ಬಿಸಿ ಬಿಸಿ ಸುದ್ದಿ

ಕೃಷಿ ಸಂಶೋಧನಾ ಕೇಂದ್ರದಲ್ಲಿ ಹಿಂಗಾರು ಬೀಜ ದಿನೋತ್ಸವ

ಕಲಬುರಗಿ: ಇಲ್ಲಿನ ವಲಯ ಕೃಷಿ ಸಂಶೋಧನಾ ಕೇಂದ್ರ ಹಿಂಗಾರು ಬೀಜ ದಿನೋತ್ಸವವನ್ನು ಹಮ್ಮಿಕೊಳ್ಳಲಾಯಿತು.

ಕಲಬುರಗಿ ಕೃಷಿ ಮಹಾವಿದ್ಯಾಲಯ ಡೀನ್ ರಾದ ಡಾ. ಸುರೇಶ್ ಎಸ್ ಪಾಟೀಲ ಕಾರ್ಯಕ್ರಮಉದ್ಘಾಟಿಸಿ ಮಾತನಾಡುತ್ತಾ ಬೀಜ ದಿನೋತ್ಸವ ಕಾರ್ಯಕ್ರಮದ ಪ್ರಾಮುಖ್ಯತೆ ವಿವರಿಸಿದರು. ರೈತರು ತಮ್ಮ ಹೊಲಕ್ಕೆ ಸೂಕ್ತವಾದ ತಳಿಗಳ  ಮಾಹಿತಿ ಪಡೆದುಕೊಳ್ಳಬೇಕೆಂದು ಮಾಹಿತಿ ನೀಡಿದರು ಹಾಗೂ ರೈತರು ಒಂದೇ ಬೆಳೆಯ ಮೇಲೆ ಅವಲಂಬನೆಗೊಳ್ಳದೆ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕೆಂದು ಹೇಳಿದರು.

ಸಹ ಸಂಶೋಧನಾ ನಿರ್ದೇಶಕರಾದ ಡಾ. ಎಂ.ಎಂ. ಧನೋಜಿ ರವರು ಅಧ್ಯಕ್ಷಿಯ ಭಾಷಣ ಮಾಡುತ್ತಾ, ಬೀಜ ದಿನೋತ್ಸವ ಕಾರ್ಯಕ್ರಮದಿಂದ ರೈತರು ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಬೆಳೆಗೆ ಬೇಕಾಗಿರುವ ಗುಣಮಟ್ಟ ಬೀಜಗಳು ಮತ್ತು ಸುಧಾರಿತ ಕೃಷಿ ತಂತ್ರಜ್ಞಾನಗಳನ್ನು ರೈತರಿಗೆ ಮುಟ್ಟಿಸಲು ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ವಿಜ್ಞಾನಿಗಳಾದ ಡಾ. ರಾಚಪ್ಪ ವಿ.ಹಾವೇರಿ, ಡಾ.ಬಿ.ಎಸ್.ರೆಡಿ, ಡಾ.ಮುನಿಸ್ವಾಮಿ ಎಸ್  ಡಾ. ಪಂಡಿತ ರಾಥೋಡ್, ಡಾ. ಡಿ.ಎಚ್. ಪಾಟೀಲ, ಡಾ. ಮಲ್ಲಿಕಾರ್ಜುನ ಕೆಂಗನಾಳ, ಡಾ. ಲಕ್ಷುಮಣ್, ಡಾ. ಬಸವರಾಜ, ಹಾಗೂ ಶೀಲಾ ದುದ್ದಗಿ ರವರುಗಳು ಭಾಗವಹಿಸಿ ನೂತನ ತಳಿ ಬಳಕೆ, ಬೀಜೋಪಚಾರ, ಸುಧಾರಿತ ಬೇಸಾಯ ಕ್ರಮಗಳು, ಚಿಕ್ಪೀ ಮಾಜ್ಯಿಕ್ ಬಳಕೆ, ಸಮಗ್ರ ಕೀಟ ಹಾಗೂ ರೋಗಗಳ ನಿಯಂತ್ರಣ ಕುರಿತು ರೈತರಿಗೆ ಮಾಹಿತಿ ಮಾಡಿ ಕೊಟ್ಟರು.

ಈ ಕಾರ್ಯಕ್ರಮವನ್ನು ಬೀಜ ಘಟಕ ವತಿಯಿಂದ ಆಯೋಜಿಸಿದ್ದು, ಭಾಗವಹಿಸಿದ ರೈತರಿಗೆ ಕಡಲೆ ಮತ್ತು ಜೋಳದ ಬೀಜ ವಿತರಣೆ ಮಾಡಲಾಯಿತು.  ಡಾ.ಐ.ಬಿ.ರೆಡ್ಡಿ ನಿರೂಪಿಸಿದರು ಮತ್ತು ಡಾ.ಎಸ್.ಬಿ.ಯೆರಿ, ಇವರು ವಂದನಾಪರ್ವಣೆ ಮಾಡಿದರು.

ವಿವಿಧ ಗ್ರಾಮಗಳಿಂದ ಸುಮಾರು 50 ಜನ ರೈತರುಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

28 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

31 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

34 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago