ಶಹಾಬಾದ : ನಗರವನ್ನು ನಿತ್ಯವೂ ಸ್ವಚ್ಛಗೊಳಿಸುವುದರ ಕಾರ್ಯದಲ್ಲಿ ತೊಡಗಿರುವ ಪೌರ ಕಾರ್ಮಿಕರು ಕರೋನಾ ಸಂದರ್ಭದಲ್ಲಿಯೂ ಸಹ ಉತ್ತಮ ಕಾರ್ಯನಿರ್ವಹಿಸುವ ಮೂಲಕ ಕರೋನಾ ವೀರರಂತೆ ಕರ್ತವ್ಯ ನಿರ್ವಹಿಸಿರುವ ಪ್ರತಿಯೊಬ್ಬ ಪೌರ ಕಾರ್ಮಿಕರನ್ನು ಗೌರವದಿಂದ ಕಾಣುವುದು ಅವರಿಗೆ ನಾವುಗಳು ನೀಡುವ ಗೌರವ ಎಂದು ಅಧಿಸೂಚಿತ ಕ್ಷೇತ್ರ ಸಮಿತಿಯ ಮುಖ್ಯಾಧಿಕಾರಿ ಪೀರಶೆಟ್ಟಿ ಹೇಳಿದರು.
ಅವರು ನಗರದ ಅಧಿಸೂಚಿತ ಕ್ಷೇತ್ರ ಸಮಿತಿಯಲ್ಲಿ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಿತ್ಯವೂ ಬೆಳಗಿನ ಜಾವ ನಗರವನ್ನು ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರನ್ನು ನಾನಾ ಸಾಂಕ್ರಮಿಕ ರೋಗಗಳಿಂದ ರಕ್ಷಣೆ ಮಾಡುತ್ತಿದ್ದಾರೆ. ಅವರ ನಿಸ್ವಾರ್ಥ ಹಾಗೂ ಕರ್ತವ್ಯಕ್ಕೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಪ್ರತಿ ವ?ವೂ ಪೌರ ಕಾರ್ಮಿಕರ ದಿನಾಚರಣೆಯ ಮೂಲಕ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.
ಎಇ ಶಾಂತರೆಡ್ಡಿ ದಂಡಗುಲಕರ್ ಮಾತನಾಡಿ, ನಗರದ ಸೌಂದರ್ಯ ಮತ್ತು ಸ್ವಚ್ಛತೆ ಕಾಪಾಡುವ ಮೂಲಕ ನಮ್ಮೆಲ್ಲರ ಆರೋಗ್ಯ ಕಾಪಾಡುತ್ತಿರುವ ಪೌರಕಾರ್ಮಿಕರ ಸೇವೆ ವೈದ್ಯರು ಮತ್ತು ದೇವರಿಗಿಂತ ಮಿಗಿಲಾದುದು ಎಂದು ಹೇಳಿದರು.
ಕರ್ನಾಟಕ ರಾಜ್ಯ ಪೌರ ನೌಕರರ ಸೇವಾ ಸಂಘದ ಜಿಲ್ಲಾಧ್ಯಕ್ಷ ಮುತ್ತಣ್ಣಾ ಭಂಡಾರಿ ಮಾತನಾಡಿ, ನಗರ ಹಾಗೂ ನಗರದ ಸಾರ್ವಜನಿಕರು ನಮ್ಮವರು ಎಂಬ ಭಾವನೆಯಿಂದ ಕೆಲಸ ಮಾಡುತ್ತಿರುವ ಪೌರಕಾರ್ಮಿಕರು ನಿಜವಾಗಲೂ ಕಾಯಕಯೋಗಿಗಳಾಗಿದ್ದಾರೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಪೌರ ನೌಕರರ ಸೇವಾ ಸಂಘದ ರಾಜ್ಯ ಪರಿಷತ ಸದಸ್ಯ ಯಾಕೂಬ ಅಲಿ ಮಾತನಾಡಿ, ಕೋವಿಡ್ ಮೊದಲನೇ ಅಲೆಯ ಸಂದರ್ಭದಲ್ಲಿ ಪೌರಕಾರ್ಮಿಕರು ನಗರದ ಸ್ವಚ್ಛತೆಯೊಂದಿಗೆ ಮನೆಮನೆಗೆ ತೆರಳಿ ಜನರಿಗೆ ಒದಗಿಸಿರುವ ಸೇವೆ ದೊಡ್ಡದಿದೆ ಎಂದರು.
ಮುಖಂಡರಾದ ಬಸವರಾಜ ಮಯೂರ, ಪೌರಕಾರ್ಮಿಕರು ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…