ಕೆ.ಎಚ್.ಬಿ ಗ್ರೀನ್‌ ಪಾರ್ಕನಲ್ಲಿ ನವರಾತ್ರಿ ಉತ್ಸವ ಆರಂಭ

ಕಲಬುರಗಿ: ಹಿಂದೂಗಳಿಗೆ ನವರಾತ್ರಿ ಅತ್ಯಂತ ಸಂಭ್ರಮ ಸಡಗರದ ಹಬ್ಬ. ದಸರಾ ಉತ್ಸವದ ಆಚರಣೆಯ ಒಂದು ಅಂಗ ನವರಾತ್ರಿ, ಶರನ್ನವರಾತ್ರಿ ಎಂತಲೂ ಕರೆಯುತ್ತಾರೆ. ದುರ್ಗಾದೇವಿಯನ್ನು ಒಂದೊಂದು ದಿನ 9 ರೂಪಗಳಲ್ಲಿ ವಿಶೇಷವಾಗಿ ಪೂಜಿಸಲಾಗುತ್ತದೆ. 10 ನೇ ದಿನ ವಿಜಯ ದಶಮಿಯನ್ನು ಆಚರಿಸಲಾಗುತ್ತದೆ. ನವರಾತ್ರಿ ಪೂಜೆ ಮಾಡಿದರೇ ಇಷ್ಟಾರ್ಥ ಸಿದ್ದಿಯಾಗುತ್ತದೆ ಎಂಬ ನಂಬಿಕೆ ಇದೆ.

ನಗರದ ಆಳಂದ ರಸ್ತೆಯಲ್ಲಿರುವ ಕೆ.ಎಚ್.ಬಿ ಗ್ರಿನ್ ಪಾರ್ಕ್ ಬಡಾವಣೆಯ ದಕ್ಷಿಣ ಮುಖಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ಮಹಾನವಮಿ‌ ಪ್ರಯುಕ್ತ ಜೈ ಭವಾನಿ ಮಹಿಳಾ ಸಂಘ ಹಾಗೂ ಜೈ ಭವಾನಿ ಯುವಕ‌ ಸಂಘದ ವತಿಯಿಂದ ಒಂಬತ್ತು ದಿನಗಳ ಕಾಲ ನವರಾತ್ರಿ ಉತ್ಸವ ದಾಂಡಿಯಾ ಕಾರ್ಯಕ್ರಮ ಜರುಗಲಿದೆ. ಪ್ರತಿನಿತ್ಯ ಬಡಾವಣೆಯ ಭಕ್ತಾಧಿಗಳಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ ಎಂದು  ಕೆ.ಎಚ್.ಬಿ ಗ್ರೀನ್ ಪಾರ್ಕ ನಿವಾಸಿಗಳ‌ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಂಜೀವಕುಮಾರ ಶೆಟ್ಟಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಡಿ.ವಿ ಕುಲಕರ್ಣಿ, ಚಂದ್ರಕಾಂತ ತಳವಾರ, ಬಾಲಕೃಷ್ಣ ಕುಲಕರ್ಣಿ, ಶ್ರೀನಿವಾಸ ಬುಜ್ಜಿ, ಶಿವಕಾಂತ ಚಿಮ್ಮಾ, ವಿರೇಶ ಬೋಳಶೆಟ್ಟಿ, ಅನಿತಾ ಡಿ. ಬಕರೆ, ಲಕ್ಷ್ಮೀ ಎ. ಭೊವಿ, ಜ್ಯೋತಿ ಎಸ್. ಶೆಟ್ಟಿ, ಸಂಗಮೇಶ್ವರ ಸರಡಗಿ, ಸೂರ್ಯಕಾಂತ ಸಾವಳಗಿ, ಖಂಡೆರಾವ ಕುಲಕರ್ಣಿ, ವಿನೋದ ಪಡನೂರ, ರಾಜೇಶ ನಾಗಬುಜಂಗೆ, ರಮೇಶ ಬಸ್ಕಾವರೆ, ನರಸಿಂಗ ಕಟಕೆ, ಬಡಾವಣೆಯ ಹಿರಿಯರು, ಮಕ್ಕಳು  ಹಾಗೂ ಯುವಕರು ಭಾಗವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

11 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

13 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420