ಕಲಬುರಗಿ: ಅಖಿಲ ಕರ್ನಾಟಕ ಹೇಮರೆಡ್ಡಿ ಮಲ್ಲಮ್ಮ ಮಹಿಳಾ ಅಭಿವೃದ್ಧಿ ಸಂಸ್ಥೆ ವತಿಯಿಂದ ಅ.೧೭.ರಂದು ಬೆಳಿಗ್ಗೆ ೧೧.ಕ್ಕೆ ನಗರದ ಸರ್ವಜ್ಞ ಕಾಲೇಜಿನಲ್ಲಿ ಡಾ.ಶೀತಲ ಪ್ರಶಾಂತ ಅವರು ವಿರಚಿತ ನೆನಪುಗಳು ಸುಳಿದಾವು ಕವನ ಸಂಕಲನ ಪುಸ್ತಕ ಸಮಾರಂಭಕ್ಕೆ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘ ಅಧ್ಯಕ್ಷ ಹಾಗೂ ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ ಅವರು ಉದ್ಘಾಟಿಸುವರು.
ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೋ.ಬಸವರಾಜ ಡೋಣೂರ ಅವರು ಪ್ರಸ್ತಕ ಬಿಡುಗಡೆ ಮಾಡುವರು. ಹಿರಿಯ ಸಾಹಿತಿ ಎ.ಕೆ.ರಾಮೇಶ್ವರ ಅವರು ಪುಸ್ತಕ ಪರಿಚಯ ಮಾಡುವರು. ಸರ್ವಜ್ಞ ಕಾಲೇಜಿನ ಅಧ್ಯಕ್ಷ ಚೆನ್ನಾರೆಡ್ಡಿ ಪಾಟೀಲ ಅವರು ಗೌರವ ಉಪಸ್ಥಿತಿ ವಹಿಸುವರು. ಅಖಿಲ ಕರ್ನಾಟಕ ಹೇಮರೆಡ್ಡಿ ಮಲ್ಲಮ್ಮ ಮಹಿಳಾ ಅಭಿವೃದ್ಧಿ ಸಂಸ್ಥೆಯ ಡಾ.ವಿಶಾಲಾಕ್ಷಿ ವಿ.ಕರೆಡ್ಡಿ ಅಧ್ಯಕ್ಷತೆ ವಹಿಸುವರು. ಬಿ.ಎಸ್.ದೇಸಾಯಿ, ಡಾ. ನೀಲಾಂಬಿಕಾ ಪೋಲಿಸ್ ಪಾಟೀಲ, ರವೀಂದ್ರ ಕರಜಗಿ, ಡಾ. ಎಸ್.ಎಸ್.ಗುಬ್ಬಿ ಇವರುಗಳನ್ನು ಸಂಸ್ಥೆಯ ವತಿಯಿಂದ ವಿಶೇಷ ಸನ್ಮಾನಿಸಲಾಗುವುದು. ಎಂದು ಸಂಸ್ಥೆಯ ಅಧ್ಯಕ್ಷೆ ಡಾ.ವಿಶಾಲಾಕ್ಷಿ ವಿ.ಕರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…