ಸುರಪುರ: ಅಳಿಯನ ಮದುವೆಗೆ ಬಂದು ಮರಳಿ ಹೋಗುವಾಗ ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ಹುಣಸಗಿ ಪಟ್ಟಣದ ಬಸವೇಶ್ವರ ವೃತ್ತದ ಬಳಿ ನಡೆದಿದೆ.
ಸಿಂಧಗಿ ತಾಲ್ಲೂಕಿನ ಸಿಂಧಗೇರಿ ಗ್ರಾಮದ ಮಡಿವಾಳಪ್ಪ ತಂದೆ ದುಂಡಪ್ಪ (25) ಎಂಬ ಯುವಕ ಕಳೆದ ಎರಡು ತಿಂಗಳ ಹಿಂದಷ್ಟೆ ವಜ್ಜಲ ಗ್ರಾಮದ ಯುವತಿಯೊಂದಿಗೆ ಮದುವೆಯಾಗಿತ್ತು.
ಬುಧವಾರ ಅಳಿಯನ ಮದುವೆಗೆಂದು ಪತ್ನಿಯ ಮನೆಗೆ ವಜ್ಜಲ ಗ್ರಾಮಕ್ಕೆ ಬಂದು ಮದುವೆ ಮುಗಿಸಿಕೊಂಡು ಹುಣಸಗಿಗೆ ಹೋಗುವಾಗ, ಹುಣಸಗಿಯ ಬಸವೇಶ್ವರ ವೃತ್ತದ ಬಳಿಯಲ್ಲಿ ಎದುರಿಗೆ ಬಂದ ವಿಆರ್ಎಲ್ ಸಂಸ್ಥೆಯ ಟ್ರಕ್ಕು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮಡಿವಾಳಪ್ಪ ಸ್ಥಳದಲ್ಲಿಯೆ ಸಾವನ್ನಪ್ಪಿದ್ದಾನೆ.
ಬೈಕ್ ಹಿಂಬದಿಯ ಸವಾರ ಮಹಾಂತೇಶ ತಂದೆ ಬಸ್ಸಣ್ಣ ಲಕ್ಕುಂಡಿ (26) ಕೆ.ತಳ್ಳಳ್ಳಿ ಗ್ರಾಮದ ಯುವಕನಿಗೆ ಗಾಯಗಳಾಗಿದ್ದು ಹುಣಸಗಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಹುಣಸಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…