ಕೆ.ಕೆ.ಆರ್.ಡಿ.ಬಿ. ಯ ಆಯಾ ವರ್ಷದ ಅನುದಾನ ಖರ್ಚು ಮಾಡಲು ಕ್ರಮ: ಆರ್. ವೆಂಕಟೇಶ್ ಕುಮಾರ್

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆ.ಕೆ.ಆರ್.ಡಿ.ಬಿ) ಗೆ ರಾಜ್ಯ ಸರ್ಕಾರ ನೀಡುವ ಅನುದಾನವನ್ನು ಆಯಾ ವರ್ಷವೇ ಖರ್ಚು ಮಾಡಲು ಕ್ರಮವಹಿಸಲಾಗುವುದು ಎಂದು ಮಂಡಳಿಯ ನೂತನ ಕಾರ್ಯದರ್ಶಿ ಆರ್. ವೆಂಕಟೇಶ್ ಕುಮಾರ್ ಅವರು ತಿಳಿಸಿದರು.

ಕಲಬುರಗಿಯಲ್ಲಿ ಇಂದು ಮಂಡಳಿಯ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಗಡಿನಾಡು ಅಭಿವೃದ್ಧಿ ನಿಗಮ, ಬಯಲು ಸೀಮೆ ಮಂಡಳಿ, ಮಲೆನಾಡು ಅಭಿವೃದ್ಧಿ ಮಂಡಳಿ ಮುಂತಾದವುಗಳಿಗಿಂತ ಹೆಚ್ಚು ಪ್ರಮಾಣದಲ್ಲಿ ಕೆಕೆಆರ್‍ಡಿಬಿ ಅನುದಾನ ಖರ್ಚು ಮಾಡುತ್ತಿದೆ. ಅಂದರೆ, ಶೇಕಡ 80ಕ್ಕೂ ಹೆಚ್ಚು ಅನುದಾನ ಖರ್ಚಾಗುತ್ತದೆ. ಇದು ಶೇಕಡ 100 ರಷ್ಟು ಖರ್ಚಾಗಬೇಕಿದೆ ಎಂದು ಅವರು ಪ್ರತಿಪಾದಿಸಿದರು.

ನಾನು ಈ ಭಾಗದಲ್ಲಿ ನಾಲ್ಕು ವರ್ಷ ಸೇವೆ ಸಲ್ಲಿಸಿದ್ದು, ಈ ಭಾಗದಲ್ಲಿನ ಸಮಸ್ಯೆಗಳೇನು ಎಂಬುದನ್ನು ಚೆನ್ನಾಗಿ ಅರಿತಿದ್ದೇನೆ ಎಂದ ಅವರು, ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದರು. ಮಂಡಳಿ ವ್ಯಾಪ್ತಿಯ ಜಿಲ್ಲೆಗಳ ಅಂಗನವಾಡಿ ಮತ್ತು ಶಾಲೆಗಳಿಗೆ ಶಿಕ್ಷಕರ ನಿಯೋಜಿಸುವುದರ ಬದಲಿಗೆ ಖಾಯಂ ಶಿಕ್ಷಕರ ತುಂಬಿಕೊಳ್ಳಬೇಕಿದೆ ಎಂದು ಅವರು ಹೇಳಿದರು.

ಹೆರಿಗೆ ಸಂದರ್ಭದಲ್ಲಿ ತಾಯಿ-ಮಕ್ಕಳ ನಾವು, ಬಾಲಕಾರ್ಮಿಕ ಪದ್ಧತಿ ಮುಂತಾದ ಈ ಭಾಗದ ಸಮಸ್ಯೆಗಳನ್ನು ತಡೆಯಬೇಕಿದೆ ಎಂದು ಅವರು ಒತ್ತಿ ಹೇಳಿದರು. ರಸ್ತೆ ಇನ್ನಿತರ ಮೂಲಭೂತ ಸೌಕರ್ಯಗಳನ್ನೂ ಅಭಿವೃದ್ಧಿ ಪಡಿಸಲಾಗುವುದು ಎಂದು ಅವರು ಹೇಳಿದರು.

ಈಗಾಗಲೇ ಮಂಡಳಿ ವತಿಯಿಂದ ರಾಯಚೂರು ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ 40 ಕೋಟಿ ರೂಪಾಯಿ ಅನುದಾನವನ್ನು ಅಲ್ಲಿ ನಾನು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ತರಿಸಿದ್ದೇನೆ. ಅದೇ ರೀತಿ ಜಿಲ್ಲಾ ಖನಿಜ ನಿಧಿಯಿಂದಲೂ 10 ಕೋಟಿ ರೂಪಾಯಿ ಈ ಯೋಜನೆಗೆ ಬಿಡುಗಡೆಯಾಗಿದೆ ಎಂದ ಅವರು, ಮಂಡಳಿ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳ ಬೃಹತ್ ಯೋಜನೆಗಳಿಗೂ ಕೆಕೆಆರ್‍ಡಿಬಿ ತನ್ನ ಪಾಲಿನ ಅನುದಾನ ನೀಡಿಕೆಯನ್ನು ಮುಂದುವರೆಸಲಿದೆ ಎಂದು ಅವರು ಹೇಳಿದರು.

ಕಲಬುರಗಿ ನಗರದ ಕಲ್ಯಾಣಿ-ಬಾವಿಗಳನ್ನೂ ಮಂಡಳಿ ವತಿಯಿಂದ ಪುನಶ್ಚೇತನಗೊಳಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ಕೆಕೆಆರ್‍ಡಿಬಿಗೆ ಮುಂಜೂರಾದ 46 ಹುದ್ದೆಗಳಲ್ಲಿ ಇನ್ನೂ 38 ಹುದ್ದೆಗಳು ಖಾಲಿ ಇದ್ದು, ಹೆಚ್ಚಿನ ಹುದ್ದೆಗಳನ್ನು ನಿಯೋಜನೆ ಮೇಲೆ ನಿರ್ವಹಿಸಲಾಗುತ್ತಿದೆ. ಆದ್ದರಿಂದ ಖಾಲಿ ಹುದ್ದೆಗಳನ್ನು ಸಹ ತುಂಬಿಕೊಳ್ಳಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮಂಡಳಿಯ ಜಂಟಿ ಕಾರ್ಯದರ್ಶಿ ಪ್ರವೀಣ ಪ್ರಿಯಾ ಡೇವಿಡ್, ಹಣಕಾಸು ನಿಯಂತ್ರಕರಾದ ರಾಮಣ್ಣ ಅಥಣಿ ಹಾಗೂ ಸಹಾಯಕ ಕಾರ್ಯಪಾಲ ಅಭಿಯಂತರ ಸೂರ್ಯಕಾಂತ್ ಮುಂತಾದವರು ಇದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

7 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

7 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

7 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

7 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

7 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420