ಕಾಂಗ್ರೆಸ್ ಸಾಯುವ ಪಕ್ಷ : ಈಶ್ವರಪ್ಪ ವ್ಯಂಗ್ಯ

0
18

ಕಲಬುರಗಿ : ಕಾಂಗ್ರೆಸ್ ಪಕ್ಷ ಎಲ್ಲ ಕಡೆ ಒಡೆದು ಹೋಗುತ್ತಿದೆ, ಅಂತಹ ಸಾಯುವ ಪಕ್ಷಕ್ಕೆ ಯಾರಾದರೂ ಹೋಗ್ತಾರೆನ್ರಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಪಂಜಾಬ್‌ನಲ್ಲಿ ಕಾಂಗ್ರೆಸ್ ಪಕ್ಷ ಒಡೆದುಹೋದ್ರೆ, ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಪಿಸ್ ಪಿಸ್ ಆಗಿ ಹೋಗುತ್ತಿದೆ, ಅಂತಹ ಸಂದರ್ಭದಲ್ಲಿ ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಹೋಗಲ್ಲ, ನಮ್ಮ ಶಾಸಕರು ಸಿಂಹ ಇದ್ದ ಹಾಗೆ, ಅವರು ವಲಸೆ ಹೋಗುವುದಿಲ್ಲ ಎಂದು ಹೇಳಿದರು.

Contact Your\'s Advertisement; 9902492681

ಸಿದ್ದರಾಮಯ್ಯ ನನ್ನ ಬಗ್ಗೆ ಮಾತಾಡೋದು ನಿಲ್ಲಿಸುವುದು ಒಳ್ಳೆಯದು ಎಂದು ಸೂಚ್ಯವಾಗಿ ಹೇಳಿದ ಈಶ್ವರಪ್ಪ ಅವರು,
ಜೆಡಿಎಸ್‌ ಪಕ್ಷ ಮುಸ್ಲಿಂರನ್ನು ಚುನಾವಣೆಗೆ ನಿಲ್ಲಿಸಿದ್ರೆ ಕಾಂಗ್ರೆಸ್‌ಗೆ ಕೆ.ಎಸ್ ಈಶ್ವರಪ್ಪ ಹೇಳಿಕೆ
ಭಯವಾಗುತ್ತದೆ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ಪಕ್ಷ ಮೊದಲು ತನ್ನ ಅಸ್ತಿತ್ವ ಉಳಿಸಿಕೊಳ್ಳುವ ಕೆಲಸ ಮಾಡಲಿ, ಬಿಜೆಪಿ ಪಕ್ಷದ 40 ಎಂಎಲ್ ಎ ಗಳನ್ನ ಅಲ್ಲ, 4 ಜನ ಶಾಸಕರನ್ನ ಕಾಂಗ್ರೆಸ್ ಪಕ್ಷ ಸೆಳೆಯಲಿ ಎಂದು ಈಶ್ವರಪ್ಪ ಸವಾಲು ಹಾಕಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here