ಆಗಸ್ಟ್ 18ರಲ್ಲಿ ನಡೆದ ಪ್ರಸಾರ ಭಾರತಿ ಆಡಳಿತ ಮಂಡಳಿಯ 103 ನೇ ಸಭೆಯಲ್ಲಿ ಕಲಬುರಗಿ ದೂರದರ್ಶನ ಕೇಂದ್ರ ಮುಚ್ಚುವ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ಟೋಬರ್ 31ರ ಒಳಗಾಗಿ ಮುಚ್ಚುವ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ವರದಿ ನೀಡಲು ಡಿಡಿಕೆ ಮುಖ್ಯಸ್ಥರಿಗೆ ನಿರ್ದೇಶನ ನೀಡಿದೆ.
ಈ ಕುರಿತು ಇಲ್ಲಿನ ಗ್ರಾಮೀಣ ಯುವ ಕಾಂಗ್ರೆಸ್ ಸಂಯೋಜಕ ಶಿವಾನಂದ ಆರ್ ಕಿಳ್ಳಿ ಪತ್ರಿಕಾ ಹೇಳಿಕೆ ನೀಡಿ, ಡಿಡಿಕೆ ಮುಚ್ಚಲು ಅವಕಾಶ ಕೊಡುವುದಿಲ್ಲ. ಸಂಸದ ಡಾ. ಉಮೇಶ್ ಜಾಧವ್ ದೂರದರ್ಶನ ಯಾವುದೇ ಕಾರಣಕ್ಕೂ ಮುಚ್ಚಲು ಸಾಧ್ಯವಿಲ್ಲ ಎಂದು ನೀಡಿರುವ ಭರವಸೆ ಹುಸಿಯಾಗಿದೆ ಎಂದರು.
ಟೆಕ್ಸ್ ಟೈಲ್ಸ್ ಪಾರ್ಕ್, ಶೂರ್ ಪಾರ್ಕ್, ಏಮ್ಸ್, ರೈಲ್ವೆ ವಿಭಾಗೀಯ ಕಚೇರಿ ಸೇರಿದಂತೆ ಕಲಬುರಗಿಗೆ ಮಂಜೂರಾಗಿರುವ ಒಂದೊಂದೇ ಯೋಜನೆಗಳು ವಾಪಸ್ ಹೋಗುತ್ತಿದ್ದು ಅದರ ಪಾಲಿಗೆ ಈಗ ದೂರದರ್ಶನವು ಸೇರಿದೆ, ಮಲ್ಲಿಕಾರ್ಜುನ ಖರ್ಗೆ ಅವಧಿಯಲ್ಲಿ ಅನೇಕ ಯೋಜನೆಗಳು ಕಲಬುರಗಿ ತಂದು ಅಭಿವೃದ್ಧಿಗೆ ದಾರಿ ಹಾಕಿದರು.
ಆದರೆ ಲೋಕಸಭಾ ಸದಸ್ಯರಾಗಿ ಡಾ. ಉಮೇಶ್ ಜಾಧವ್ ಅವರ ಅವಧಿಯಲ್ಲಿ ಒಂದೊಂದೇ ಯೋಜನೆ ವಾಪಸ್ ಆಗುತ್ತಿರುವುದು ವಿಪರ್ಯಾಸ. ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ESIC, GIMS, ಕೇಂದ್ರೀಯ ವಿಶ್ವವಿದ್ಯಾಲಯದ ಅನೇಕ ಯೋಜನೆಗಳು ವಾಪಸ್ ಹೋಗುವುದರಲ್ಲಿ ಅನುಮಾನವೇ ಇಲ್ಲ ಅದಕ್ಕಾಗಿ ನೈತಿಕ ಹೊಣೆ ಹೊತ್ತು ಸ್ವಯಂ ಪ್ರೇರಿತರಾಗಿ ಸಂಸದರು ರಾಜೀನಾಮೆ ನೀಡಬೇಕು ಎಂದು ಶಿವಾನಂದ ಆರ್ ಕಿಳ್ಳಿ ಆಗ್ರಹಿಸಿದ್ದಾರೆ.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…