ಕಲಬುರಗಿ: ಹುಮನಾಬಾದನ ಮೌಂಟ ರೇಕುಳಗಿಯಲ್ಲಿ ರಾಜ್ಯ ಸರ್ಕಾರದಿಂದ ಮಂಜೂರಾದ ಅಂದಾಜು 3 (ಮೂರು) ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಕಾಮಗಾರಿಯನ್ನು ಆರಂಭಿಸಲು ಇಂದು ನಗರಕ್ಕೆ ಆಗಮಿಸಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಯವರಿಗೆ ಪೂಜ್ಯ ಭಂತೆ ರೇವತ್ ಹಾಗೂ ಬಿಜೆಪಿ ಎಸ್ ಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಅಂಬಾರಾಯ ಅಷ್ಠಗಿ ಮನವಿ ಸಲ್ಲಿಸಿದರು.
ಈಗಾಗಲೆ ಮಂಜೂರಾದ ಕಾಮಗಾರಿಯು ಅನುದಾನದ ಕೊರತೆಯಿಂದ ಪ್ರಾರಂಭವಾಗಿರುವುದಿಲ್ಲ. ಆದ್ದರಿಂದ ಆದಷ್ಟೂ ಶೀಘ್ರದಲ್ಲಿ ಹಣ ಬಿಡುಗಡೆಗೋಳಿಸಿ ಕಾಮಗಾರಿಯನ್ನು ಪ್ರಾರಂಭ ಮಾಡುವ ಮೂಲಕ ಅಸಂಖ್ಯಾತ ಬೌದ್ಧ ಧರ್ಮದ ಅನುಯಾಯಿಗಳಿಗೆ ಅನುಕೂಲ ಕಲ್ಪಿಸಿ ಕೊಡಲು ಪೂಜ್ಯ ಭಂತೆ ರೇವತ್ ಹಾಗೂ ಅಂಬಾರಾಯ ಅಷ್ಠಗಿ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಕಲಬುರಗಿ ಗ್ರಾಮೀಣ ಶಾಸಕರಾದ ಬಸವರಾಜ ಮತ್ತಿಮುಡ, ಮೌಂಟ ನ ಪೂಜ್ಯ ಭಂತೆ ಧರ್ಮಪಾಲ, ಶಿವ ಅಷ್ಠಗಿ, ರವಿಚಂದ್ರ ಕಾಂತಿಕರ್, ಇದ್ದರು.
BOX…[… ..]
ಮೌಂಟ ರೇಕುಳಗಿಯ ಅನಾಥ ಪಿಂಡಕ ಬುದ್ಧ ವಿಹಾರವು ಒಂದು ಐತಿಹಾಸಿಕ ಧಾರ್ಮಿಕ ಸ್ಥಳವಾಗಿದ್ದೂ, ಇಲ್ಲಿ ಇನ್ನು ಹೆಚ್ಚಿನ ಧಾರ್ಮಿಕ ಚಟುವಟಿಕೆಗಳನ್ನು ಕೈಗೊಳ್ಳಲು,ಸರ್ಕಾರದ ಅನುದಾನ ಅವಶ್ಯಕವಾಗಿದೆ. ಮಾನ್ಯ ಸಚಿವರು ಈ ಬುದ್ಧ ವಿಹಾರ ಅಭಿವೃದ್ದಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಅನುದಾನ ನೀಡುವ ಭರವಸೆ ಇದೆ. – ಅಂಬಾರಾಯ ಅಷ್ಠಗಿ, ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…