ತೊನಸನಹಳ್ಳಿ(ಎಸ್) ಗ್ರಾಪಂಯಲ್ಲಿ ಅವ್ಯವಹಾರ ದೂರು

0
29

ಶಹಾಬಾದ: ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾಪಂಯಲ್ಲಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ೨೦೧೯-೨೦ ಹಾಗೂ ೨೦೨೦-೨೧ನೇ ಸಾಲಿನಲ್ಲಿ ಅವ್ಯವಹಾರ ನಡೆದಿದ್ದು, ಇದರಲ್ಲಿ ಭಾಗಿಯಾದ ಕಂಪ್ಯೂಟರ್ ಆಪರೇಟರ್‌ನನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ತೊನಸನಹಳ್ಳಿ ಗ್ರಾಮಸ್ಥರ ಪರವಾಗಿ ಶಿವಕುಮಾರ ತಳವಾರ ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಜನರಿಗೆ ಸ್ಥಳೀಯ ಮಟ್ಟದಲ್ಲಿ ಉದ್ಯೋಗ ನೀಡಲು ಉದ್ಯೋಗ ಖಾತ್ರಿ ಯೋಜನೆ ಬಹಳ ಉಪಯುಕತವಾಗಿದೆ. ಆದರೆ ೨೦೧೯-೨೦ ಹಾಗೂ ೨೦೨೦-೨೧ನೇ ಸಾಲಿನಲ್ಲಿ ಸಾಕಷ್ಟು ಅವ್ಯವಹಾರವಾಗಿದೆ. ತಮ್ಮ ಸಂಬಂಧಿಕರಿಗೆ ಹಾಗೂ ಬೆಂಗಳೂರಿನಲ್ಲಿರುವವರಿಗೆ ಹಾಜರಿ ಹಾಕಿ ಅವರ ಖಾತೆಗೆ ಹಣ ಜಮಾ ಮಾಡಲಾಗಿದೆ.ಕೂಡಲೇ ಕಂಪ್ಯೂಟರ್ ಆಪರೇಟರ್ ಮೇಲೆ ಕ್ರಮಕೈಗೊಳ್ಳಬೇಕೆಂದು ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here