ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ವತಿಯಿಂದ ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಹಮ್ಮಿಕೊಂಡಿರುವ ೩೫ನೇ ನಾಡಹಬ್ಬ ಕಾರ್ಯಕ್ರಮಕ್ಕೆ ಗುರುವಾರ ಸಂಜೆ ಚಾಲನೆ ನೀಡಲಾಯಿತು.
ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಉತ್ಸವಕ್ಕೆ ನಾಡಹಬ್ಬ ಉತ್ಸವ ಸಮಿತಿ ಗೌರವಾಧ್ಯಕ್ಷ ರಾಜಾ ಪಾಮನಾಯಕ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.ಸಾಹಿತ್ಯ ಸಂಘದ ಅಧ್ಯಕ್ಷರಾದ ಬಸವರಾಜ ಜಮದ್ರಖಾನಿ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಉತ್ಸವ ಸಮಿತಿ ಅಧ್ಯಕ್ಷ ರಾಜಾ ಮುಕುಂದ ನಾಯಕ,ಮುಖಂಡ ರಾಜಾ ಹರ್ಷವರ್ಧನ ನಾಯಕ,ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ, ಉತ್ಸವ ಸಮಿತಿ ಉಪಾಧ್ಯಕ್ಷ ಕಿಶೋರ ಚಂದ್ ಜೈನ್,ಸುರೇಶ ಸಜ್ಜನ್,ಪ್ರಕಾಶ ಸಜ್ಜನ್ ಸೇರಿದಂತೆ ಅನೇಕರಿದ್ದರು.ಇದೇ ಸಂದರ್ಭದಲ್ಲಿ ವಿವಿಧ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಶಿವಕುಮಾರ ಮಸ್ಕಿ,ರಾಜಶೇಖರ ದೇಸಾಯಿ,ಅನ್ವರ ಜಮಾದಾರ,ಮಹಾದೇವಪ್ಪ ಗುತ್ತೇದಾರ,ದೇವು ಹೆಬ್ಬಾಳ ಸೇರಿದಂತೆ ಅನೇಕರು ಭಾಗವಹಿಸಿದ್ದರು.