ಬಿಸಿ ಬಿಸಿ ಸುದ್ದಿ

ಪೂಜ್ಯ ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳಿಗೆ ’ಅಪ್ಪ’ ಪ್ರಶಸ್ತಿ

ಕಲಬುರಗಿ : ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದವತಿಯಿಂದ ೨೦೧೯-೨೦ನೇ ಸಾಲಿನ ಅಪ್ಪ ಪ್ರಶಸ್ತಿಯನ್ನು ಸಾರಂಗಮಠ ಶ್ರೀಶೈಲಂ ಹಾಗೂ ಸುಲಫಲ ಮಠ ಶಹಾಬಜಾರನ ಪೂಜ್ಯ ಶ್ರೀ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳಿಗೆ ನೀಡಿ ಗೌರವಿಸಲಾಯಿತು.

ಶುಕ್ರವಾರ ಸುಲಫಲಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಮನ್ ಪೂಜ್ಯ ಡಾ.ದಾಕ್ಷಾಯಣಿ ಎಸ್.ಅಪ್ಪಾ, ಕಾರ್ಯದರ್ಶಿ ಬಸವರಾಜ ದೇಶಮುಖ ಮತ್ತು ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ನೀಲಾಂಬಿಕಾ ಶೇರಿಕಾರ ಹಾಗೂ ಅವರ ಸಿಬ್ಬಂದಿಯವರು ಪೂಜ್ಯ ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಆಶೀರ್ವಚನ ಮಾಡಿದ ಪೂಜ್ಯ ಡಾ.ದಾಕ್ಷಾಯಣಿ ಎಸ್.ಅಪ್ಪಾ ಅವರು ಮಾತನಾಡಿ ಪೂಜ್ಯರು ಸಾಮಾಜಿಕ, ಆಧ್ಯಾತ್ಮಿಕ, ಸಾಹಿತ್ಯಿಕ, ಸಾಂಸ್ಕೃತಿಕ ಶಕ್ತಿಯಾಗಿದ್ದಾರೆ. ಭಕ್ತಿ ಭಂಡಾರಿ ಬಸವಣ್ಣ ಮತ್ತು ದಾಸೋಹ ಭಂಡಾರಿ ಶರಣಬಸವರಲ್ಲಿ ಅಪಾರ ಭಕ್ತಿಯುಳ್ಳವರಾಗಿದ್ದಾರೆ. ಎಲ್ಲಾ ವರ್ಗದ ಜನರನ್ನು ಗೌರವಾದರಗಳಿಂದ ಕಾಣುತ್ತ, ಭಾತೃತ್ವ ಭಾವನೆ ಮೈಗೂಡಿಸಿಕೊಂಡಿದ್ದಾರೆ. ರಾಷ್ಟ್ರಿಯತೆ, ಸಾಮಾಜಿಕ ಐಕ್ಯತೆ, ಸ್ವತಂತ್ರ ವಿಚಾರ, ಕನ್ನಡ ನಾಡು ನುಡಿ ಪ್ರೇಮ, ಶಿಕ್ಷಣದ ಒಲವು, ಮಹಿಳೆಯರಿಗೆ ಗೌರವ ಮತ್ತು ಮಹಾನ ವಾಗ್ಮಿಗಳು, ತತ್ವಶಾಸ್ತ್ರ ಪ್ರವೀಣರು, ಮಹಾ ದಾರ್ಶನಿಕರು ಆಗಿರುವ ಪೂಜ್ಯರಿಗೆ ಅಪ್ಪ ಪ್ರಶಸ್ತಿಯನ್ನು ನೀಡುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿದ ಸಾರಂಗಧರ ಮ್‌ದೇಶಿಕೇಂದ್ರ ಮಹಾಸ್ವಾಮಿಗಳು ಮಾತನಾಡಿ, ಶರಣಬಸವೇಶ್ವರರು, ಪೂಜ್ಯ ದೊಡ್ಡಪ್ಪ ಅಪ್ಪನವರು ಹಾಗೂ ಪೂಜ್ಯ ಡಾ.ಶರಣಬಸವಪ್ಪ ಅಪ್ಪನವರ ಆಶೀರ್ವಾದ ತಮ್ಮ ಮೇಲೆ ತಮ್ಮ ಮಠದ ಮೇಲೆ ಸದಾ ಇದೆ. ಪ್ರಶಸ್ತಿ ನೀಡಿರುವುದಕ್ಕೆ ತಮಗೆ ಬಹಳ ಸಂತೋಷವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಶರಣಬಸಪ್ಪ ಹೀರಾ, ಡಾ.ಶಿವರಾಜ ಶಾಸ್ತ್ರಿ ಹೇರೂರ್, ಡಾ.ಎಮ್.ಆರ್. -, ನ್ಚಿ’ಪ್ಙ್ಝಿ -ನ್ಙ್ಝಿ , ಅನೇಕ ಭಕ್ತರು ಹಾಗೂ ಗೋದುತಾಯಿ ಮಹಾವಿದ್ಯಾಲಯದ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಡಾ.ಪುಟ್ಟಮಣಿ ದೇವಿದಾಸ ನಿರೂಪಿಸಿದರು, ಶ್ರೀಮತಿ ಜಾನಕಿ ಹೊಸುರ ಸ್ವಾಗತ ಮತ್ತು ಪ್ರಾಸ್ತಾವಿಕ ಮಾತನಾಡಿದರು, ಕೃಪಾಸಾಗರ ಗೊಬ್ಬುರ ಸನ್ಮಾನ ಪತ್ರ ಓದಿದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

1 hour ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

3 hours ago