ಕಲಬುರಗಿ: ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ನಡೆಸುವ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಗೋದುತಾಯಿ ಮಹಿಳಾ ಬಿ.ಎಡ್. ಕಾಲೇಜಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ನಡೆಸುವ ಅಂತಿಮ ವರ್ಷದ ಪರೀಕ್ಷೆಯಲ್ಲಿ ನಾಲ್ಕು ರ್ಯಾಂಕ್ಗಳು ಲಭಿಸಿವೆ.
ಗೌಸಿಯಾ ಬೇಗಂ, ಶರಣಮ್ಮ ಪಾಟೀ, ಗುಂಡಮ್ಮ ಹಣಮಂತರಾಯ ಹಾಗೂ ಅರ್ಚನಾ ಶರಣಪ್ಪ ಕ್ರಮವಾಗಿ ೨, ೫, ೯ ಮತ್ತು ೧೦ನೇ ರ್ಯಾಂಕ್ ಗಳಿಸಿದ್ದಾರೆ.
ನಾಲ್ಕು ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿದ್ದಕ್ಕಾಗಿ, ವಿಧ್ಯಾರ್ಥಿಗಳಿಗೆ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಮತ್ತು ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ ಶರಬಸವಪ್ಪ ಅಪ್ಪಾಜಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ಪರ್ಸನ್ ಮಾತೋಶ್ರಿ ಡಾ. ದಾಕ್ಷಾಯಿಣಿ ಅವ್ವಾಜಿ ಮತ್ತು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಕಾಲೇಜಿನ ಪ್ರಾಚಾರ್ಯರಾದ ಕಲ್ಪನಾ ಭೀಮಳ್ಳಿ ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.