ಪ್ರಧಾನ ಮಂತ್ರಿ ಆವಾಸ ಯೋಜನೆ ಮನೆಯಿಲ್ಲದವರಿಗೆ ಸಹಕಾರಿ: ಅಂಜಲಿ

ಶಹಾಬಾದ:ಮನೆಯಿಲ್ಲದವರಿಗೆ ಮನೆಗಳನ್ನು ಕಟ್ಟಿಕೊಳ್ಳಲು ಪ್ರಧಾನ ಮಂತ್ರಿ ಆವಾಸ ಯೋಜನೆ ಸಾರ್ವಜನಿಕರಿಗೆ ಬಹಳಷ್ಟು ಸಹಕಾರಿಯಾಗಿದೆ ಎಂದು ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಹೇಳಿದರು.

ಅವರು ಶನಿವಾರ ನಗರಸಭೆ ವತಿಯಿಂದ ನಗರದ ಎಸ್.ಎಸ್.ಮರಗೋಳ ಕಾಲೇಜಿನಲ್ಲಿ ಆಯೋಜಿಸಲಾದ ಪ್ರಧಾನ ಮಂತ್ರಿ ಆವಾಸ ಯೋಜನೆ-ನಗರ ಹೌಸಿಂಗ್ ಫಾರ್ ಆಲ್ ಯೋಜನೆಯಡಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಲಾದ ಕ್ರೀಡಾ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ನಗರದ ಶಾಲಾ-ಕಾಲೇಜುಗಳಲ್ಲಿ ಪ್ರಧಾನ ಮಂತ್ರಿ ಆವಾಸ ಯೋಜನೆಯ ಮೂಲ ಉದ್ದೇಶವನ್ನು ಎಲ್ಲರಿಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವಚ್ಛತೆ, ಕಾಲೇಜು ಮಟ್ಟದಲ್ಲಿ ಕ್ರೀಡಾ ಸ್ಪರ್ಧೆ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಯೋಜನೆ ಬಗ್ಗೆ ತಿಳಿಸಲಾಗುತ್ತಿದೆ. ಅಲ್ಲದೇ ಈ ಯೋಜನೆಯಿಂದ ಮನೆ ಕಟ್ಟಿಕೊಳ್ಳಲು ಸಬ್ಸಿಡಿ ಇದೆ ಎಂದು ಪಾಲಕರಿಗೆ ತಿಳಿಸಿ ಎಂದು ಹೇಳಿದರು.

ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಮಾತನಾಡಿ, ಪ್ರಧಾನ ಮಂತ್ರಿ ಆವಾಸ ಯೋಜನೆ ಮುಖಾಂತರ ಪ್ರತಿ ಕುಟುಂಬಕ್ಕೂ ಮನೆ ಸಿಗುವಂತಾಗಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದ್ದು, ಅದನ್ನು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲವು ಕಾರ್ಯಕ್ರಮಗಳ ಮೂಲಕ ಜನರಲ್ಲಿ ಅರಿವು ಮೂಡಿಸುತ್ತಿದ್ದೆವೆ.ಕೇಂದ್ರದ ಸಹಾಯದೊಂದಿಗೆ ನಗರ ಸ್ಥಳೀಯ ಸಂಸ್ಥೆಗಳು, ಬ್ಯಾಂಕಗಳ ಸಹಯೋಗದಲ್ಲಿ ನಿರ್ಮಿಸಲಾಗುತ್ತಿದೆ.ಅಲ್ಲದೇ ಸಬ್ಸಿಡಿ ಕೂಡ ಇದ್ದು, ಸಾರ್ವಜನಿಕರು ಈ ಯೋಜನೆಯ ಲಾಭ ಪಡೆಯಬೇಕೆಂದು ಹೇಳಿದರು.

ನಗರಸಭೆಯ ಉಪಾಧ್ಯಕ್ಷೆ ಸಲೀಮಾ ಬೇಗಂ,ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ, ನಗರಸಭೆಯ ಸದಸ್ಯರಾದ ಡಾ.ಅಹ್ಮದ್ ಪಟೇಲ್, ಪಾರ್ವತಿ ಪವಾರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮುಜಾಮಿಲ್ ಅಲಂ,ಕಲಬುರಗಿಯ ಡಿಯುಡಿಸಿ ಸಾಮಾಜಿಕ ಅಭಿವೃದ್ಧಿ ಅಧಿಕಾರಿ ಗೀತಾ ಹುಡುಗಿ,ಡಿಯುಡಿಸಿ ಅಧಿಕಾರಿ ರೋಹಿಣಿ, ಎಸ್.ಎಸ್.ಮರಗೋಳ ಕಾಲೇಜಿನ ಪ್ರಾಂಶುಪಾಲ ಅನೀಲಕುಮಾರ ಕೊಪ್ಪಳಕರ್,ಕಂದಾಯ ಅಧಿಕಾರಿ ಸುನೀಲಕುಮಾರ ವೀರಶೆಟ್ಟಿ, ಸಮುದಾಯ ಸಂಘಟಕ ಅಧಿಕಾರಿ ರಘುನಾಥ ನರಸಾಳೆ, ಆರೋಗ್ಯ ನಿರೀಕ್ಷಕ ಶಿವರಾಜಕುಮಾರ,ಉಪನ್ಯಾಸಕ ಗುರಲಿಂಗಪ್ಪ ತುಂಗಳ,ಮಹ್ಮದ್ ಇರ್ಫಾನ್ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

10 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

13 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

17 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

18 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

20 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420