ಕಸಾಪ ಮತದಾರರ ಪಟ್ಟಿ ಸರಿಪಡಿಸದಿದ್ದಲ್ಲಿ ಚುನಾವಣೆ ಬಹಿಷ್ಕಾರ: ಮಡಿವಾಳಪ್ಪ ಪಾಟೀಲ್

0
14

ಸುರಪುರ: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯ ಮತದಾರರ ಪಟ್ಟಿಯನ್ನು ಸರಿಪಡಿಸದಿದ್ದಲ್ಲಿ ಮುಂಬರುವ ಕಸಾಪ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಕೆಂಭಾವಿ ವಲಯ ಕಸಾಪ ಪ್ರಧಾನ ಕಾರ್ಯದರ್ಶಿ ಮಡಿವಾಳಪ್ಪ ಪಾಟೀಲ್ ಎಚ್ಚರಿಸಿದರು.

ನಗರದ ತಹಸೀಲ್ ಕಚೇರಿಯ ಬಳಿ ಕಸಾಪ ಕೆಂಭಾವಿ ವಲಯದಿಂದ ಸಾಂಕೇತಿಕ ಪ್ರತಿಭಟನೆ ನಡೆಸಿ ಮಾತನಾಡಿ,ಕೆಂಭಾವಿ ವಲಯದ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರ ಹೆಸರುಗಳನ್ನು ಹುಣಸಗಿ ತಾಲೂಕಿನ ಕಸಾಪ ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ.ನಾವು ಈ ಹಿಂದೆ ಏಪ್ರಿಲ್ ತಿಂಗಳಿನಲ್ಲಿ ಮನವಿ ಮಾಡಿಕೊಂಡು ಕೆಂಭಾವಿ ವಲಯದ ಎಲ್ಲಾ ಸದಸ್ಯರ ಹೆಸರುಗಳನ್ನು ಸುರಪುರ ತಾಲೂಕಿನ ಮತದಾರರ ಪಟ್ಟಿಯಲ್ಲಿ ಸೇರಿಸುವಂತೆ ತಿಳಿಸಲಾಗಿದೆ.ಆದರೆ ಅಧಿಕಾರಿಗಳು ಕೆಂಭಾವಿಯಲ್ಲಿ ಮತಗಟ್ಟೆ ತೆರಯಬಾರದೆಂಬ ಕಾರಣಕ್ಕೆ ಹುಣಸಗಿ ತಾಲೂಕಿನ ಮತದಾರರ ಪಟ್ಟಿಯಲ್ಲಿ ಸೇರಿಸಿದ್ದಾರೆ ಎಂದು ಆರೋಪಿಸಿದರು.

Contact Your\'s Advertisement; 9902492681

ಅಲ್ಲದೆ ಕೂಡಲೇ ನಮ್ಮ ಕೆಂಭಾವಿ ವಲಯದ ಎಲ್ಲಾ ಮತದಾರರ ಹೆಸರುಗಳನ್ನು ಸುರಪುರ ತಾಲೂಕಿನ ಮತದಾರರ ಪಟ್ಟಿಯಲ್ಲಿ ಸೇರಿಸದಿದ್ದಲ್ಲಿ ಮುಂದೆ ನವ್ಹೆಂಬರ್ ೨೧ ರಂದು ನಡೆಯಲಿರುವ ಕಸಾಪ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಸಿದರು.
ನಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ತಹಸೀಲ್ ಕಾರ್ಯಾಲಯದ ಸಿರಸ್ತೆದಾರರ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆಂಭಾವಿ ಹಿರೇಮಠದ ಚನ್ನಬಸವ ಶಿವಾಚಾರ್ಯ ಸ್ವಾಮೀಜಿ,ಕೆಂಭಾವಿ ವಲಯ ಕಸಾಪ ಅಧ್ಯಕ್ಷ ಯಂಕನಗೌಡ ಪಾಟೀಲ್,ಸಾಹಿತಿ ನಿಂಗನಗೌಡ ದೇಸಾಯಿ,ಪತ್ರಕರ್ತರಾದ ವೀರಣ್ಣ ಕಲಕೇರಿ,ಸಂಜೀವರಾವ್ ಕುಲಕರ್ಣಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here