ರೇವಗ್ಗಿ (ಕಾಳಗಿ): ಇಲ್ಲಿನ ಸರ್ಕಾರಿ ಪದವಿ ಪೂಋವ ಕಾಲೇಜಿನಲ್ಲಿ ಶನಿವಾರ ಬೆಳಗ್ಗೆ (9-0-2021) 10.30ಕ್ಕೆ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ, ಸಾಹಿತ್ಯ-ಸಾಂಸ್ಕೃತಿಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಪತ್ರಕರ್ತ-ಸಾಹಿತಿ ಡಾ. ಶಿವರಂಜನ್ ಸತ್ಯಂಪೇಟೆ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಿವೃತ್ತ ಪ್ರಾಚಾರ್ಯ ಶಿವಾಜಿ ಪಾಟೀಲ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಕಾಲೇಜಿನ ಪ್ರಾಚಾರ್ಯ ಡಾ. ಚಂದ್ರಶೇಖರ ದೊಡ್ಡಮನಿ ಅಧ್ಯಕ್ಷತೆ ವಹಿಸುವರು ಎಂದು ಸಾಂಸ್ಕೃತಿಕ ಕಾರ್ಯದರ್ಶಿ ಲೀಲಾವತಿ ಆರ್.ಪಿ., ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಸಂತೋಷಕುಮಾರ ಪಾಟೀಲ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.