ಶಹಾಬಾದ:ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕೆಂದು ಒತ್ತಾಯಿಸಿ ಗುರುವಾರ ತಾಲೂಕ ಬಂಜಾರ ಮೀಸಲಾತಿ ಸಂರಕ್ಷಣಾ ಸಮಿತಿ ಹಾಗೂ ಸಿದ್ಧರಾಮೇಶ್ವರ ಭೋವಿ ವಡ್ಡರ ಅಭಿವೃದ್ಧಿ ಸಂಘ, ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪ್ರತಿಭಟನೆಯಲ್ಲಿ ಬಂಜಾರ ಸಮಾಜದ ಮುಖಂಡ ಚಂದು ಜಾಧವ, ಕುಮಾರ ಚವ್ಹಾಣ್, ಸುರಜ ರಾಠೋಡ, ಬಂಜಾರ ಮೀಸಲಾತಿ ಸಂರಕ್ಷಣಾ ಸಮಿತಿ ಸುನೀಲ ಚವ್ಹಾಣ್, ಕಿರಣ ಚವ್ಹಾಣ್, ಭೋವಿ ಸಮಾಜದ ಅಧ್ಯಕ್ಷ ಭೀಮರಾವ ಸಾಳುಂಕೆ ಮಾತನಾಡಿ, ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯು ಅತ್ಯಂತ ಅವೈಜ್ಞಾನಿಕವಾಗಿದೆ. ಈ ಆಯೋಗ ಮಾಡಿರುವ ವರದಿಯನ್ನು ರಾಜ್ಯ ಸರ್ಕಾರ ಅನುμÁ್ಠನಗೊಳಿಸಿದರೆ, ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ 101 ಜಾತಿಯ ಜನರಿಗೆ ಅನ್ಯಾಯವಾಗಲಿದೆ. ಸದಾಶಿವ ಆಯೋಗವು ಸಮೀಕ್ಷೆ ನಡೆಸಿದ ಸಂದರ್ಭದಲ್ಲಿ ವಾಸ್ತವವಾಗಿ ಸ್ಥಳ ಪರಿಶೀಲನೆ ನಡೆಸದೆ ಒಂದೇ ಸಮುದಾಯದ ವ್ಯಕ್ತಿಗಳಿಂದ ಎಲ್ಲಾ ಜಿಲ್ಲೆಗಳಲ್ಲೂ ಮಾಹಿತಿ ಪಡೆದು ವರದಿ ರಚಿಸಿದ್ದು, ಇದು ಅತ್ಯಂತ ಅವೈಜ್ಞಾನಿಕವಾಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಈ ವರದಿಯನ್ನು ಅನುμÁ್ಠನಗೊಳಿಸಬಾರದು ಎಂದು ಒತ್ತಾಯಿಸಿದರು.
ಒಂದು ವೇಳೆ ಈ ವರದಿ ಅನುಷ್ಠಾನಗೊಂಡರೆ ರಾಜ್ಯಾದ್ಯಂತ ಉಗ್ರವಾಗಿ ಹೋರಾಟ ಮಾಡಲಾಗುವುದು ಹಾಗೂ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಗರದ ರೈಲ್ವೆ ನಿಲ್ದಾಣದಿಂದ ತಹಸೀಲ್ದಾರ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಉಪತಹಶೀಲ್ದಾರ ಮಲ್ಲಿಕಾರ್ಜುನ ರೆಡ್ಡಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬಂಜಾರ ಮೀಸಲಾತಿ ಸಂರಕ್ಷಣಾ ಸಮಿತಿ ಸುನೀಲ ಚವ್ಹಾಣ್, ಕಿರಣ ಚವ್ಹಾಣ್, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಯಶವಂತ ಚವ್ಹಾಣ್, ಸದಸ್ಯ ಧನ್ನು ರಾಠೋಡ, ಭಾರತ ರಾಠೋಡ, ಸಂತೋಷ ಪವಾರ, ಕಿಶನ ನಾಯಕ, ಶಂಕರ ಮಾರವಾಡಿ, ಗೋಪಾಲ ರಾಠೊಡ, ಭಾರತ ರಾಠೋಢ, ರವಿ ರಾಠೋಡ, ವಿಶ್ವನಾಥ ರಾಠೋಡ, ಪರಶುರಾಮ ರಾಠೋಡ, ನೂರಸಿಂಗ ರಾಠೋಡ, ವಾಲು ಪವಾರ, ನರಸಿಂಗ ರಾಠೋಡ, ಚಂದರ ನಾಯಕ, ರವಿ ಬಿಲ್ಲು, ರವಿ ರಾಠೋಡ, ನಿಲೇಶ ರಾಠೋಡ, ರವಿ ಚವ್ಹಾಣ್,
ಭೋವಿ ಸಮಾಜದ ಮುಖಂಡರಾದ ದೇವದಾಸ ಜಾಧವ, ರಾಮು ಕುಸಾಳೆ, ಶಂಕರ ಕುಸಾಳೆ, ಸಿದ್ರಾಮ ಕುಸಾಳೆ, ಸಂಜಯ ವಿಟ್ಕರ್, ರಾಮು ನಿಡಗುಂದಿ, ದೀಪಕ ಚೌಧರಿ, ರಾಕೇಶ ಪವಾರ, ಶ್ರೀನಿವಾಸ ನೇದಲಗಿ, ಶ್ರೀನಿವಾಸ ದೇವಕರ್, ಹಾಗೂ ಬಂಜಾರ ಹಾಗೂ ಭೋವಿ ಸಮಾಜದ ಮುಖಂಡರು ಪಾಲ್ಗೊಂಡಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…