ಶಹಾಬಾದ: ಪುರು? ಪ್ರಧಾನ ಸಮಾಜದಲ್ಲಿ ಒಂದಲ್ಲ ಒಂದು ಕಾರಣಕ್ಕೆ ಮಹಿಳೆಯರ ಮೇಲೆ ನಿರಂತರವಾದ ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಲೈಂಗಿಕ ಕಿರುಕುಳ, ಅತ್ಯಾಚಾರ ಹಾಗೂ ಮಕ್ಕಳ ಸಾಗಣೆ ನಡೆಯುತ್ತಿದ್ದು, ಇದನ್ನು ತಪ್ಪಿಸಲು ಮಹಿಳಾ ದೌರ್ಜನ್ಯ ಕಾಯಿದೆ ಜಾರಿ ಮಾಡಲಾಗಿದೆ ಮಾರ್ಗದರ್ಶಿ ಸಂಸ್ಥೆಯ ಯಲ್ಲುಬಾಯಿ.ಎಸ್.ಮರತೂರ ತಿಳಿಸಿದರು.
ಅವರು ಮಂಗಳವಾರ ಮರತೂರ ಗ್ರಾಮದಲ್ಲಿ ದೀ ಹಂಗರ್ ಪ್ರೊಜೆಕ್ಟ್ ಮಾರ್ಗದರ್ಶಿ ಸಂಸ್ಥೆ ಕಲಬುರಗಿ ಮತ್ತು ಮಹಿಳಾ ಜಾಗೃತ ವೇದಿಕೆ ಆಯೋಜಿಸಲಾದ ದೌರ್ಜನ್ಯ ಮುಕ್ತಿ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಿಳೆಯರ ಮತ್ತು ಮಕ್ಕಳ ಕಳ್ಳಸಾಗಣೆಗೆ ಮಹಿಳೆಯರೇ ಸಹಾಯ ಮಾಡುತ್ತಿರುವುದು ವಿ?ದನೀಯ. ಅಪರಿಚಿತರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ನಿರುದ್ಯೋಗಿ ಹೆಣ್ಣು ಮಕ್ಕಳಿಗೆ ಉದ್ಯೋಗ ಕೊಡಿಸುವ ನೆಪದಲ್ಲಿ ದೂರದ ಊರುಗಳಿಗೆ ಕರದು ಕೊಂಡುಹೋಗಿ ವೇಶ್ಯಾವಾಟಿಕೆಗೆ ಮಾರಾಟ ಮಾಡುವುದು ಕಂಡುಬರುತಿದ್ದು, ಇಂತಹ ನಯವಂಚಕರ ಬಗ್ಗೆ ಎಚ್ಚರದಿಂದಿರಬೇಕು ಎಂದರು.
ದೌರ್ಜನ್ಯದಿಂದ ಸಂಕ?ಗಳಿಗೆ ಸಿಲುಕಿರುವ ಅಸಹಾಯಕ ಮಹಿಳೆಯರು ಸಾಂತ್ವನ ಕೇಂದ್ರವನ್ನು ಸಂಪರ್ಕಿಸಿ ಅಲ್ಲಿ ದೊರೆಯುವ ಉಚಿತ ಸೌಲಭ್ಯಗಳ ಬಗ್ಗೆ ವಿವರಿಸಿದ ಅವರು, ಈ ವಿ?ಯದ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಮಹಿಳಾ ಸಹಾಯವಾಣಿಯ ದೂರವಾಣಿ ಸಂಖ್ಯೆ ೧೦೯೧ ಕ್ಕೆ ಕರಮಾಡಿ ಸಲಹೆ ಹಾಗೂ ನೆರವು ಪಡೆಯಬಹುದು. ಅಥವಾ ನೇರವಾಗಿ ಯಾವುದೇ ತಾಲೂಕಿನ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಅಥವಾ ಸಮೀಪದ ಪೊಲೀಸ್ ಠಾಣೆಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ಮರತೂರ ಗ್ರಾಪಂ ಸದಸ್ಯೆ ಶಕುಂತಲಾ ತಮ್ಮಣ್ಣ, ಮರತೂರ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಪ್ರಭಾವತಿ ಮರತೂರ,ಆಶಾ ಕಾರ್ಯಕರ್ತೆ ಶೋಭಾ, ಬಾಲ್ಯ ವಿವಾಹ ತಡೆ ನಾಯಲಕಿಯರಾದ ಸುಜಾತ ಮತ್ತು ಸುಮಾ ಸೇರಿದಂತೆ ಅಂಗನವಾಡಿ ಕಾರ್ಯಕರ್ತರು ಇದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…