ಬಿಸಿ ಬಿಸಿ ಸುದ್ದಿ

ಕೇಂದ್ರ ಬಜೆಟ್‌ಲ್ಲಿನ ಯೋಜನೆ ಜಾರಿಗಾಗಿ ಒತ್ತಾಯಿಸಿ ಪ್ರತಿಭಟನೆ

ಸುರಪುರ: ನರೇಂದ್ರ ಮೋದಿಯವರ ಕೇಂದ್ರ ಸರಕಾರ ಬಜೆಟ್ ಮಂಡಿಸಿದ ಒಂದೆ ದಿನದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮಾಡುವ ಮೂಲಕ ಜನರ ಮೇಲೆ ಹೊರೆ ಹಾಕಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಸೇನೆ ರಾಜ್ಯ ಕಾರ್ಯಾಧ್ಯಕ್ಷ ವೆಂಕೋಬ ದೊರೆ ಬೇಸರ ವ್ಯಕ್ತಪಡಿಸಿದರು.

ನಗರದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದಲ್ಲಿ ಸೇನೆಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ,ಮೋದಿಯವರು ಡಿಸೇಲ್,ಪೆಟ್ರೋಲ್ ಬೆಲೆಗಳನ್ನು ಬಜೆಟ್ ಘೋಷಿಸಿದ ದಿನವೇ ಹೆಚ್ಚಿಸುತ್ತಾರೆ.ಆದರೆ ಅದೇ ಬಜೆಟಲ್ಲಿ ಘೋಷಿಸಿದ ಇತರೆ ಯೋಜನೆಗಳ ಜಾರಿಗು ಇದೇ ರೀತಿ ತುರ್ತು ಕ್ರಮ ಕೈಗೊಳ್ಳಬೇಕು.ಆದರೆ ಆದಾಯ ಬರುವುದಕ್ಕೆ ಕಾಳಜಿ ತೋರುತ್ತಾರೆ,ಜನರಿಗೆ ಸೌಲಭ್ಯಗಳ ನೀಡುವಲ್ಲಿ ನಿಷ್ಕಾಳಜಿ ತೋರುತ್ತಾರೆ.ಗೃಹಸಾಲ ತೆರಿಗೆ ವಿನಾಯಿತಿ,ಶೂನ್ಯ ಬಂಡವಾಳ ಬೇಸಾಯ ಯೋಜನೆ,ಮೀನುಗಾರರ ಸಂಪದ ಯೋಜನೆ,ಪಿ.ಎಂ.ಜಿ.ಇ.ಎಸ್ ಮನೆ ಯೋಜನೆ,ಮಹಿಳಾ ಸಂಘದ ಸದಸ್ಯರಿಗೆ ಒಮದು ಲಕ್ಷ ಸಾಲ ಇವೆಲ್ಲವುಗಳನ್ನು ಕೂಡಲೆ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯದಲ್ಲಿನ ಶಾಸಕರ ಕುದುರೆ ವ್ಯಾಪಾರ ನಡೆದಿದೆ.ಇದರಿಂದ ರಾಜ್ಯದ ಅಭೀವೃಧ್ಧಿ ಕುಂಠಿತವಾಗುತ್ತಿದೆ.ಅಲ್ಲದೆ ರಾಜಕೀಯ ಅರಾಜಕತೆ ಸೃಷ್ಟಿ ಮಾಡುವ ಮೂಲಕ ಬಿಜೆಪಿ ಪಕ್ಷ ರಾಜ್ಯದ ರೈತರಿಗೆ ಮಳೆಯಿಲ್ಲದೆ ಚಿಂತೆಯಲ್ಲಿರುವಾಗ ಈರೀತಿಯಾಗಿ ಸರಕಾರದ ಅಸ್ಥಿರಗೊಳಿಸುವುದನ್ನು ಜನ ನೋಡಿ ಬೇಸತ್ತಿದ್ದಾರೆ ಎಂದು ಪಕ್ಷದ ವಿರುಧ್ಧ ಅಸಮಧಾನಗೊಂಡು ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತ ಕೇಂದ್ರ ಸರಕಾರದ ವಿರುಧ್ಧ ಘೋಷಣೆಗಳ ಕೂಗಿ,ನಂತರ ಪ್ರಾದೇಶಿಕ ಆಯುಕ್ತರಿಗೆ ಬರೆದ ಮನವಿಯನ್ನು ತಹಸೀಲ್ ಕಚೇರಿ ಸಿಬ್ಬಂದಿ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ರಾಜಾ ಪಿಡ್ಡನಾಯಕ,ವೆಂಕಟೇಶ ಭಕ್ರಿ,ಗೋಪಾಲ ಬಾಗಲಕೋಟೆ,ಮಾನಯ್ಯ ದೊರೆ,ಕೃಷ್ಣಾ ದಿವಾಕರ,ಕೇಶಣ್ಣ ದೊರೆ,ಬಸವರಾಜ ಕವಡಿಮಟ್ಟಿ,ದೇವಪ್ಪ ದೇವರಮನಿ ಸೇರಿದಂತೆ ಇತರರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420