ಮೋದಿ ಚಿಲ್ರೆ ಅಲ್ಲ, ಚಿನ್ನದ ಗಟ್ಟಿ: ಈಶ್ವರಪ್ಪ

0
31

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಚಿಲ್ಲರೆ ಅಲ್ಲ, ಅವರು ದೇಶದ ಚಿನ್ನದ ಗಟ್ಟಿಯಾಗಿದ್ದಾರೆ ಎಂದು ಕೆ.ಎಸ್ ಈಶ್ವರಪ್ಪ ಅವರು, ರಾಜ್ಯ ಸಭೆಯ ವಿರೋಧ ಪಕ್ಷದ‌ ನಾಯಕ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರ ಹೇಳಿಕೆಗೆ ತಿರುಗೇಟು ನೀಡಿದರು.

ನಗರದ ಎಚ್ ಕೆ ಸಿಸಿ ಐ ಸಭಾಂಗಣದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ದ ಪದಾಧಿಕಾರಿಗಳ ಹಾಗೂ ಪ್ರಮುಖರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

Contact Your\'s Advertisement; 9902492681

ಭಾನುವಾರ ಮಾಜಿ ಕೇಂದ್ರ ಸಚಿವ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರು, ನರೇಂದ್ರ ಮೋದಿ ಅವರನ್ನ ಚಿಲ್ಲರೆ ವ್ಯಕ್ತಿ ಎಂದು ಹೇಳಿಕೆ ನೀಡಿದ್ದನ್ನು ಖಂಡಿಸಿದ ಈಶ್ವರಪ್ಪ ಅವರು, ಖರ್ಗೆ ಅವರು ಕೂಡಲೇ ಕ್ಷಮೆ ಕೇಳಬೇಕು, ಈ ತರಹದ ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here