ಹೈದರಾಬಾದ್ ಕರ್ನಾಟಕ

ಭಂಕೂರ -ಸಣ್ಣೂರ ರಸ್ತೆಯಲ್ಲಿ ಬೃಹತ್ ಆಕಾರದ ಗುಂಡಿ

ಶಹಾಬಾದ: ಭಂಕೂರ ಗ್ರಾಮದಿಂದ ಸಣ್ಣೂರ ಗ್ರಾಮಕ್ಕೆ ಹಾದು ಹೋಗುವ ಭಂಕೂರ ಗ್ರಾಮದ ಕಮಾನ್ ಹತ್ತಿರದ ರಸ್ತೆಯಲ್ಲಿ ದೊಡ್ಡದಾದ ಗುಂಡಿಗಳು ಬಿದ್ದು ಪ್ರಯಾಣಿಕರು ಸಂಚರಿಸದಂತಹ ಪರಿಸ್ಥಿತಿ ಎದುರಾಗಿದೆ.

ಭಂಕೂರ ಗ್ರಾಮದಿಂದ ಹೊರಡುವ ಮುಖ್ಯ ರಸ್ತೆಯಿಂದ ಸಣ್ಣೂರಿಗೆ ಪ್ರತಿನಿತ್ಯಇಲ್ಲಿ ಸಾವಿರಾರು ವಾಹನಗಳು ಸಂಚಾರಿಸುತ್ತವೆ. ಹೀಗೆ ಸಂಚಾರ ಮಾಡುವ ಪ್ರಯಾಣಿಕರ ವಾಹನಗಳು ಸೇರಿದಂತೆ ದ್ವಿಚಕ್ರ ಸವಾರರು, ಆಟೋ, ಗೂಡ್ಸ್ ವಾಹನಗಳು, ಲಾರಿ, ಬಸ್, ಟ್ರ್ಯಾಕ್ಟರ್ ಮುಂತಾದ ವಾಹನಗಳ ಸಂಚಾರಕ್ಕೆ ಸಂಚಕಾರ ಉಂಟಾಗಿದೆ.

ಭಂಕೂರ ಗ್ರಾಮದ ಕಮಾನ್ ಹತ್ತಿರವೇ ಈ ಬೃಹದಾಕಾರದ ಗುಂಡಿಯನ್ನು ನೋಡಿದರೇ ಲೋಕೋಪಯೋಗಿ ಇಲಾಖೆಯ ಕಾರ್ಯವೈಖರಿ ತೋರಿಸುತ್ತಿದೆ. ಈಗಾಗಲೇ ಹೆದ್ದಾರಿಗಳಲ್ಲಿ ಬಿದ್ದ ಗುಂಡಿಗಳನ್ನು ತಪ್ಪಿಸಲು ಹೋಗಿ ಅನೇಕ ಬೈಕ್ ಸವಾರರು ಪರಸ್ಪರ ಡಿಕ್ಕಿಹೊಡೆದುಕೊಂಡಿದ್ದಾರೆ. ತೆರಿಗೆ ನೀಡುವ ಸಾರ್ವಜನಿಕರಿಗೆ ಕನಿಷ್ಠ ಪಕ್ಷ ಉತ್ತಮ ರಸ್ತೆ ನಿರ್ಮಾಣ ಮಾಡಿಕೊಡಬೇಕು ಎನ್ನುವ ಇರಾದೆ ಜನಪ್ರತಿನಿಧಿಗಳಗಿಲ್ಲ. ಅಲ್ಲದೇ ಸಂಬಂಧಪಟ್ಟ ಇಲಾಖೆ ದುರಸ್ತಿ ಕಾರ್ಯಕ್ಕೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಗ್ರಾಮಸ್ಥರು ಹಾಗೂ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹೆದ್ದಾರಿಯಲ್ಲಿ ದೊಡ್ಡ ಗುಂಡಿಗಳು ಬಿದ್ದಿವೆ.ಅಲ್ಲದೇ ಬುತೇಕ ಕಡೆಗಳಲ್ಲಿ ರಸ್ತೆ ಮೇಲಿನ ಪದರು ಕಿತ್ತುಕೊಂಡು ಹೋಗಿವೆ. ಇದರಿಂದ ರಸ್ತೆಯಲ್ಲಿ ಸಂಚಾರ ಮಾಡಲು ಭಯವಾಗುತ್ತಿದೆ. ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ತಕ್ಷಣವೇ ಮುಚ್ಚಬೇಕು. ಸಾರ್ವಜನಿಕರ ಸುಗಮ ಸಂಚಾರದ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.

ರಸ್ತೆಯ ಮೇಲೆ ಗುಂಡಿಗಳು ಬಿದ್ದು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದರಿಂದ ಅಪಘಾತಗಳಾಗುವ ಸಾಧ್ಯತೆಯಿದೆ.ಕೂಡಲೇ ಸಂಬಂಧಪಟ್ಟ ಇಲಾಖೆ ಸರಿಪಡಿಸಬೇಕು. – ಮಹ್ಮದ್ ಅಜರ್ ಶಹಾಬಾದ.

ಭಂಕೂರ ಗ್ರಾಮದ ಐತಿಹಾಸಿಕ ಎರಡು ಉದ್ಭವ ಗಣಪಗಳನ್ನು ನೋಡಲು ಹಾಗೂ ದರ್ಶನ ಪಡೆಯಲು ನಿತ್ಯ ಸಾರ್ವಜನಿಕರು ಬರುತ್ತಾರೆ.ನೂರಾರು ಜನರು ಇದೇ ರಸ್ತೆಯಿಂದ ಸಂಚರಿಸುತ್ತಾರೆ. ಇಲ್ಲಿನ ಬೃಹದಾಕಾರದ ಗುಂಡಿಯನ್ನು ನೋಡಿ ಯಾರಾದರೂ ಶಪಿಸದೇ ಇರಲಾರರು.ಕೂಡಲೇ ಗುಂಡಿಯನ್ನು ಮುಚ್ಚಿಸಿ. – ಅಶೋಕ ಗುತ್ತೆದಾರ.

emedialine

Recent Posts

ಸಾಧನೆ ಮಾಡಲು ಓದಿನಷ್ಟೆ ಕ್ರೀಡೆಯಲ್ಲೂ ಅವಕಾಶವಿದೆ

ಸುರಪುರ:ಯಾವುದೇ ವ್ಯಕ್ತಿ ಸಾಧನೆ ಮಾಡಲು ಕೇವಲ ಓದು ಒಂದೇ ಮುಖ್ಯವಲ್ಲ,ಇಂದು ಓದಿನಷ್ಟೆ ಕ್ರೀಡೆಯಲ್ಲೂ ಸಾಧನೆ ಮಾಡಲು ಅವಕಾಶವಿದೆ ಎಂದು ಕ್ಷೇತ್ರ…

1 hour ago

ಕನ್ನಡ ನಾಡಿನ ಅಭಿವೃದ್ಧಿಯಲ್ಲಿ ಅರಸು ಕೊಡುಗೆ ಅಪಾರವಾಗಿದೆ

ಸುರಪುರ: ಕನ್ನಡ ನಾಡು ಇಂದು ಇಷ್ಟೊಂದು ಸಮೃದ್ಧವಾಗಿದೆ,ಅಭಿವೃಧ್ಧಿಯಾಗಿದೆ ಎಂದರೆ ಅದಕ್ಕೆ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಕೊಡುಗೆ ಅಪಾರವಾಗಿದೆ…

1 hour ago

ಸ್ಲಂ ಜನಾಂದೋಲನ ಸಂಘಟನೆಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊಸ ಪಡಿತರ ಚೀಟಿ ನೀಡುವ ನಿಯಮ ಸರಳೀಕರಣಗೊ- ಳಿಸಬೇಕು ಹಾಗೂ ನೈಜ ಫಲಾನುಭ- ವಿಗಳಿಗೆ ಹೊಸ ಪಡಿತರ ಚೀಟಿಗಳನ್ನು…

1 hour ago

ಕಲ್ಯಾಣ ಕರ್ನಾಟಕ ಛಾಯಾ ಸಾಧಕ ಪ್ರಶಸ್ತಿ ಪ್ರದಾನ

ಕಲಬುರಗಿ: ಛಾಯಾಗ್ರಾಹಕರು ಇಂದಿನ ಸಮಾಜದ ಪ್ರತಿಬಿಂಬರಾಗಿ ಕಾಣುತ್ತಾರೆ. ಎಲ್ಲಾ ಛಾಯಾಗ್ರಾಹಕರು ಒಗ್ಗಟ್ಟು ಇಟ್ಟುಕೊಂಡು ಸಂಘಟಿತರಾದರೆ ಸಂಘಕ್ಕೆ ಇನ್ನೂ ಹೆಚ್ಚಿನ ಬಲ…

1 hour ago

ಪ್ರತ್ಯೇಕ ಸ್ಮಶಾನ ಭೂಮಿಗಾಗಿ ಎಸ್ಸಿಖ/ಎಸ್ಟಿ ಒಗ್ಗಟು ಸಮಿತಿ ಸಿಎಂಗೆ ಮನವಿ

ಕಲಬುರಗಿ: ಜಿಲ್ಲೆಯಲ್ಲಿ ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ಸ್ಮಶಾನ ಭೂಮಿ ಇರುವುದಿಲ್ಲ, ಬಹುತೇಕರು ತಮ್ಮ ತಮ್ಮ ಹೊಲಗಳಲ್ಲಿ ಶವ ಸಂಸ್ಕಾರ…

2 hours ago

ಸಚೀನ್ ಫರತಾಬಾದ ನೇತೃತ್ವದಲ್ಲಿ ಉಪ ಮುಖ್ಯಮಂತ್ರಿಗೆ ಮನವಿ

ಕಲಬುರಗಿ: ಪ್ರತಿ ವರ್ಷ ಆಚರಣೆ ಮಾಡುತ್ತಾ ಬರುತ್ತಿರುವ ಸೆಪ್ಟೆಂಬರ್ 17 ರಂದು ಕಲ್ಯಾಣ-ಕರ್ನಾಟಕ ವಿಮೋಚನೆ ದಿನಾಚರಣೆ ದಿನದಂದು ಸರಕಾರಿ ರಜೆ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420