ಘಟನೆಯಿಂದ ನಾವೆಲ್ಲರು ತಲೆ ತಗ್ಗಿಸುವಂತಾಗಿದೆ :ಶಾಸಕ ರಾಜೂಗೌಡ

ಸುರಪುರ: ತಾಲೂಕಿನ ಚೌಡೇಶ್ವರಹಾಳ ಗ್ರಾಮದಲ್ಲಿ ಕಳೆದ ಭಾನುವಾರ ರಾತ್ರಿ ದುಷ್ಕರ್ಮಿಯಿಂದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಮಹಿಳೆ ಹತ್ಯೆ ಮಾಡಲಾದ ಘಟನೆ ಹಿನ್ನೆಲೆಯಲ್ಲಿ ಸಂತ್ರಸ್ತ ಕುಟುಂಬಕ್ಕೆ ಗುರುವಾರ ಶಾಸಕ ರಾಜೂಗೌಡ ಭೇಟಿ ನೀಡಿ ಸಾಂತ್ವನ ಹೇಳಿ ೫೦ ಸಾವಿರ ರೂಪಾಯಿಗಳ ಧನ ಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ರಾಜೂಗೌಡ ಮಾತನಾಡಿ,ಈ ಘಟನೆಯಿಂದ ತುಂಬಾ ನೋವಾಗಿದೆ,ನಮ್ಮ ಕ್ಷೇತ್ರದಲ್ಲಿ ಇಂತಹ ಘಟನೆ ನಡೆದಿರುವುದರಿಂದ ನಾವೆಲ್ಲರು ತಲೆತಗ್ಗಿಸುವಂತಾಗಿದೆ ಎಂದರು. ಈಗಾಗಲೇ ಮೂರು ಜನ ಆರೋಪಿಗಳನ್ನು ಬಂಧಿಸಿದ್ದು, ಉಳಿದ ಏಳು ಜನರನ್ನು ಕೂಡಲೇ ಬಂಧಿಸುವಂತೆ ಸ್ಥಳದಲ್ಲಿದ್ದ ಡಿವೈಎಸ್‌ಪಿ ಮತ್ತು ಪಿಐ ಅವರಿಗೆ ಸೂಚಿಸಿದರು.

ನಾನು ಈ ಎಲ್ಲಾ ಕುಟುಂಬಗಳಿಗೆ ಬೇರೆಡೆಗೆ ಸ್ಥಳಾಂತರ ಮಾಡಬಹುದು ಆದರೆ ಇದರಿಂದ ನಮ್ಮೆಲ್ಲರಿಗೆ ತಲೆತಗ್ಗಿಸುವಂತಾಗಲಿದೆ.ಆದ್ದರಿಂದ ಪೊಲೀಸ್ ಇಲಾಖೆ ದಿಟ್ಟ ಕ್ರಮ ಕೈಗೊಳ್ಳಬೇಕು ಎಂದರು.

ಅಲ್ಲದೆ ತಾವು ಈ ಹಿಂದೆಯೆ ಇವರಿಂದ ತೊಂದರೆಯಾದಾಗ ನಮ್ಮ ಗಮನಕ್ಕೆ ತಂದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ,ಚುನಾವಣೆ ಬಂದಾಗ ಯಾರು ಯಾವ ಪಕ್ಷದ ಪರವಾಗಿಯಾದರು ಇರಲಿ,ನಂತರ ನಾನು ಇಡೀ ಕ್ಷೇತ್ರಕ್ಕೆ ಶಾಸಕ ಹಾಗಾಗಿ ನೀವೆಲ್ಲರು ನಮ್ಮ ಕುಟುಂಬವಿದ್ದಂತೆ.ಆದ್ದರಿಂದ ಮುಂದೆ ಯಾವುದೇ ರೀತಿಯ ತೊಂದರೆಯಾದರೂ ನಮ್ಮ ಗಮನಕ್ಕೆ ತರುವಂತೆ ತಿಳಿಸಿದರು.

ಸರಕಾರದಿಂದ ದೊರೆಯುವ ಸೌಲಭ್ಯಗಳನ್ನು ಒದಗಿಸಿಕೊಡಲಾಗುವುದು. ಮುಖ್ಯಮಂತ್ರಿಗಳ ವಿಶೇಷ ಅನುದಾನದಿಂದಲೂ ಅನುದಾನ ಒದಗಿಸಲು ಸಚಿವರೊಡನೆ ಮಾತನಾಡುವೆ. ಮಹಿಳೆಯರ ಇಂತಹ ಅಮಾನುಷ ಘಟನೆಗಳಿಗೆ ಯಾರೊಬ್ಬರು ಮುಂದಾಗಬಾರದು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ),ಸದಾಶಿವ ಆಯೋಗ ಸಮಿತಿ ರಾಜ್ಯ ಸಂಚಾಲಕ ವಿಜಯಕುಮಾರ,ಜಿ.ಪಂ ಮಾಜಿ ಸದಸ್ಯ ಮರಿಲಿಂಗಪ್ಪ ಕರ್ನಾಳ,ಶ್ರೀನಿವಾಸ ನಾಯಕ ದರಬಾರಿ, ಬಲಭೀಮ ನಾಯಕ ಭೈರಿಮಡ್ಡಿ, ಭೀಮಾಶಂಕರ ಬಿಲ್ಲವ್, ಭೀಮಣ್ಣ ಬೇವಿನಾಳ, ದೇವರಾಜ ಮಕಾಶಿ, ವಿರೂಪಾಕ್ಷಿ ಕರ್ನಾಳ, ನಾಗರಾಜ ಓಕುಳಿ ಇತರರಿದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

8 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420