ಸುರಪುರ: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯ ಮತದಾರರ ಪಟ್ಟಿಯನ್ನು ಸರಿಪಡಿಸದಿದ್ದಲ್ಲಿ ಮುಂಬರುವ ಕಸಾಪ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಕೆಂಭಾವಿ ವಲಯ ಕಸಾಪ ಪ್ರಧಾನ ಕಾರ್ಯದರ್ಶಿ ಮಡಿವಾಳಪ್ಪ ಪಾಟೀಲ್ ಎಚ್ಚರಿಸಿದರು.
ನಗರದ ತಹಸೀಲ್ ಕಚೇರಿಯ ಬಳಿ ಕಸಾಪ ಕೆಂಭಾವಿ ವಲಯದಿಂದ ಸಾಂಕೇತಿಕ ಪ್ರತಿಭಟನೆ ನಡೆಸಿ ಮಾತನಾಡಿ,ಕೆಂಭಾವಿ ವಲಯದ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರ ಹೆಸರುಗಳನ್ನು ಹುಣಸಗಿ ತಾಲೂಕಿನ ಕಸಾಪ ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ.ನಾವು ಈ ಹಿಂದೆ ಏಪ್ರಿಲ್ ತಿಂಗಳಿನಲ್ಲಿ ಮನವಿ ಮಾಡಿಕೊಂಡು ಕೆಂಭಾವಿ ವಲಯದ ಎಲ್ಲಾ ಸದಸ್ಯರ ಹೆಸರುಗಳನ್ನು ಸುರಪುರ ತಾಲೂಕಿನ ಮತದಾರರ ಪಟ್ಟಿಯಲ್ಲಿ ಸೇರಿಸುವಂತೆ ತಿಳಿಸಲಾಗಿದೆ.ಆದರೆ ಅಧಿಕಾರಿಗಳು ಕೆಂಭಾವಿಯಲ್ಲಿ ಮತಗಟ್ಟೆ ತೆರಯಬಾರದೆಂಬ ಕಾರಣಕ್ಕೆ ಹುಣಸಗಿ ತಾಲೂಕಿನ ಮತದಾರರ ಪಟ್ಟಿಯಲ್ಲಿ ಸೇರಿಸಿದ್ದಾರೆ ಎಂದು ಆರೋಪಿಸಿದರು.
ಅಲ್ಲದೆ ಕೂಡಲೇ ನಮ್ಮ ಕೆಂಭಾವಿ ವಲಯದ ಎಲ್ಲಾ ಮತದಾರರ ಹೆಸರುಗಳನ್ನು ಸುರಪುರ ತಾಲೂಕಿನ ಮತದಾರರ ಪಟ್ಟಿಯಲ್ಲಿ ಸೇರಿಸದಿದ್ದಲ್ಲಿ ಮುಂದೆ ನವ್ಹೆಂಬರ್ ೨೧ ರಂದು ನಡೆಯಲಿರುವ ಕಸಾಪ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಸಿದರು.
ನಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ತಹಸೀಲ್ ಕಾರ್ಯಾಲಯದ ಸಿರಸ್ತೆದಾರರ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆಂಭಾವಿ ಹಿರೇಮಠದ ಚನ್ನಬಸವ ಶಿವಾಚಾರ್ಯ ಸ್ವಾಮೀಜಿ,ಕೆಂಭಾವಿ ವಲಯ ಕಸಾಪ ಅಧ್ಯಕ್ಷ ಯಂಕನಗೌಡ ಪಾಟೀಲ್,ಸಾಹಿತಿ ನಿಂಗನಗೌಡ ದೇಸಾಯಿ,ಪತ್ರಕರ್ತರಾದ ವೀರಣ್ಣ ಕಲಕೇರಿ,ಸಂಜೀವರಾವ್ ಕುಲಕರ್ಣಿ ಇದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…