ಶಹಾಬಾದ: ಕನಿಷ್ಠ ವೇತನ, ಪಿಂಚಣಿ ಹಾಗೂ ಮರಣ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ಶುಕ್ರವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಅಕ್ಷರ ದಾಸೋಹ ನೌಕರರ ಸಂಘ, ಆಶಾ ಕಾರ್ಯಕರ್ತೆಯರ ಸಂಘದಿದಂದ ಪ್ರತಿಭಟನೆ ನಡೆಸಿ ತಹಸೀಲ್ದಾರ ಮುಖಾಂತರ ಮುಖ್ಯಮಂತ್ರಿಯವರಿಗೆ ಮನವಿ ಪತ್ರ ಸಲ್ಲಿಸಿದರು.
ಕೋವಿಡ್ ಸಂಕಷ್ಟದ ಸಮಯದಲ್ಲಿ ಕರ್ತವ್ಯ ನಿರ್ವಹಿಸಿದ ನಮಗೆ ಕೋವಿಡ್ನ ಸಕಲ ಸೌಲಭ್ಯ ನೀಡಿ.ನಿಯತಕಾಲಿಕವಾಗಿ ಉಚಿತ ಕೋವಿಡ್ ಪರೀಕ್ಷೆ ನಡೆಸಿ.ಕೋವಿಡ್ ಸೋಂಕಿತ ನೌಕರರಿಗೆ ಆಸ್ಪತ್ರೆ ಸೇವೆಯಲ್ಲಿ ಮೊದಲ ಆದ್ಯತೆ ನೀಡಿ ಎಂದು ಆಗ್ರಹಿಸಿದರು.
ಅಲ್ಲದೇ ೬% ಜಿಡಿಪಿಯನ್ನು ಆರೋಗ್ಯಕ್ಕೆ ಕ್ಷೇತ್ರಕ್ಕೆ ಒದಗಿಸಿ. ಸಮಪರ್ಕವಾದ ಬೆಡ್ಗಳು, ಆಮ್ಲಜನಕ ಮತ್ತಿತ್ತರ ಆರೋಗ್ಯ ಸಂಪನ್ಮೂಲಗಳನ್ನು ಒದಗಿಸುವ ಮೂಲಕ ಸಾರ್ವಜನಿಕ ಆರೋಗ್ಯ ಕ್ಷೇತ್ರ ಮತ್ತು ಆರೋಗ್ಯ ಸಂಪನ್ಮೂಲಗಳನ್ನು ಬಲಪಡಿಸಿ. ಆರೋಗ್ಯ ಸಿಬ್ಬಂದಿಗಳನ್ನು ನೇಮಿಸಿಕೊಳ್ಳಿ ಎಂದರು. ಸೇವಾ ಅವಧಿಯಲ್ಲಿ ಮೃತಪಟ್ಟ ಎಲ್ಲಾ ನೌಕರರಿಗೆ ೫೦ ಲಕ್ಷ ರೂ. ವಿಮಾ ಸುರಕ್ಷೆ ಒದಗಿಸಬೇಕು.ಕೋವಿಡ್ ಸೊಂಕಿತ ಫ್ರಂಟ್ ಲೈನ್ ನೌಕರರು ಹಾಗೂ ಅವರ ಕುಟುಂಬಸ್ಥರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು.
ಹೆಚ್ಚುವರಿಯಾಗಿ ಕೋವಿಡ್-೧೯ ಸವೆಯಲ್ಲಿ ನಿರತರಾಗಿರುವ ಎಲ್ಲಾ ಗುತ್ತಿಗೆ ನೌಕರರಿಗೆ ಮಾಸಿಕ ೧೦ ಸಾವಿರ ರೂ. ಕೋವಿಡ್ ಅವಘಡ ಭತ್ಯೆ ಒದಗಿಸಬೇಕು. ನೂತನ ಶಿಕ್ಷಣ ನೀತಿಯಿಂದ ಐಸಿಡಿಎಸ್ ಮತ್ತು ಬಿಸಿಯೂಟ ಯೋಜನೆಗಳನ್ನು ರಕ್ಷಿಸಬೇಕೆಂದು ಹೇಳಿದರು.
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ತಾಲೂಕಾಧ್ಯಕ್ಷೆ ಶೇಖಮ್ಮ ಕುರಿ, ಪ್ರಧಾನಕಾರ್ಯದರ್ಶಿ ಮಲ್ಲಮ್ಮ, ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಸಂಪತ್ತಕುಮಾರಿ,ರುದ್ರಮ್ಮ, ಧನಲಕ್ಷ್ಮಿ, ಗಂಗೂಬಾಯಿ, ಲಕ್ಷ್ಮಿ, ಶಾರದಾ,ಜುಲೇಖಾ ಸೇರಿದಂತೆ ಅನೇಕರು ಹಾಜರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…