ಸ್ವಾತಂತ್ರ್ಯ ಹೋರಾಟದ ಕ್ರಾಂತಿಕಾರಿ ನಾಯಕ ಭಗತ್‍ಸಿಂಗ್

ಶಹಾಬಾದ: ಭಾರತದಲ್ಲಿ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸ್ವಾತಂತ್ರ್ಯ ಹೋರಾಟದಲ್ಲಿ ಗೊತ್ತಿರುವ ಕ್ರಾಂತಿಕಾರಿ ನಾಯಕ ಎಂದರೆ ಅದು ಭಗತ್‍ಸಿಂಗ್ ಅಲ್ಲದೇ ಮತ್ಯಾರೂ ಅಲ್ಲ ಎಂದು ಎಸ್‍ಯುಸಿಐ(ಸಿ) ಸ್ಥಳೀಯ ಕಾರ್ಯದರ್ಶಿ ಗಣಪತ್‍ರಾವ್ ಮಾನೆ ಹೇಳಿದರು.

ಅವರು ನಗರದ ಎಐಡಿಎಸ್‍ಓ ಸಂಘಟನೆ ವತಿಯಿಂದ ಆಯೋಜಿಸಲಾದ ಶಹೀದ್ ಭಗತ್ ಸಿಂಗ ರವರ 114 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕ್ರಾಂತಿಕಾರಿ ಭಗತ್‍ಸಿಂಗ್ ಅವರ ಪಾತ್ರ ಬಹಳ ಮಹತ್ವದ್ದಾಗಿದೆ. ಬ್ರಿಟಿಷರ ವಿರುದ್ಧ ಎದೆಗುಂದದೆ ಹೋರಾಡಿ ತನ್ನ 23ನೇ ವಯಸ್ಸಿನಲ್ಲೇ ವೀರಮರಣ ಹೊಂದಿದ ಧೀಮಂತ ಭಗತ್‍ಸಿಂಗ್. ಭಗತ್ ಸಿಂಗ್ ಹುಟ್ಟು ಹೋರಾಟಗಾರ. ಸಾಮಾಜಿಕ ಕ್ರಾಂತಿಕಾರಿ. 1931ರಲ್ಲಿ ತನ್ನ ಗೆಳೆಯರಾದ ರಾಜ್‍ಗುರು ಮತ್ತು ಸುಖದೇವ್ ಜೊತೆಗೆ ನೇಣಿಗೆ ಕೊರಳೊಡ್ಡಿದ ವೀರ ಸೇನಾನಿ. ಬ್ರಿಟಿಷರ ವಿರುದ್ಧ ಕ್ರಾಂತಿಕಾರಿ ಹೋರಾಟ ನಡೆಸಿದ ವೀರ. ದೇಶಕ್ಕಾಗಿ ತನ್ನ ಪ್ರಾಣ ತ್ಯಾಗ ಮಾಡಿದ ಧೀರ ಭಗತ್ ಸಿಂಗ್. ಆದರೆ ಇಂದು ಸರಕಾರದ ಎಲ್ಲಾ ನೀತಿಗಳು ಕಾರ್ಪೋರೇಟ್ ಪರವಾಗಿ ತರುತ್ತಿದ್ದು ಇದರ ವಿರುದ್ಧ ಹೋರಾಡಲು ಭಗತ್‍ಸಿಂಗ್‍ರ ವಿಚಾರ ಬಹಳ ಅವಶ್ಯಕವೆಂದು ಎಂದು ಹೇಳಿದರು.

ಎಐಡಿವೈಓ ಜಿಲಾ ್ಲಕಾರ್ಯದರ್ಶಿ ಜಗನ್ನಾಥ.ಎಸ್.ಎಚ್ ಕೃಷಿ ನೀತಿಗಳು ಸಾರ್ವಜನಿಕ ಉದ್ಯಮಗಳ ಖಾಸಗಿಕರಣ ಹಾಗೂ ಬೆಲೆ ಏರಿಕೆ ಕಾರ್ಪೋರೇಟ್ ಪರವಾಗಿದ್ದು ಇದರ ವಿರುಧ್ಧ ಸಂಘಟಿತ ಹೋರಾಟ ಕಟ್ಟಲು ಯುವಜನರು ಮಂದಾಗಬೇಕೆಂದು ಹೇಳಿದರು.

ಎಐಡಿಎಸ್‍ಓ ಅಧ್ಯಕ್ಷ ಸಿದ್ದು ಚೌಧರಿ ಅಧ್ಯಕ್ಷತೆ ವಹಿಸಿದ್ದರು.
ತಿಮ್ಮಯ್ಯ ಮಾನೆ , ನೀಲಕಂಠ.ಎಮ್.ಹುಲಿ , ಪ್ರವೀಣ.ಬಿ , ಶ್ರೀನೀವಾಸ , ರಾಘು ಪವಾರ, ಮಲ್ಲಿಕಾರ್ಜನ್, ಕಿರಣ ಕುಮಾರ ಇತರರು ಇದ್ದರು.

emedialine

Recent Posts

ಶರಣಬಸವ ವಿಶ್ವವಿದ್ಯಾಲಯದಲ್ಲಿ 14ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಜಂಟಿಯಾಗಿ, ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ…

46 mins ago

ಕಾ.ಸೀತಾರಾಮ ಯೇಚೂರಿಗೆ ಸಿಪಿಐಎಂ ಕಚೇರಿಯಲ್ಲಿ ಶೃದ್ಧಾಂಜಲಿ

ಕಲಬುರಗಿ: ಸಿಪಿಐಎಂ ಪಕ್ಷದ ಅಖಿಲ ಭಾರತ ಪ್ರದಾನ ಕಾರ್ಯದರ್ಶಿಗಳಾಗಿದ್ದ 72 ವಯಸ್ಸಿನ ಕಾ.ಸೀತಾರಾಮ ಯೇಚೂರಿಯವರು ಇಂದು ಸಂಜೆ ನಿಧನ ಹೊಂದಿದ್ದು,…

53 mins ago

ಕ್ರೀಡೆಗಳು ವಿದ್ಯಾರ್ಥಿಗಳನ್ನು ಸಧೃಡ ಆರೋಗ್ಯವಾಗಿ ಇಡುತ್ತವೆ

ಕಲಬುರಗಿ: ಕ್ರೀಡೆಗಳು ವಿದ್ಯಾರ್ಥಿಗಳು ಸದೃಢವಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಅವರು ದೈನಂದಿನ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅನಿರೀಕ್ಷಿತ ರೋಗಗಳು…

1 hour ago

PDA ಕಾಲೇಜಿನಲ್ಲಿ ಸೆ. 13,14 ರಂದು ವಿಚಾರ ಸಂಕಿರಣ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ ಕಾಲೇಜಿನಲ್ಲಿ ನಾಳೆಯಿಂದ ಎರಡುದಿನಗಳ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ…

1 hour ago

ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತ ನೂತನ ಸಮಿತಿ ರಚನೆ

ಕಲಬುರಗಿ: ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ಸಭೆಯಲ್ಲಿ ಜಿಲ್ಲಾ ಸಮಿತಿ ರಚಿಸಲಾಯಿತು. ಈ ವೇಳೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ…

1 hour ago

ಕಲಬುರಗಿ: ಸೆ. 13 ರಿಂದ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ”ರು ಅಭಿಯಾನ

ಕಲಬುರಗಿ: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಘಟಕದ ವತಿಯಿಂದ "ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ" ಎಂಬ ಧ್ಯೇಯವಾಕ್ಯದಡಿ ರಾಜ್ಯವ್ಯಾಪಿ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420