ಆಳಂದ: ಯುವಕ, ಯುವತಿಯರು ಸರ್ಕಾರಿ ನೌಕರಿಯ ಮೇಲೆ ಅವಲಂಬಿತರಾಗದೆ ಇಲಾಖೆಯ ಸೌಲಭ್ಯಗಳು ಪಡೆದು ಸ್ವಯಂ ಉದ್ಯೋಗ ಕೈಗೊಳ್ಳುವ ಮೂಲಕ ಸಮಾಜದಲ್ಲಿನ ನಿರುದ್ಯೋU ಪೀಡಗನ್ನು ನಿವಾರಿಸಲು ಮುಂದಾಗಬೇಕು ಎಂದು ಶಾಸಕ ಸುಭಾಷ ಗುತ್ತೇದಾರ ಅವರು ಇಂದಿಲ್ಲಿ ಕರೆ ನೀಡಿದರು.
ಪಟ್ಟಣದ ಗುರುಭವನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಿಲ್ಲಾ ಪಂಚಾಯತ ಕಲಬುರಗಿ ಆಶ್ರಯದಲ್ಲಿ ಉದ್ಯಮ ಶೀಲತಾ ಜಾಗೃತಿ ಕಾರ್ಯಾಗಾರವನ್ನು ಅವರು ಉದ್ಘಾಟನೆ ಮಾತನಾಡಿದರು.
ಎಲ್ಲರಿಗೂ ಸರ್ಕಾರಿ ನೌಕರ ಅಸಾಧ್ಯವಾಗಿದೆ. ಕೈಗಾರಿಕೆ ಇಲಾಖೆ ಹಲವು ಇಲಾಖೆಗಳಲ್ಲಿನ ಸಾಲ ಸೌಲಭ್ಯಗಳನ್ನು ಪಡೆದುಕೊಂಡು ಉದ್ಯೋಗದಲ್ಲಿ ತೊಡಗಿ ಆರ್ಥಿಕ ಅಭಿವೃದ್ಧಿಯನ್ನು ಸಾಧಿಸಬೇಕು ಎಂದು ಹೇಳಿದರು.
ನಿರುದ್ಯೋಗ ನಿವಾರಣೆಗಾಗಿ ಕೇಂದ್ರದ ಸರ್ಕಾರ ಜನಪರ ಯೋಜನೆಗಳ ಜಾರಿಗೆ ತಂದಿದೆ. ಅದರ ಲಾಭವನ್ನು ಪ್ರತಿಯೊಬ್ಬ ನಿರುದ್ಯೋಗಿಗಳ ಪಡೆಯುವಂತಾಗಬೇಕು ಎಂದರು.
ಕೈಗಾರಿಕೆ ಇಲಾಖೆಯ ಕಲಬುರಗಿ ಜಂಟಿ ನಿರ್ದೇಶಕ ಮಾಣಿಕ ವಿ. ರಘೋಜಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉದ್ಯೋಗಕ್ಕೆ ಆನ್ಲೈನ್ ಅರ್ಜಿಗಳ ಸಲ್ಲಿಕೆ ಮೊದಲು ಸಂಪೂರ್ಣ ಯೋಜನೆಗಳ ಕುರಿತು ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕು. ಮೊದಲು ಉದ್ಯೋಗಕ್ಕಾಗಿ ಯೋಜನೆ ರೂಪಿಸಿ ನಂತರ ಅರ್ಜಿ ಸಲ್ಲಿಸಬೇಕು.
ಬಹುತೇಕರು ಕೈಗಾರಿಕೆ ಇಲಾಖೆಗೆ ಯಂತ್ರಗಳ ಪಡೆಯಲು ಮಾತ್ರ ಅರ್ಜಿ ಸಲ್ಲಿಸದೆ, ಹೋಟೆಲ್ ವ್ಯಾಪಾರ, ಹಣ್ಣು, ತರಕಾರಿ, ಸಸಿ ಮಾರಾಟ, ಅಲಂಕಾರಕ ಸಾಮಗ್ರಿ ಸೇರಿ ಇತರ ವ್ಯಾಪಾರ ಉದ್ಯೋಗಕ್ಕೂ ಒಲವು ತೋರಬೇಕು. ಇದಕ್ಕಾಗಿ ಸುಮಾರು 40 ಲಕ್ಷದ ವರೆಗೂ ಸಾಲಸೌಲಭ್ಯಗಳು ನೀಡಲಾಗುತ್ತದೆ ಎಂದರು.
ಸ್ಥಳೀಯ ಎಸ್ಬಿಐ ಪ್ರಧಾನ ವ್ಯವಸ್ಥಾಪಕ ಇಂತೇಸಾರ ಹುಸೇನ ಮಾತನಾಡಿ, ಯೋಜನೆ ಮಾಡುವ ಮೊದಲು ಮಾಹಿತಿ ಪಡೆದು ನಂತರ ಬ್ಯಾಂಕಿಗೆ ಸಾಲಕ್ಕಾಗಿ ಪ್ರಸ್ತಾವನೆ ಸಲ್ಲಿಸಿ, ವ್ಯವಹಾರ ಮಾಡುವ ಕುರಿತು ಮಾರುಕಟ್ಟೆಯಲ್ಲಿ ಕೈಗೊಳ್ಳುವ ಉದ್ಯೋಗದ ಪ್ರಗತಿ ಅದರ ಸಾಧನೆಯ ಕುರಿತು ತಿಳಿದುಕೊಳ್ಳಿ, ವ್ಯಾಪಾರದಲ್ಲಿ ಪೈಪೋಟಿ ಮಾಡದೆ ಪ್ರಗತಿಯನ್ನು ಸಾಧಿಸುವ ನಿಟ್ಟಿನಲ್ಲಿ ಫಲಾನುಭವಿಗಳು ನಡೆದುಕೊಳ್ಳಬೇಕು ಎಂದರು.
ಉದ್ಯೋಗಕ್ಕಾಗಿ ಸಾಲ ಪಡೆದಂತೆ ಸಮಯಕ್ಕೆ ಸಾಲ ಮರುಪವಾತಿಸಿ ಸಾಲನವೀಕರಿಸಬೇಕು. ಬ್ಯಾಂಕ್ಗಳು ನೀಡುವ ಹಣ ಸರ್ಕಾರದಲ್ಲ. ಜನ ಸಾಮಾನ್ಯರದ್ದಾಗಿದೆ. ನಿಮ್ಮ ಉದ್ಯೋಗಕ್ಕೆ ಕೇವಲ ಸಬ್ಸಿಡಿ ಮಾತ್ರ ಸರ್ಕಾರ ನೀಡುತ್ತದೆ. ಏಕಕಾಲಕ್ಕೆ ಸಾಲದ ಪೂರ್ಣ ಮೊತ್ತದ ಬೇಡಿಕೆ ಇಡದೆ ಹಂತ, ಹಂತವಾಗಿ ಸಣ್ಣ ಪ್ರಮಾಣದಿಂದ ಆರಂಭಿಸಿ ದೊಡ್ಡ ಸಾಲದ ಬೇಡಿಕೆಗೆ ಮುಂದಾಗಬೇಕು ಎಂದರು.
ಸಾರಿಗೆ ಸಂಸ್ಥೆಯ ನಿರ್ದೇಶಕ ಮಲ್ಲಿಕಾರ್ಜುನ ತಡಕಲ್, ಇಲಾಖೆಯ ಸಹಾಯಕ ನಿರ್ದೇಶಕ ಮುಕುಂದ ರೆಡ್ಡಿ ಅವರು ಸ್ಕ್ರೀನ್ ಮೂಲಕ ಪರದೆಯ ಮೇಲೆ ಫಲಾನುಭವಿಗಳಿಗೆ ಕೈಗಾರಿಕೆ ಯೋಜನೆಗಳ ಮಾಹಿತಿ ನೀಡಿದರು.
ಗ್ರಾಮೀಣ ಕೈಗಾರಿಕೆ ಉಪನಿರ್ದೇಶಕ ಅಬ್ದುಲ್ ಅಜೀಂ, ಸೈಯದ್ ಆಶ್ಫಾಕ್ ಅಹ್ಮೆದ್, ರೇವಣಸಿದ್ಧಪ್ಪ ಘಂಟಿ, ಡಾ| ಚಂದ್ರಕಾಂತ ಚಂದಾಪೂರ ಉಪನ್ಯಾಸ ನೀಡುವರು. ತಾಲೂಕು ಕೈಗಾರಿಕೆ ವಿಸ್ತರಣಾಧಿಕಾರಿ ಜಾಫರ್ ಖಾಸೀಂ ಅನ್ಸಾರಿ ಪ್ರಸ್ತಾವಿಕ ಮಾತನಾಡಿದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…