ಶಹಾಬಾದ: ನಗರದ ಎಸ್ಬಿಐ ಬ್ಯಾಂಕ್ ಹತ್ತಿರದ ಶ್ರೀ ಸೇವಾಲಾಲ ವೃತ್ತದಲ್ಲಿ ಕಲುಷಿತ ವಾತವಾರಣ ಸೃಷ್ಟಿಯಾಗಿದ್ದು, ಕೂಡಲೇ ನಗರಸಭೆಯ ಅಧಿಕಾರಿಗಳು ಸ್ವಚ್ಛಗೊಳಿಸಬೇಕೆಂದು ನಗರದ ಜೈ ಸೇವಾಲಾಲ ಯುವಕ ಸಂಘದ ಅಧ್ಯಕ್ಷ ಕಿರಣ ಚವ್ಹಾಣ, ವಿಕ್ರಮ ರಾಠೋಡ, ವಿಕ್ಕಿ ನಾಯಕ ಆಗ್ರಹಿಸಿದ್ದಾರೆ.
ಈಗಾಗಲೇ ಕೆಲವು ದಿನಗಳ ಹಿಂದಷ್ಟೇ ಈ ವಿಷಯದ ಕುರಿತು ನಗರಸಭೆಯ ಅಧ್ಯಕ್ಷರಿಗೆ ಮನವಿ ಪತ್ರ ಸಲ್ಲಿಸಲಾಗಿತ್ತು.ಆದರೆ ವೃತ್ತದ ಬಳಿ ಸ್ವಚ್ಛಗೊಳಿಸುವ ದೂರದ ಮಾತು, ಕನಿಷ್ಠ ಪಕ್ಷ ಆ ಕಡೆ ತಲೆಯೂ ಹಾಕಿಲ್ಲ.ಇದರಿಂದ ವೃತ್ತದ ಬಳಿ ಸಾಕಷ್ಟು ಹಂದಿಗಳು ಓಡಾಡುತ್ತಿವೆ. ಹಂದಿಗಳ ಆವಾಸ ಸ್ಥಾನವಾಗಿದೆ.
ವೃತ್ತವನ್ನು ಸ್ವಚ್ಛವಾಗಿಡಬೇಕಾದ ನಗರಸಭೆಯ ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ಧೋರಣೆ ತೋರುತ್ತಿರುವುದು ಸರಿಯಲ್ಲ.ನಗರದ ಗಣ್ಯ ವ್ಯಕ್ತಿಗಳ ಮನೆಯ ಮುಂದೆ ಸ್ವಚ್ಛ ಮಾಡುವವರು ಇಲ್ಲೇಕೆ ಸ್ವಚ್ಛ ಮಾಡುತ್ತಿಲ್ಲ. ಎರಡು ದಿನಗಳ ಒಳಗಾಗಿ ವೃತ್ತದ ಬಳಿ ಸ್ವಚ್ಛಗೊಳಿಸಿ, ಸೂಕ್ತ ರಕ್ಷಣೆ ಒದಗಿಸದಿದ್ದರೇ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…