ಅಂಚೆ ಕಚೇರಿ ಕಟ್ಟಡ ನಿರ್ಮಾಣ ಅನುಧಾನಕ್ಕೆ ಸಚಿವರ ಮೊರೆ

ಆಳಂದ: ಪಟ್ಟಣದಲ್ಲಿ ಅಂಚೆ ಇಲಾಖೆಯ ನಿವೇಶನದಲ್ಲಿ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅನುದಾನ ಮಂಜೂರಾತಿ ಕೈಗೊಳ್ಳಬೇಕು ಎಂದು ಸ್ಥಳೀಯ ಅಂಚೆ ಇಲಾಖೆಯ ಸಿಬ್ಬಂದಿಗಳ ಪರವಾಗಿ ನಾಗರಿಕರು ಒತ್ತಾಯಿಸಿದರು.

ಪಟ್ಟಣದಲ್ಲಿ ಶನಿವಾರ ಆಗಮಿಸಿದ್ದ ಕೇಂದ್ರ ಸರ್ಕಾರದ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಖಾತೆ ಸಚಿವ ಭಗವಂತ ಖೂಬಾ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಪಟ್ಟಣದ ಹೃದಯ ಅಂಚೆ ಇಲಾಖೆಗೆ ಸ್ವಂತ ಜಾಗವಿದ್ದು, ಕಟ್ಟಡ ಇರುವಿಲ್ಲದೆ ಬಾಡಿಗೆ ಕಟ್ಟಡದಲ್ಲಿಕಾರ್ಯ ನಿರ್ವಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಮಂತ್ರಿಗಳಾದ ತಾವು ಅನುದಾನ ಒದಗಿಸಲು ಶ್ರಮಿಸಬೇಕು. ಸದ್ಯ ಪುರಸಭೆ ಮಳಿಗೆ ಮೇಲಂತಸ್ತಿನಲ್ಲಿ ಬಾಡಿಗೆಯಲ್ಲಿ ಅಂಚೆ ಕಚೇರಿ ಕಾರ್ಯನಿರ್ವಹಿಸುತ್ತಿದ್ದು, ವಯಸ್ಕರರಿಗೆ ಕಚೇರಿ ಕೆಲಸಕ್ಕೆ ಮೇಲೆತ್ತಿ ಬರಲು ತೊಂದರೆ ಆಗುತ್ತಿದೆ ಎಂದು ೨೫ಕ್ಕೂ ಹೆಚ್ಚು ನಾಗರಿಕರು ಸಹಿ ಹಾಕಿದ ಮನವಿ ಸಲ್ಲಿಸಿದರು.

ವಿಮಾ ದೊರಕಿಸಲು ಮನವಿ: ಅತಿವೃಷ್ಟಿಯಿಂದ ಹಾನಿಯಾದ ಬೆಳೆಗೆ ಎಲ್ಲಾ ರೈತರಿಗೆ ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆ ಅಡಿಯಲ್ಲಿ ವಿಮಾ ಮೊತ್ತವನ್ನು ನೀಡಬೇಕು ಎಂದು ಬಿಜೆಪಿ ರೈತ ಮೋರ್ಚಾ ಘಟಕವು ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಮನವಿ ಸಲ್ಲಿಸಿ ಇದೇ ವೇಳೆ ಒತ್ತಾಯಿಸಿದರು. ಸೋಬಾಭಿನ್ ಮತ್ತು ತೊಗರಿಗೆ ಕ್ವಿಂಟಲ್‌ಗೆ ೮ ಸಾವಿರ ರೂ.ಗಳಂತೆ ಖರೀದಿಸಬೇಕು. ಕೇಂದ್ರ ಸರ್ಕಾರದ ೫೦ ಕೋಟಿ ಅನುದಾನ ನೀಡಿ ೧೫ರಿಂದ ೨೦ ಸಣ್ಣ ಕೆರೆಗಳನ್ನು ನಿರ್ಮಿಸಿ ರೈತರಿಗೆ ಅನುಕೂಲ ಒದಗಿಸಬೇಕು. ೨೪ ಗಂಟೆ ವಿದ್ಯುತ್ ಸೇರಿ ನೀರಾವರಿ ಕಲ್ಪಿಸಿ ಬರಮುಕ್ತ ತಾಲೂಕನ್ನಾಗಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಮಲ್ಲಿನಾಥ ಪಾಟೀಲ ಕಾಳಗಿ, ಹಿರಿಯ ರೈತ ಮುಖಂಡ ಆಧಿನಾಥ ಹೀರಾ, ಶ್ರೀಶೈಲ ಪಾಟೀಲ, ಶಿವುಕುಮಾರ ಜಂಬಗಾ, ಮಲ್ಲಣ್ಣಾ ಕುಲಕರ್ಣಿ ಮತ್ತಿತರು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420