ಬಿಸಿ ಬಿಸಿ ಸುದ್ದಿ

ಕೂಲಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

ಕಲಬುರಗಿ: ಇಂದು ಚಂದ್ರನಗರ ಗ್ರಾಮದಲ್ಲಿ ಬಡ ಕೂಲಿ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಆಹಾರ ಕಿಟ್ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಗುರಪ್ಪ ದಂಡುಗುಲಕರ್ ಮಾತಾಡಿದರು. ಮುಖ್ಯ ಅಥಿತಿಗಳಾಗಿ ಯುವ ಹೋರಾಟಗಾರರಾದ ಸುನೀಲ್ ಮಾನಪಡೆ ಮಾತನಾಡಿ ಕೋವಿಡ್ ಮಾಹಾಮಾರಿಯಿಂದ ಬಡವರ ಬದುಕು ಸಾಗಿಸಲು ತುಂಬಾ ಕಷ್ಟ ಪಡುತ್ತಿದ್ದಾರೆ ಹಿಂತಾ ಸಮಯದಲ್ಲಿ ಸರ್ಕಾರದ ಸವಲತ್ತುಗಳನ್ನು ತಲುಪಿಸುವ ನಿಟ್ಟಿನಲ್ಲಿ ರೈತ ಸಂಘದ ಪ್ರಯತ್ನ ಮಾಡುತ್ತಿದ್ದೆ , ಚಂದ್ರನಗರ ಗ್ರಾಮದಲ್ಲಿ ಪ್ರತಿಯೊಬ್ಬರು ಜಮೀನು ಇಲ್ಲದೆ ಕೇವಲ ಕೂಲಿ ಕಾರ್ಮಿಕರ ಕೆಲಸವನ್ನೇ ಅವಲಂಬಿಸಿದ್ದಾರೆ ಮುಂದಿನ ದಿನಗಳಲ್ಲಿ ಹೆಚ್ಚಿನ ಸವಲತ್ತುಗಳನ್ನು ಒದಗಿಸುವ ನಿಟ್ಟಿನಲ್ಲಿ ರೈತ ಸಂಘ ಹೋರಾಟ ನಡೆಸಲಿದೆ ಎಂದರು.

ರೈತ ಸಂಘದ ಜಿಲ್ಲಾ ಮುಖಂಡರಾದ ಶಾಂತಪ್ಪ ಪಾಟೀಲ್ ಸನ್ನೂರ ಅವರು ಮಾತನಾಡಿ ಈ ಗ್ರಾಮದ ಪ್ರತಿಯೊಬ್ಬರಿಗೂ ಜಮೀನಿನ ಹಕ್ಕು ಪತ್ರ ನೀಡುವದು ಮತ್ತು ಉಳಿಮೆ ಮಾಡಲು ಯೋಗ್ಯ ಇರುವ ಸಾಗುವಳಿ ಜಮೀನನ್ನು ಪಟ್ಟಾ ಮಾಡಿಕೊಡುವ ಮೂಲಕ ಮಾರುತಿ ಮನಪಡೆಯವರ ಒಂದು ಕನಸು ನನಸಾಗುವ ಜವಾಬ್ದಾರಿ ರೈತ ಸಂಘದ ಮೇಲೆ ಇದೆ, ಕಳೆದ ಮೂವತ್ತು ವರ್ಷಗಳ ಕಾಲ ಚಂದ್ರನಗರ ಗ್ರಾಮದ ಜನರು ಕರ್ನಾಟಕ ಪ್ರಾಂತ ರೈತ ಸಂಘ ಮುಖಂಡರಾದ ಮಾರುತಿ ಮನಪಡೆಯವರ ಜೊತೆಗೆ ನಿಂತು ಅವಿರತವಾಗಿ ದುಡಿದು ರೈತ ಚಳುವಳಿ ಬಲಪಡಿಸಿ ಈ ಬಾಗದ ನೀರಾವರಿ ಯೋಜನೆ , ತೊಗರಿ ಬೋರ್ಡ್ ರಚನೆ , ಬೆಂಬಲ ನೀಡುವ ಬಗ್ಗೆ ಹಲವಾರು ರೈತರ ಹೋರಾಟಗಳು ಯಶಸ್ವಿಗೊಳಿಸದ  ಕೀರ್ತಿ ತಮಗೆ ಸಲ್ಲುತ್ತದೆ ಎಂದರು.

ವೇದಿಕೆ ಮೇಲೆ  ಹಣಮಂತ ದಂಡುಗುಲಕರ್ ,ಭೀಮಶಾ ದಂಡುಗುಲಕರ್ ಉಪಸ್ಥಿತಿಯಲ್ಲಿದ್ದರು. ಹಣಮಂತ ಪೂಜಾರಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಪವನಕುಮಾರ ಯಾಂಕಣ್ಣ ಚವ್ಹಾಣ ವಂದಾನಾರ್ಪಣೆ ನೆರವೆರಿಸಿದರು. ನೂರಾರು ಗ್ರಾಮದ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದರು .

emedialine

Recent Posts

ಬೀದಿ ಬದಿ ವ್ಯಾಪಾರಸ್ಥರಿಗೆ ಮೂಲಭೂತ ಸೌಕರ್ಯ ಒದಗಿಸಲು ಮೇಯರ್‍ ಗೆ ಮನವಿ

ಕಲಬುರಗಿ : ನಗರದ ಬೀದಿ ಬದಿಯಲ್ಲಿ ಕುಳಿತುಕೊಂಡು ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ಈಗಾಗಲೇ ಪಾಲಿಕೆಯಿಂದ ನೀಡಿರುವ ಹಳೆ ಜೈಲ್ ಸೂಪರ…

2 hours ago

ನಾರಿ ನ್ಯಾಯ ಸಮ್ಮಾನ್ ಕಾರ್ಯಕ್ರಮ

ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ…

3 hours ago

ಬಾಂಗ್ಲಾದೇಶದ ಹಿಂದೂಗಳ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಶಹಾಬಾದ: ಬಾಂಗ್ಲಾದೇಶದ ಹಿಂದೂಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಿಂಸಾತ್ಮಕ ದೌರ್ಜನ್ಯ, ಅತ್ಯಾಚಾರಗಳನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ವತಿಯಿಂದ ಮಂಗಳವಾರ ನಗರದ…

3 hours ago

ಹಿಂದುಳಿದ ಸಮುದಾಯಗಳ ಆಶಾಕಿರಣವಾಗಿದ್ದರು ದೇವರಾಜ ಅರಸ್

ಶಹಾಬಾದ: ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಹಿಂದುಳಿದ ಸಮುದಾಯಗಳ…

3 hours ago

ವೈದ್ಯೆಯ ಮೇಲಿನ ಅತ್ಯಾಚಾರ – ಕೊಲೆ ಖಂಡಿಸಿ ಎಐಡಿವೈಒ ಪ್ರತಿಭಟನೆ

ಶಹಾಬಾದ: ಕೊಲ್ಕತ್ತಾದ ಸರ್ಕಾರಿ ಆರ್. ಜಿ. ಕರ್ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈಧ್ಯೆಯ ಮೇಲಿನ ಅತ್ಯಾಚಾರ ಕೊಲೆ ಹಾಗೂ ಪ್ರತಿಭಟನಾಕಾರರ…

3 hours ago

ಆ.25 ರಂದು ಹಟಗಾರ ಸಮಾಜ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ

ಕಲಬುರಗಿ: ನಗರದ ಪತ್ರಿಕಾ ಭವನದ ಸಾಂಸ್ಕøತಿಕ ಸಭಾಂಗಣದಲ್ಲಿ ಆ.25 ರಂದು ಬೆಳಗ್ಗೆ 10.30 ಗಂಟೆಗೆ ಗುಲಬರ್ಗಾ ಹಟಗಾರ ಸಮಾಜ ಅಭಿವೃದ್ಧಿ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420