ಬಿಸಿ ಬಿಸಿ ಸುದ್ದಿ

೨೧ ನೇ ವರ್ಷದ ‘ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ: ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ೨೧ ನೇ ವರ್ಷದ ‘ಅಮ್ಮ ಪ್ರಶಸ್ತಿ’ಗಾಗಿ ೨೦೨೦-೨೧ ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.

ಕಳೆದ ೨೦ ವರ್ಷಗಳಿಂದ ನಿರಂತರ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನೀಡಲಾಗುತ್ತಿರುದ್ದು, ಈಗ ‘ಅಮ್ಮ ಪ್ರಶಸ್ತಿ’ಗೆ ೨೧ ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ’ಅಮ್ಮ ಪ್ರಶಸ್ತಿ’ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದಾಗಿದೆ. ಕೃತಿಗಳನ್ನು ಸ್ವೀಕರಿಸಲು ಅಕ್ಟೋಬರ್ ೩೦ ಕೊನೆಯ ದಿನಾಂಕವಾಗಿರುತ್ತದೆ. ಆಯ್ಕೆಯಾದ ಐದು ಕೃತಿಗಳಿಗೆ ತಲಾ ಐದು ಸಾವಿರ ರೂ.ನಗದು ಪುರಸ್ಕಾರ, ಪ್ರಮಾಣ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃತಿಗಳನ್ನು ಕಳುಹಿಸಬೇಕಾದ ವಿಳಾಸ: ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರು, ಸಂಚಾಲಕಿ, “ಅಮ್ಮ ನಿಲಯ”, ರಾಮಚಂದ್ರ ಲೇಔಟ್, ಪಿ.ಡಬ್ಲ್ಯೂ.ಡಿ. ಕಚೇರಿ ಹತ್ತಿರ, ಸೇಡಂ-585 222. ಕಲಬುರಗಿ ಜಿಲ್ಲೆ. ಹೆಚ್ಚಿನ ವಿವರಗಳಿಗಾಗಿ, ಮೊಬೈಲ್: 9731666052 ಕ್ಕೆ ಸಂಪರ್ಕಿಸಬಹುದು.

emedialine

Recent Posts

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

10 mins ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

14 mins ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

16 mins ago

ಶಾಸಕ ಅಲ್ಲಮಫ್ರಬು ಪಾಟೀಲರಿಂದ ಕಂಪ್ಯೂಟರ್ ಪ್ರಮಾಣ ಪತ್ರ ವಿತರಣೆ

ಕಲಬುರಗಿ: ನಗರದ ಬಸವ ಸಿರಿ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಭಾನುವಾರ ಮುಂಜಾನೆ. 11 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷ ಮತ್ತು…

23 mins ago

ತೊಗರಿ ಮತ್ತು ಹತ್ತಿ ಬೆಳೆಗಳ ಸಸ್ಯ ಸಂರಕ್ಷಣಾ ತರಬೇತಿ 18ಕ್ಕೆ

ಕಲಬುರಗಿ; ಜಿಲ್ಲೆಯಲ್ಲಿ ಮುಂಗಾರು ಬೆಳೆಗಳಾದ ತೊಗರಿ, ಹತ್ತಿ, ಉದ್ದು, ಹೆಸರು ಮತ್ತು ಸೋಯಾಬಿನ್ ಬೆಳೆಯಲಾಗಿದ್ದು, ಇದರಲ್ಲಿ ಕಂಡು ಬರುವ ಹುಳು,…

39 mins ago

ಡೆಂಗ್ಯೂ ,ಝಿಕಾ, ಚಿಕನ್ ಗುನ್ಯಾ ತಡೆಗಟ್ಟಲು ಸರಕಾರಕ್ಕೆ ವೆಲ್ಫೇರ್ ಪಾರ್ಟಿ ಆಗ್ರಹ

  ಕಲಬುರಗಿ : "ಜಿಲ್ಲೆಯಲ್ಲಿ ಡೆಂಗಿ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝಿಕಾ ವೈರಾಣು ಸೋಂಕು, ಚಿಕನ್ ಗುನ್ಯಾ…

1 hour ago