ಬಿಸಿ ಬಿಸಿ ಸುದ್ದಿ

ಡೇಶ್ವರಿಹಾಳ ಗ್ರಾಮದ ಘಟನೆ ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

ಸುರಪುರ: ಚೌಡೇಶ್ವರಿಹಾಳ ಗ್ರಾಮದಲ್ಲಿ ಭಾನುವಾರ ರಾತ್ರಿ ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯನ್ನು ಖಂಡಿಸಿ ಮತ್ತು ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ದಲಿತ ಸಂಘಟನೆಗಳ ಮುಖಂಡರು ಸುರಪುರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ:ಸಿ.ಬಿ.ವೇದಮೂರ್ತಿಯವರು ಭೇಟಿ ನೀಡಿ ಪ್ರತಿಭಟನೆಯನ್ನು ನಿಲ್ಲಿಸಲು ಮನವಿ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು,ಗ್ರಾಮೀಣ ಪ್ರದೇಶದಲ್ಲಿ ನಮ್ಮ ದಲಿತ ಸಮುದಾಯದ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ.ನಿತ್ಯವು ಮಹಿಳೆಯರ ಮೇಲೆ ಇಂತಹ ಘಟನೆಗಳು ಜರಗುತ್ತಿವೆ.ಇದಕ್ಕೆ ಉದಾಹರಣೆ ಎಂದರೆ ಚೌಡೇಶ್ವರಿಹಾಳ ಗ್ರಾಮದಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವುದಾಗಿದೆ.

ಈ ಘಟನೆಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು,ಗ್ರಾಮದಲ್ಲಿನ ನಮ್ಮ ಸಮುದಾಯದ ಜನರಿಗೆ ರಕ್ಷಣೆ ನೀಡಬೇಕು,ಮಹಿಳೆಯ ಸಾವಿಗೆ ಪರಿಹಾರ ನೀಡಬೇಕು,ಗ್ರಾಮೀಣ ಪ್ರದೇಶದಲ್ಲಿನ ಅಸ್ಪಶ್ಯತೆಯನ್ನು ನಿವಾರಣೆ ಮಾಡಬೇಕು.ಮುಖ್ಯವಾಗಿ ನಾಳೆ ಸಂಜೆಯ ಒಳಗಾಗಿ ಆರೋಪಿಗಳನ್ನು ಬಂಧಿಸಬೇಕು,ಅಲ್ಲಿಯವರೆಗೂ ಮೃತಪಟ್ಟಿರುವ ಮಹಿಳೆಯ ಶವಸಂಸ್ಕಾರ ನೆರವೇರಿಸುವುದಿಲ್ಲ ಎಂದು ಪಟ್ಟು ಹಿಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್ಪಿ ವೇದಮೂರ್ತಿಯವರು,ತಾವು ಹೇಳಿದಂತೆ ನಾಳೆ ಸಂಜೆಯ ಒಳಗಾಗಿ ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದರು.ಅಲ್ಲದೆ ಅಲ್ಲಿಯ ಜನರಿಗೆ ರಕ್ಷಣೆ ನೀಡಲಾಗುವುದು,ಮುಂದೆ ಈ ರೀತಿಯ ಘಟನೆ ಜರುಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ನಿಲ್ಲಿಸಿದರು.

ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್ಪೇಕ್ಟರ್ ಸುನೀಲಕುಮಾರ ಮೂಲಿಮನಿ,ಪಿಎಸ್‍ಐ ಕೃಷ್ಣಾ ಸುಬೇದಾರ ಹಾಗು ಹೋರಾಟಗಾರರಾದ ನಂದಣ್ಣ ಬಾಂಬೇಕರ್ ಕನ್ನೆಳ್ಳಿ,ಹಣಮಂತ ಕಟ್ಟಿಮನಿ ಬೊಮ್ಮನಹಳ್ಳಿ,ಭೀಮಣ್ಣ ದೀವಳಗುಡ್ಡ,ಮಾನಪ್ಪ ಹುಲಕಲ್,ಬಸವರಾಜ ಮುಷ್ಠಳ್ಳಿ,ಮಲ್ಲಿಕಾರ್ಜುನ ಲಕ್ಷ್ಮೀಪುರ,ನಿಂಗಣ್ಣ ಬುಡ್ಡಾ,ಬಸವರಾಜ ಸೂಗುರು,ಬಸವರಾಜ ಮುಷ್ಠಳ್ಳಿ,ಬಸವರಾಜ ಕೊಂಗಂಡಿ,ಭೀಮಣ್ಣ ಲಕಡಿಮನಿ,ನಾಗರಾಜ ಓಕಳಿ,ರಾಮು ಪಾಳದಕೇರಾ ಸೇರಿದಂತೆ ಇನ್ನೂ ಅನೇಕರು ಪ್ರತಿಭಟನೆಯಲ್ಲಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

12 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

12 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

14 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

14 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

14 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

15 hours ago