ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲಾ ಇಲಾಖೆಯ ಸಮನ್ವಯತೆ ಮುಖ್ಯ: ಡಾ.ಅಂತೋಣಿ ಸೆಬಾಸ್ಟಿಯನ್

ಕಲಬುರಗಿ: ಮಕ್ಕಳ ಹಕ್ಕು ರಕ್ಷಣೆ ಮಾಡಲು ಸಂಬಂಧಿಸಿದ ಎಲ್ಲಾ ಇಲಾಖೆಯ ಅಧಿಕಾರಿಗಳ ನಡುವೆ ಸಮನ್ವಯತೆ-ಸಹಕಾರ ಇರಬೇಕಾದದ್ದು ಬಹುಮುಖ್ಯ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಡಾ.ಅಂತೋಣಿ ಸೆಬಾಸ್ಟಿಯನ್ ಅವರು ಅಭಿಪ್ರಾಯಪಟ್ಟರು.

ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆರ್.ಟಿ.ಇ-೨೦೦೯, ಪೋಕ್ಸೊ-೨೦೧೨ ಹಾಗೂ ಬಾಲ ನ್ಯಾಯ ಕಾಯ್ದೆ-೨೦೧೫ರ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧಕ್ಷತೆವಹಿಸಿ ಅವರು ಮಾತನಾಡಿದರು.

ಬಾಲ ನ್ಯಾಯ ಕಾಯ್ದೆಯಲ್ಲಿರುವಂತೆ ಮಕ್ಕಳ ಸಂರಕ್ಷಣೆ ಕುರಿತು ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಬೇಕು ಎಂದು ಅವರು ಸಲಹೆ ನೀಡಿದರು.

ಮಕ್ಕಳ ಸ್ಥಿತಿಗತಿಗಳ ಬಗ್ಗೆ ಜಿಲ್ಲಾಡಳಿತ ಕ್ರಮವಹಿಸಿ ಜಿಲ್ಲೆಯಲ್ಲಿ ಬಾಲ ಕಾರ್ಮಿಕರ ಪತ್ತೆ ಹಚ್ಚುವುದು, ಬಾಲ್ಯ ವಿವಾಹ ತಡೆಕಟ್ಟುವಿಕೆ ಮುಂತಾದ ಸಾಮಾಜಿಕ ಪಿಡುಗುಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಬೇಕು ಎಂದರು. ಜಿಲ್ಲೆಯಲ್ಲಿ ಪ್ರಸ್ತುತ ಬಾಲ್ಯ ವಿವಾಹ ಪ್ರಕರಣ, ಬಾಲ ಕಾರ್ಮಿಕರ ಪತ್ತೆ ವಿಚಾರ ನಿರ್ವಹಣೆ ಹಿನ್ನೆಲೆಯಲ್ಲಿ ಅಧಿಕಾರಿಗಳ ಬಗ್ಗೆ ಆಯೋಗದ ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದರು.

ಬಾಲ್ಯವಿವಾಹ ಪ್ರಕರಣ ಹೆಚ್ಚಾಗುವುದಕ್ಕೆ ಬಾಲ್ಯ ವಿವಾಹ ನಿಷೇಧ ಅಧಿಕಾರಿಯ ಸಂಪೂರ್ಣ ನಿರ್ಲಕ್ಷವೇ ಕಾರಣ ಎಂದು ಅವರು, ಬಾಲ್ಯ ವಿವಾಹ ನಿಷೇಧ ಅಧಿಕಾರಿ ಸೇರಿದಂತೆ ಪಿಡಿಒ, ಪೊಲೀಸರು, ಅಂಗನವಾಡಿ ಕಾರ್ಯಕರ್ತರು ಪ್ರತಿ ಹಳ್ಳಿ-ಹಳ್ಳಿಗೂ ತೆರಳಿ ಸಮುದಾಯ ಅರಿವು ಕಾರ್ಯಕ್ರಮ ಮಾಡಬೇಕು ಎಂದು ತಿಳಿಸಿದರು. ಬಾಲ್ಯ ವಿವಾಹವು ಸಮಸ್ಯೆಗಳ ಆರಂಭವೇ ಹೊರತು ಇದು ಪರಿಹಾರವಲ್ಲ ಎಂದು ಪೋಷಕರು ಅರ್ಥ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇನ್ನು ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತು ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡು ಕಾರ್ಯ ನಿರ್ವಹಿಸಬೇಕು ಎಂದು ಅವರು ತಾಕೀತು ಮಾಡಿದರು. ಆಯೋಗದ ಸದಸ್ಯೆ ಡಾ.ಜಯಶ್ರೀ ಚನ್ನಾಳ ಅವರು  ಮಾತನಾಡಿ ಕೊರೋನಾ ಸಂದರ್ಭದಲ್ಲಿ ಇಡೀ ರಾಜ್ಯದಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚು ವರದಿಯಾಗಿವೆ ಎಂದು ವಿಷಾದ ವ್ಯಕ್ತಪಡಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸುಶಾಂತ ಎಂ.ಚೌಗಲೆ ಅವರು ಮಾತನಾಡಿ, ಮಕ್ಕಳ ಮೇಲಾಗುವ ದೌರ್ಜನ್ಯ ಪ್ರಕರಣ ತಡೆಗಟ್ಟುವಲ್ಲಿ ಕಾನೂನು ಅರಿವು ಮತ್ತು ತರಬೇತಿಯನ್ನು ವಿವಿಧ ಅಧಿಕಾರಿಗಳಿಗೆ ನೀಡುವುದು ಅಗತ್ಯವಿದೆ. ಹಲವು ಮಕ್ಕಳ ರಕ್ಷಣಾ ಅಧಿಕಾರಿಗಳಿಗೆ ಪೋಕ್ಸೊ ಕಾಯ್ದೆ ಬಗ್ಗೆ ಪೂರ್ಣ ತಿಳಿವಳಿಕೆ ಇಲ್ಲ ಎಂದರು.

ಬಾಲಕ ಸಾವು, ಸ್ವಯಂ ದೂರು: ಕಲಬುರಗಿ ನಗರದ ಎನ್.ಜಿ.ಒ. ಕಾಲೋನಿಯ ಸಮೀಪದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಏಳು ವರ್ಷದ ಬಾಲಕ ಮೃತಪಟ್ಟ ಘಟನೆಗೆ ಸಂಬಂಧಿಸಿ ಆಯೋಗದ ಸದಸ್ಯರಾದ ಹೆಚ್.ಸಿ.ರಾಘವೇಂದ್ರ, ಡಿ. ಶಂಕ್ರಪ್ಪ,  ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ಸಂಬಂಧ ಸ್ವಯಂ ದೂರು ದಾಖಲಿಸಿಕೊಂಡರು. ಇದಲ್ಲದೇ ಕಲಬುರಗಿ ಗ್ರಾಮೀಣ ಠಾಣೆಗೆ ಆಯೋಗದವತಿಯಿಂದ ಭೇಟಿ ನೀಡಿ ಮಕ್ಕಳಿಗೆ ಸಂಬಂಧಿಸಿ ದಾಖಲಾದ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ಸಭೆಯಲ್ಲಿ ಆಯೋಗದ ಸದಸ್ಯರಾದ ಭಾರತಿ, ಅಶೋಕ ಜಿ.ಯರಗಟ್ಟಿ, ಪರಶುರಾಮ್ ಎಂ.ಎಲ್,  ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ, ಡಿಸಿಪಿ ಅಡೂರು ಶ್ರೀನಿವಾಸುಲು, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪ ನಿರ್ದೇಶಕ  ನವೀನ ಕುಮಾರ, ಜಿಲ್ಲಾ ರಕ್ಷಣಾಧಿಕಾರಿ ಶರಣಬಸಪ್ಪ ಬೆಳಗುಂಪಿ, ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಭರತೇಶ್ ಶೀಲವಂತರ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

6 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

9 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

13 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

14 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

16 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420