ಆಳಂದ: ಪಟ್ಟಣದ ಶರಣನಗರದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಆಳಂದ ವಲಯದ ಆಶ್ರಯದಲ್ಲಿ ಆಯೋಜಿಸಿದ್ದ ಪೋಷಣಾ ಅಭಿಯಾನ ಮಾಸಾಚರಣೆ ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷೆ ರಾಜಶ್ರೀ ಶ್ರೀಶೈಲ ಖಜೂರಿ ಅವರು ಉದ್ಘಾಟಿಸಸಿದರು.
ಬಳಿಕ ಮಾತನಾಡಿದ ಅವರು, ಆರೋಗ್ಯಯುಕ್ತ ಜೀವನಕ್ಕೆ ಸರ್ಕಾರ ಬಡವರಿಗೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದೆ. ಅದನ್ನು ಪಡೆದು ಮುಂದೆ ಬರಬೇಕು ಎಂದು ಹೇಳಿದರು.
ಗ್ರೇಡ್-2 ತಹಸೀಲ್ದಾರ ಬಸವರಾಜ ರಕ್ಕಸಗಿ, ತಾಪಂ ಇಒ ನಾಗಮೂರ್ತಿ ಕೆ. ಶೀಲವಂತ, ಸಿಡಿಪಿಒ ಶಿವಮೂರ್ತಿ ಕುಂಬಾರ, ಶಿರಸ್ತೆದಾರ ಮನೋಜ ಲಾಡೆ ಆಗಮಿಸಿದ್ದರು.
ಈ ವೇಳೆ ಕೈತೂಳೆದುಕೊಳ್ಳುವುದು, ಮಗುವಿಗೆ ಅನ್ನ ಪ್ರಹಾಸನ, 9ಮಂದಿ ಗರ್ಭೀಣಿಯರಿಗೆ ಸಿಮಂತ ಕಾರ್ಯಕ್ರಮ, ಮಕ್ಕಳ ಆರೋಗ್ಯ ಮತ್ತು ಪೌಷ್ಠಿಕ ಕುರಿತು ವ್ಯಾಕ್ಯೆಗಳ ಸ್ಪರ್ಧೆ ವಿಜೇತರಿಗೆ ಬಹುಮಾನ ನೀಡಲಾಯಿತು. ಉತ್ತಮ ಕಾರ್ಯ ನಿರ್ವಹಿಸಿದ ಐವರು ಕಾರ್ಯಕರ್ತೆಯರಿಗೆ ಸನ್ಮಾನಿಸಿ ಪ್ರಮಾಣ ಪತ್ರ ನೀಡಲಾಯಿತು. ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ ನಡೆಯಿತು.
ಜಿಪಂ ಮಾಜಿ ಸದಸ್ಯೆ ಪೂಜಾ ರಮೇಶ ಲೋಹಾರ ಮಾತನಾಡಿದರು. ಚೌಡೇಶ್ವರಿ ಕಮೀಟಿ ಸದಸ್ಯ ಶ್ರೀಮಂತ ಜನವೇರಿ, ಪುರಸಭೆ ಸದಸ್ಯ ಮೃತ್ಯುಂಜಯ ಆಲೂರೆ, ರಾಜಕುಮಾರ ಷಣ್ಮೂಖ, ಮುಖ್ಯಾಧಿಕಾರಿ ವಿಜಯ ಮಹಾಂತೇಶ ಹೂಗಾರ, ಲಿಂಗರಾಜ ಬುಕ್ಕೆ, ಡಾ| ಪ್ರಥ್ವಿರಾಜ ಚವ್ಹಾಣ, ಹಿರಿಯ ಮೇಲ್ವಿಚಾರಕಿ ಸೂರೆಖಾ ಮತ್ತಿತರು ಉಪಸ್ಥಿತರಿದ್ದರು.
ಪೌಷ್ಠಿಕ ಆಹಾರ ಶ್ರೀಧಾನ್ಯಗಳ ಬಳಕೆ ಹಣ್ಣು, ಹಂಫಲ ಮತ್ತು ತರಕಾರಿ ಬಳಕೆಯಿಂದ ಆರೋಗ್ಯಕ್ಕೆ ಪೂರಕದ ಕುರಿತು ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಮಾಹಿತಿ ನೀಡಲಾಯಿತು.
ಲಕ್ಷ್ಮೀಗೌಡರ ನಿರೂಪಿಸಿದರು. ಅಂಗನವಾಡಿ ಮೇಲ್ವಿಚಾರಕಿ ಮಹಾದೇವ ವಚ್ಛೆ ಸ್ವಾಗತಿಸಿದರು. ಪುಷ್ಪಾವತಿ ಚಟ್ಟಿ ವಂದಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…