ಕಲಬುರಗಿ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾನ್ಯ ಅಧ್ಯಕ್ಷರಾದ ಅಬ್ದುಲ್ ಅಜೀಮ್ ಮತ್ತು ಕಾರ್ಯದರ್ಶಿ ಮಹಮ್ಮದ್ ನಜೀರ್ ಇವರು ಕಲಬುರಗಿ ಜಿಲ್ಲೆಗೆ ನಾಳೆ 28 ರಂದು ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ 12.30 ಗಂಟೆಗೆ ಅಲ್ಪಸಂಖ್ಯಾತರ ಸಮುದಾಯದ ಸಂಘ ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರೊಂದಿಗೆ ಕುಂದುಕೊರತೆಗಳ ಸಭೆ ಜರುಗುವ ಸ್ಥಳವನ್ನು ಬದಲಾವಣೆ ಮಾಡಿ (ಕೃಷಿ ಇಲಾಖೆ ಹತ್ತಿರ) ಹಳೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಿಗದಿ ಪಡಿಸಲಾಗಿಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.