ಬಿಸಿ ಬಿಸಿ ಸುದ್ದಿ

ಕಲಾಕ್ಷೇತ್ರದಲ್ಲಿ ಕಲಾ ಪ್ರದರ್ಶನ ನಿರ್ವಹಣೆ ತುಂಬಾ ಮುಖ್ಯ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಮಹಿಳಾ ಚಿತ್ರಕಲಾವಿದರು ತಮ್ಮ ಸಂಕೋಚ ಸ್ವಭಾವದಿಂದ ಹೊರಬಂದು ಹೆಚ್ಚಿನ ಸಂಖ್ಯೆಯಲ್ಲಿ ಕಲಾ ಪ್ರದರ್ಶನಗಳನ್ನು ಏರ್ಪಡಿಸಿ, ದೃಶ್ಯಕಲಾ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸಬೇಕೆಂದು ಚೈತನ್ಯಮಯಿ ಆರ್ಟ್ ಗ್ಯಾಲರಿಯ ನಿರ್ದೇಶಕ ಡಾ.ಎ.ಎಸ್.ಪಾಟೀಲ್ ಹೇಳಿದರು.

ಬೀದರನ ಯುವ ಚಿತ್ರಕಲಾವಿದೆ ಲಕ್ಷ್ಮೀಬಾಯಿ ಚಳಕಾಪುರೆ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧನಸಹಾಯದೊಂದಿಗೆ ಏರ್ಪಡಿಸಿದ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ಕಲಾವಿದರ ಚಿತ್ರಕಲಾಕೃತಿಗಳು ಸಾರ್ವಜನಿಕವಾಗಿ ಪ್ರದರ್ಶನಗೊಂಡಾಗ ಆ ಕಲಾಕೃತಿ ರಚಿಸಿದಕ್ಕೂ ಸಾರ್ಥಕವಾಗುತ್ತದೆ. ನೋಡುಗ ಹಾಗೂ ಕಲಾವಿದರ ನಡುವೆ ಸಂಬಂಧ ಏರ್ಪಡುತ್ತದೆ. ಯುವ ಚಿತ್ರಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರತಿಭಾವಂತ ಚಿತ್ರಕಲಾವಿದರನ್ನು ಗುರುತಿಸಿ ಧನ ಸಹಾಯ ನೀಡುತ್ತದೆ. ಇದರ ಸದುಪಯೋಗ ಪಡೆಯಬೇಕೆಂದು ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯ ದೃಶ್ಯಕಲಾ ವಿಭಾಗದ ಉಪನ್ಯಾಸಕ ಡಾ.ಪರಶುರಾಮ ಪಿ. ಮುಖ್ಯ ಅತಿಥಿಯಾಗಿ ಮಾತನಾಡಿ ಕಲ್ಯಾಣ ಕರ್ನಾಟಕ ಭಾಗದ ಚಿತ್ರಕಲಾವಿದರು ಉತ್ತಮ ಗುಣಮಟ್ಟದ ಚಿತ್ರಕಲಾಕೃತಿಗಳನ್ನು ರಚಿಸುತ್ತಾರೆ. ಆದರೆ ಅವುಗಳನ್ನು ಸರಿಯಾದ ಕ್ರಮದಲ್ಲಿ ಕಲಾ ಪ್ರದರ್ಶನ ಏರ್ಪಡಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಭಾಗದ ಕಲಾವಿದರು ಕಲಾ ಪ್ರದರ್ಶನದ ನಿರ್ವಹಣೆ ಕುರಿತು ಹೆಚ್ಚು ಗಮನಹರಿಸಿ ತಮ್ಮ ಸಂವಹನ ಕೌಶಲ್ಯವನ್ನು ಉತ್ತಮ ಪಡಿಸಿಕೊಳ್ಳಬೇಕೆಂದು ಅಭಿಪ್ರಾಯಪಟ್ಟರು.

ದಿ ಆರ್ಟ್ ಇಂಟಿಗ್ರೇಷನ್ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಎಂ.ಎಚ್.ಬೆಳಮಗಿ ಮಾತನಾಡಿ ’ಚಿತ್ರಕಲೆಯು ಮಹತ್ತರವಾದ ಮಾಧ್ಯಮವಾಗಿದ್ದು, ಈ ಕ್ಷೇತ್ರದಲ್ಲಿ ಹಲವಾರು ವಿದ್ಯಾರ್ಥಿಗಳು ಬದುಕು ಕಟ್ಟಿಕೊಂಡಿದ್ದಾರೆ ಎಂದರು.

ಬಿ.ಎನ್.ಪಾಟೀಲ್ ನಿರೂಪಿಸಿ ಸ್ವಾಗತಿಸಿ, ವಂದಿಸಿದರು. ಚಿತ್ರಕಲಾವಿದ ಬಸವರಾಜ ಎಲ್.ಜಾನೆ, ಡಾ.ಅಶೋಕ ಶೆಟಕಾರ್, ನಿಂಗಣ್ಣ ಡಿ.ಕೇರಿ, ಬಸವರಾಜ ಕಮಾಜಿ, ದತ್ತಾತ್ರೇಯ ಇಕ್ಕಳಕಿ ಮತ್ತು ಅನೇಕ ಕಲಾವಿದ್ಯಾರ್ಥಿಗಳು ಇದ್ದರು. ನಗರದ ಅಂಕುರ ಆರ್ಟ್ ಗ್ಯಾಲರಿ, ದಿ ಆರ್ಟ್ ಇಂಟಿಗ್ರೇಷನ್ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಲಕ್ಷ್ಮೀಬಾಯಿ ಚಳಕಾಪುರೆ ರಚಿಸಿದ ಕಲಾಕೃತಿಗಳು ಮೂರು ದಿನ ಅಕ್ಟೋಬರ ೭ರವರೆಗೆ ಪ್ರದರ್ಶನಗೊಳ್ಳಲಿವೆ.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

4 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

16 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

17 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

18 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

18 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

18 hours ago