ಸುರಪುರ: ತಾಲ್ಲೂಕಿನ ತಿಂಥಣಿ ಗ್ರಾಮದಲ್ಲಿರುವ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯದ್ವಾರದ ಬಳಿಯಲ್ಲಿ ತೆರೆದ ಚರಂಡಿಯನ್ನು ಕಂಡು ಮಕ್ಕಳ ಪೋಷಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಚಿಕ್ಕ ಮಕ್ಕಳು ಶಾಲೆಗೆ ಹೋಗಬೇಕಾದರೆ ಚರಂಡಿ ದಾಟಿಕೊಂಡು ಹೋಗಬೇಕು.ಅಲ್ಲದೆ ಈ ಚರಂಡಿ ಪಕ್ಕದಿಂದಲೆ ಬೈಕ್,ಮೋಟಾರು ವಹನಗಳು ಓಡಾಡುತ್ತವೆ.ಇದರಿಂದ ಅಪಾಯ ಹೆದರಿಸಬೇಕಾಗಿದೆ. ಸದಾಕಾಲ ಚರಂಡಿಯಲ್ಲಿ ಮನೆಗಳಿಂದ ಬರುವ ಹೊಲಸು ನೀರು ಹರಿಯುವದರಿಂದ ಗಬ್ಬು ನಾತ ಬೀರುತ್ತದೆ.ಅಲ್ಲದೆ ಸೊಳ್ಳೆಗಳು ಹುಟ್ಟಿಕೊಂಡು ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.
ಅನೇಕ ಬಾರಿ ಗ್ರಾಮ ಪಂಚಾಯತಿಗೆ ಮೌಖಿಕವಾಗಿ ತಿಳಿಸಿದರು ಯಾವ ಕ್ರಮ ಕೈಗೊಳ್ಳುತ್ತಿಲ್ಲ.ಇದರಿಂದ ಮಕ್ಕಳ ಪೋಷಕರಿಗೆ ಸ್ಥಳಿಯ ಪಂಚಾಯತಿ ಮತ್ತು ಶಾಲಾ ಮಂಡಳಿಯ ಮೇಲು ಬೇಸರ ಮೂಡುತ್ತಿದೆ.
ಯಾದಗಿರಿ ಜಿಲ್ಲಾ ಪಂಚಾಯತಿಯ ಹಾಲಿ ಅಧ್ಯಕ್ಷರಾಗಿರುವ ರಾಜಶೇಖರಗೌಡ ಪಾಟೀಲ ವಜ್ಜಲವರ ಕ್ಷೇತ್ರವ್ಯಾಪ್ತಿಯ ಈ ಗ್ರಾಮದಲ್ಲಿನ ಚರಂಡಿಯನ್ನು ಮುಚ್ಚಿಸುವ ಕೆಲಸವನ್ನು ಅಧ್ಯಕ್ಷರು ಮಾಡಬೇಕೆಂದು ಕರ್ನಾಟಕ ಸಂರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮೌನೇಶ ಬೋವಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕೂಡಲೆ ಗ್ರಾಮ ಪಂಚಾಯತಿ ಅಥವಾ ಶಿಕ್ಷಣ ಇಲಾಖೆ ಈ ಚರಂಡಿ ಮುಚ್ಚಿಸುವ ಕೆಲಸ ಮಾಡಬೇಕು. ಇಲ್ಲವಾದರೆ ಗ್ರಾಮದ ಜನರು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…