ಎಲ್ಲಾ ವರದಿಗಾರರಿಗೆ ನಿವೇಶನ ಒದಗಿಸಲಾಗುವುದು-ಶಾಸಕ ರಾಜುಗೌಡ ಭರವಸೆ

ಸುರಪುರ: ನಗರದ ಎಲ್ಲಾ ವರದಿಗಾರರಿಗೆ ನಿವೇಶನಗಳನ್ನು ನೀಡಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಅಧ್ಯಕ್ಷರು ಹಾಗು ಶಾಸಕ ನರಸಿಂಹ ನಾಯಕ ರಾಜುಗೌಡ ಮಾತನಾಡಿದರು.

ನಗರದ ತಮ್ಮ ಗೃಹ ಕಚೇರಿಯಲ್ಲಿ ಭೇಟಿ ಮಾಡಿದ ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ ತಾಲೂಕು ಘಟಕದ ಪದಾಧಿಕಾರಿಗಳ ನಿಯೋಗದ ಮನವಿಯನ್ನು ಸ್ವೀಕರಿಸಿ ಮಾತನಾಡಿ,ತಮ್ಮೆಲ್ಲರಿಗೂ ನಿವೇಶನ ಒದಗಿಸುವುದು ನನ್ನ ಜವಬ್ದಾರಿಯಾಗಿದೆ.ಆದ್ದರಿಂದ ಶೀಘ್ರದಲ್ಲಿಯೆ ತಮ್ಮೆಲ್ಲ ವರದಿಗಾರರ ಪಟ್ಟಿಯನ್ನು ನೀಡಿದಲ್ಲಿ ನಿವೇಶನ ಒದಗಿಸುವುದಾಗಿ ತಿಳಿಸಿದರು.ಅಲ್ಲದೆ ಸ್ಥಳದಲ್ಲಿದ್ದ ನಗರಸಭೆ ಪೌರಾಯುಕ್ತ ಜೀವನ್‌ಕುಮಾರ ಕಟ್ಟಿಮನಿಯವರಿಗೆ ಸೂಚಿಸಿ ತಾಲೂಕು ಪತ್ರಿಕಾ ಭವನ ನಿರ್ಮಾಣಕ್ಕೆ ನಿವೇಶನ ಗುರುತಿಸಿ ಶೀಘ್ರದಲ್ಲಿಯೆ ಅನುದಾನ ನೀಡುವೆನು ಆದಷ್ಟು ಬೇಗ ಕಾಮಗಾರಿಗೆ ಚಾಲನೆ ನೀಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಕಮಿಷನರ್ ಜೀವನ್‌ಕುಮಾರ ಮಾತನಾಡಿ,ಈಗಾಗಲೇ ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದನ್ನು ನಗರಸಭೆ ಮೀಟಿಂಗ್‌ನಲ್ಲಿ ಪಾಸ್ ಮಾಡಲಾಗಿದೆ ಅಲ್ಲದೆ ಕೆಜೆಯು ಸದಸ್ಯರಿಗೆ ನಿವೇಶನವನ್ನು ಗುರುತಿಸಿ ತೋರಿಸಲಾಗಿದೆ,ಶೀಘ್ರದಲ್ಲಿಯೆ ತಮ್ಮ ಗಮನಕ್ಕೆ ತಂದು ಜಿಲ್ಲಾಧಿಕಾರಿಗಳ ಅನುಮೋದನೆಗೆ ಕಳುಹಿಸುವುದಾಗಿ ತಿಳಿಸಿದರು.ಆದಷ್ಟು ಬೇಗನೆ ಅನುಮೋದನೆಗೆ ಕಳುಹಿಸಿ ಎಂದು ಶಾಸಕರು ಸೂಚಿಸಿದರು.

ನಂತರ ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ ವತಿಯಿಂದ ಎಲ್ಲಾ ವರದಿಗಾರರಲಿಗೆ ನಿವೇಶನ ಒದಗಿಸುವ ಜೊತೆಗೆ ಮನೆಗಳನ್ನು ನಿರ್ಮಾಣಗೊಳಿಸಿ ಕೊಡುವಂತೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ),ಕೆಜೆಯು ತಾಲೂಕು ಅಧ್ಯಕ್ಷ ರಾಜು ಕುಂಬಾರ,ಉಪಾಧ್ಯಕ್ಷ ಮಲ್ಲು ಗುಳಗಿ,ಪ್ರಧಾನ ಕಾರ್ಯದರ್ಶಿ ಪರಶುರಾಮ ಮಲ್ಲಿಭಾವಿ,ಖಜಾಂಚಿ ಮಹಾದೇವಪ್ಪ ಕಟ್ಟಿಮನಿ ಹಾಗು ಸದಸ್ಯರಾದ ಮನಮೋಹನ್ ದೇವಾಪುರ,ಕಲೀಂ ಫರೀದಿ, ಶ್ರೀಮಂತ ಚಲುವಾದಿ,ಪುರುಷೋತ್ತಮ ದೇವತ್ಕಲ್,ಮದನ್‌ಲಾಲ ಕಟ್ಟಿಮನಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

10 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

12 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420