ಬಿಸಿ ಬಿಸಿ ಸುದ್ದಿ

ಆಳಂದ ತಾಲೂಕಿಗೆ ೩೮೩ ಮನೆ ಮಂಜೂರು: ಶಾಸಕ ಗುತ್ತೇದಾರ

ಆಳಂದ: ತಾಲೂಕಿಗೆ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ೩೮೩ ಮನೆಗಳು ಮಂಜೂರಾಗಿವೆ ಎಂದು ಶಾಸಕ ಸುಭಾಷ್ ಗುತ್ತೇದಾರ ಅವರು ತಿಳಿಸಿದ್ದಾರೆ.

ವಿಧಾನಸಭೆ ಅಧಿವೇಶನದಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿ ಉತ್ತರ ಪಡೆದುಕೊಂಡ ಶಾಸಕರು, ದೇವರಾಜ ಅರಸು ವಸತಿ ಯೋಜನೆಯಡಿಯಲ್ಲಿ ೩೨ ಮನೆಗಳು, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ೩೫೨ ಮನೆಗಳು ಮಂಜೂರಾಗಿದ್ದು ಅದರಲ್ಲಿ ೧೦ ಮನೆಗಳು ಪೂರ್ಣಗೊಂಡಿದ್ದು, ೧೮೧ ಮನೆಗಳು ಪ್ರಗತಿಯಲ್ಲಿವೆ, ೧೯೨ ಮನೆಗಳ ನಿರ್ಮಾಣ ಕಾರ್ಯ ಪ್ರಾರಂಭವಾಗಬೇಕಿದೆ ಅಲ್ಲದೇ ಭೌತಿಕ ಪ್ರಗತಿಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ತಾಲೂಕಿಗೆ ಹೆಚ್ಚಿನ ಮನೆಗಳನ್ನು ಮಂಜೂರಿ ಮಾಡಿಕೊಂಡು ಬರಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದ್ದಾರೆ. ತಾಲೂಕು ವ್ಯಾಪ್ತಿಯಲ್ಲಿ ಒಟ್ಟಾರೆಯಾಗಿ ೬೯೫೩ ಏಕರೆ ೧೫ ಗುಂಟೆ ಸರ್ಕಾರಿ ಜಮೀನು ಲಭ್ಯವಿದೆ ಅದರಲ್ಲಿ ಜನಗಳಿಗೆ ಅನೂಕೂಲವಾಗುವ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ತಾಲೂಕಿನ ವ್ಯಾಪ್ತಿಯಲ್ಲಿ ಒಟ್ಟು ೬೯೬೩ ಏಕರೆ ೧೫ ಗುಂಟೆ ಸರ್ಕಾರಿ ಜಮೀನು ಲಭ್ಯವಿದೆ ಅಲ್ಲದೇ ಈ ಹಿಂದೆ ತಾಲೂಕಿನಲ್ಲಿ ಶಾಲಾ, ಕಾಲೇಜು, ವಸತಿ ನಿಲಯ, ಆಸ್ಪತ್ರೆ, ಇತರೆ ಇಲಾಖೆಗಳಿಗೆ, ಸಂಸ್ಥೆಗಳಿಗೆ ವಿವಿಧ ಕಾರ್ಯಗಳಿಗೆ ಜಮೀನು ಮಂಜೂರಿ ಮಾಡಲಾಗಿದೆ ಎಂದು ತಿಳಿಸಿದರು.

ನಂತರ ಪ್ರತಿಕ್ರಿಯಿಸಿದ ಶಾಸಕರು ಆಳಂದ ತಾಲೂಕಿನಲ್ಲಿ ಲಭ್ಯವಿರುವ ಸರ್ಕಾರಿ ಜಮೀನಿನಲ್ಲಿ ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವುದಕ್ಕೆ ಯತ್ನಿಸಲಾಗುತ್ತಿದೆ ಈಗ ಲಭ್ಯವಿರುವ ಮಾಹಿತಿಯ ಆಧಾರದ ಮೇಲೆ ವಿವಿಧ ಜನಕಲ್ಯಾಣ ಯೋಜನೆಗಳನ್ನು ಅಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ನಿವೇಶನ ರಹಿತರಿಗೆ ನಿವೇಶನ: ಆಳಂದ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿರುವ ನಿವೇಶನ ರಹಿತರಿಗೆ ನಿವೇಶನ ನೀಡಲು ಜಿಲ್ಲಾಧಿಕಾರಿಗಳಿಂದ ಪ್ರಸ್ತಾವನೆ ಸಲ್ಲಿಕೆಯಾಗಿದೆ ಮುಂದಿನ ದಿನಗಳಲ್ಲಿ ನಿವೇಶನ ಖರೀದಿ ಕೈಗೊಂಡು ನಿವೇಶನ ರಹಿತರಿಗೆ ಹಂಚಿಕೆ ಮಾಡಲು ಕ್ರಮಕೈಗೊಳ್ಳಲು ಸರ್ಕಾರ ತಿಳಿಸಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ತಿಳಿಸಿದ್ದಾರೆ.

ವಿಧಾನಸಭೆ ಅಧಿವೇಶನದಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿ ಉತ್ತರ ಪಡೆದುಕೊಂಡ ಶಾಸಕರು, ಮುಖ್ಯಮಂತ್ರಿಗಳ ನಗರ ನಿವೇಶನ ಯೋಜನೆಯಡಿ ಈಗಾಗಲೇ ವಿವಿಧ ಸರ್ವೇ ನಂ.ಗಳಲ್ಲಿ ೩೭.೨೭ ಏ.ಗುಂ. ಜಾಗದಲ್ಲಿ ಖಾಸಗಿ ಜಮೀನು ಖರೀದಿಸಲು ಪ್ರಸ್ತಾವನೆ ಸಲ್ಲಿಕೆಯಾಗಿದೆ. ಸರ್ಕಾರದ ಹಣಕಾಸಿನ ಲಭ್ಯತೆಗೆ ಅನುಗುಣವಾಗಿ ಖರೀದಿ ಪ್ರಕ್ರಿಯೆ ಮುಂದುವರೆಸಲಾಗುವುದು ಎಂದು ಸರ್ಕಾರ ತಿಳಿಸಿದೆ ಎಂದು ಮಾಹಿತಿ ನೀಡಿದ್ದಾರೆ.

emedialine

Recent Posts

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

39 mins ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

18 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

18 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

20 hours ago