ಕೋರಳ್ಳಿ ಹತ್ತಿರ ಉದ್ಯಾನವನ ಮಾಡಲು ಪ್ರಸ್ತಾವನೆ ಸಲ್ಲಿಕೆ ಶಾಸಕ ಗುತ್ತೇದಾರ

ಆಳಂದ: ತಾಲೂಕಿನ ಕೋರಳ್ಳಿ ಗ್ರಾಮದ ಹತ್ತಿರ ಇರುವ ಸರ್ಕಾರಿ ಗೈರಾಣ ಜಮೀನಿನಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ೧೦ ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದರು.

ಶುಕ್ರವಾರ ಅಮರ್ಜಾ ಅಣೆಕಟ್ಟಿಗೆ ಬಾಗಿನ ಅರ್ಪಿಸಿದ ನಂತರ ಮಾತನಾಡಿದ ಅವರು, ಅಮರ್ಜಾ ಅಣೆಕಟ್ಟಿನಿಂದ ಸಾವಿರಾರು ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರಕಿದೆ ಅಲ್ಲದೇ ಆಳಂದ ಪಟ್ಟಣಕ್ಕೆ ಕುಡಿಯುವ ನೀರು ಲಭ್ಯವಾಗಿದೆ ಈಗ ಬಂದಿರುವ ಮಳೆ ನೋಡಿದರೇ ಆಳಂದ ಪಟ್ಟಣಕ್ಕೆ ೨-೩ ವರ್ಷ ಕುಡಿಯುವ ನೀರಿನ ತೊಂದರೆಯಾಗುವುದಿಲ್ಲ ಎಂದು ತಿಳಿಸಿದರು.

ಈ ಸಲ ಅತೀ ಹೆಚ್ಚು ಮಳೆಯಾಗಿರುವುದರಿಂದ ಅತೀವೃಷ್ಟಿಯೂ ಆಗಿದೆ ಇದರಿಂದ ಬೆಳೆಗಳು ಹಾಳಾಗಿವೆ ಹೀಗಾಗಿ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ರೈತರಿಗೆ ನ್ಯಾಯಯುತವಾಗಿ ಸಿಗಬೇಕಾದ ಪರಿಹಾರ ದೊರಕಿಸಿ ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಅಮರ್ಜಾ ಡ್ಯಾಂ ನಿರ್ಮಾಣ ಮಾಡುವಲ್ಲಿ ಆಳಂದದ ಎ ವಿ ಪಾಟೀಲ ಮತ್ತು ಕೊರಳ್ಳಿಯ ಅಣ್ಣಾರಾವ ಪಾಟೀಲ ಅವರ ಪಾತ್ರ ಮಹತ್ವದ್ದಾಗಿದೆ ಅವರಿಬ್ಬರೂ ಸದಾಕಾಲ ಪ್ರಾತ:ಸ್ಮರಣೀಯರಾಗಿರುತ್ತಾರೆ. ಕೆಲವು ಕೋಟಿಗಳಲ್ಲಿ ಆರಂಭವಾದ ಯೋಜನೆ ಇಲ್ಲಿಯವರೆಗೆ ಸಾವಿರಾರು ಕೋಟಿ ರೂ. ಖರ್ಚು ಕಂಡು ರೈತರಿಗೆ ವರದಾನವಾಗಿದೆ. ಅತೀ ಹೆಚ್ಚು ಕೆರೆಗಳು ನಿರ್ಮಾಣವಾಗುವುದರಿಂದ ನೀರು ಹಿಡಿದಿಟ್ಟಕೊಳ್ಳಬಹುದು ಅಲ್ಲದೇ ಮಣ್ಣಿನ ಫಲವತ್ತತೆಯು ಉಳಿಸಿಕೊಳ್ಳಬಹುದು ಎಂದರು.

ತಾಲೂಕಿನ ಕವಲಗಾ, ವಳವಂಡವಾಡಿ, ಕಡಗಂಚಿ, ನಿಂಬರ್ಗಾ, ತಡಕಲ ಗ್ರಾಮಗಳಲ್ಲಿ ಹೊಸ ಕೆರೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೋತನ ಹಿಪ್ಪರ್ಗಾ ಗ್ರಾಮದಲ್ಲಿನ ಕೆರೆಯ ನಿರ್ಮಾಣಕ್ಕಾಗಿ ಭೂಮಿ ನೀಡಿದ ರೈತರಿಗೆ ಸರ್ಕಾರದಿಂದ ಈಗಾಗಲೇ ಪರಿಹಾರ ಒದಗಿಸಲಾಗಿದೆ ಅಲ್ಲದೇ ಕೆರೆಯ ಕಾಮಗಾರಿಯೂ ಪ್ರಗತಿಯ ಕೊನೆಯ ಹಂತದಲ್ಲಿದೆ. ತಾಲೂಕಿನಲ್ಲಿ ಬಾಕಿ ಉಳಿದ ಕೆಲಸಗಳನ್ನು ಮುಂದಿನ ದಿನಗಳಲ್ಲಿ ಆದ್ಯತೆಯ ಮೇಲೆ ತೆಗೆದುಕೊಂಡು ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಜಿ.ಪಂ ಮಾಜಿ ಸದಸ್ಯ ಹರ್ಷಾನಂದ ಗುತ್ತೇದಾರ, ಆಳಂದ ಮಂಡಲ ಬಿಜೆಪಿ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ ಮಾತನಾಡಿದರು. ಭೂಸನೂರಿನ ಬಸವಲಿಂಗ ಶಿವಾಚಾರ್ಯರು, ಆಳಂದನ ಸಿದ್ದೇಶ್ವರ ಶಿವಾಚಾರ್ಯರು ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ರಾಜಶ್ರೀ ಖಜೂರಿ, ಉಪಾಧ್ಯಕ್ಷ ವೀರಣ್ಣ ಹತ್ತರಕಿ, ಮುಖಂಡರಾದ ಹಣಮಂತರಾವ ಮಲಾಜಿ, ಗುರುಶಾಂತ ಪಾಟೀಲ ನಿಂಬಾಳ, ಕೆಕೆಆರ್‌ಟಿಸಿ ನಿರ್ದೇಶಕ ಮಲ್ಲಿಕಾರ್ಜುನ ತಡಕಲ, ಕೆಎಂಎಫ್ ನಿರ್ದೇಶಕ ಚಂದ್ರಕಾಂತ ಭೂಸನೂರ, ಎಪಿಎಂಸಿ ಮಾಜಿ ಅಧ್ಯಕ್ಷ ಅಣ್ಣಾರಾವ ಪಾಟೀಲ ಕವಲಗಾ, ಅನಂತರಾವ ಸಾಹು, ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಸಾಹು, ಧುತ್ತರಗಾಂವ ಗ್ರಾ.ಪಂ ಅಧ್ಯಕ್ಷ ಚಂದ್ರಕಾಂತ ಮಂಗಾಣೆ, ಶಿವಪುತ್ರಪ್ಪ ಬೆಳ್ಳೆ, ಮಲ್ಲಿಕಾರ್ಜುನ ಕಂದಗೂಳೆ, ರಮ್ಮು ಅನ್ಸಾರಿ, ಮಹಿಬೂಬ್ ಆಳಂದ, ನೀರಾವರಿ ಇಲಾಖೆಯ ಅಧಿಕಾರಿಗಳಾದ ಸಂತೋಷಕುಮಾರ ಸಜ್ಜನ, ಶರಣಬಸಪ್ಪ, ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಪುರಸಭೆ ಮುಖ್ಯಾಧಿಕಾರಿ ವಿಜಯ ಮಹಾಂತೇಶ, ಕೃಷಿ ಇಲಾಖೆಯ ಶರಣಗೌಡ ಪಾಟೀಲ, ತೋಟಗಾರಿಕೆ, ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420