ಸರ್ಕಾರದ ನಿಯಮಗಳನ್ನು ಪಾಲನೆ ಮಾಡಿ ಈದ್-ಮಿಲಾದ್ ಆಚರಣೆ: ಸಿಪಿಐ ಕೃಷ್ಣಪ್ಪ ಕಲ್ಲದೇವರ್

ಚಿತ್ತಾಪುರ:ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸಿ ನಿಯಮಗಳನ್ನು ಪಾಲನೆ ಮಾಡಿ ಈ ವರ್ಷದ ಈದ್-ಮಿಲಾದ್ ಆಚರಣೆ ಮಾಡಿ ಎಂದು ಸಿಪಿಐ ಕೃಷ್ಣಪ್ಪ ಕಲ್ಲದೇವರ್ ಹೇಳಿದ್ದಾರೆ.

ಪಟ್ಟಣ ಪೊಲೀಸ್ ಠಾಣೆಯಲ್ಲಿ ಸೋಮವಾರ ನಡೆದ ಈದ್ ಮಿಲಾದ್ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು ಚಿತ್ತಾಪುರ ಶಾಂತಿ ಸೌಹಾರ್ದತೆಗೆ ಹೆಸರಾದ ತಾಲ್ಲೂಕು ಆಗಿದ್ದೆ.ಕೋವಿಡ್ ಸಾಂಕ್ರಾಮಿಕ ರೋಗ ದೇಶವನ್ನು ತಲ್ಲಣಗೊಳಿಸಿದ ಇದರ ನಿಯಂತ್ರಣ ಮಾಡಲು ಸರ್ಕಾರ ನಿಯಮಗಳನ್ನು ರೂಪಿಸಿದೆ ಅದನ್ನು ಅನುಸರಿಸಿ ಈ ವರ್ಷದ ಈದ್-ಮಿಲಾದ್ ಹಬ್ಬವನ್ನು ಮುಸ್ಲಿಂ ಭಾಂದವರು ಆಚರಣೆ ಮಾಡಬೇಕು ಎಂದು ಹೇಳಿದರು.

ಪಿಎಸ್ಐ ಮಂಜುನಾಥರೆಡ್ಡಿ ಮಾತನಾಡಿ ಹಬ್ಬವನ್ನು ಶಾಂತಿಯುತವಾಗಿ ಆಚರಣೆ ಮಾಡಬೇಕು.ಯಾವುದೇ ಸೌಂಡ್ ಸಿಸ್ಟಮ್,ಡಿ.ಜೆ ಗಳಿಗೆ ಅವಕಾಶವಿಲ್ಲ. ಜನ ಜಾಸ್ತಿ ಸೇರಿದಂತೆ ಕೋವಿಡ್ ನಿಯಮಗಳನ್ನು ಅನುಸರಿಸಿ ಈದ್ ಆಚರಣೆ ಮಾಡಬೇಕು. ಮಸೀದಿಗಳಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಹಾಗೂ 10 ವರ್ಷದ ಒಳಗಿನ ಮಕ್ಕಳಿಗೆ ಪ್ರವೇಶ ನಿರ್ಬಂಧವಿದ್ದು,ಪ್ರತಿಯೊಬ್ಬರೂ ಕೋವಿಡ್ ಮಾರ್ಗಸೂಚಿಯನ್ನು ಪಾಲನೆ ಮಾಡಿ ಶಾಂತಿಯುತವಾಗಿ ಈದ್ ಮಿಲಾದ್ ಆಚರಣೆ ಮಾಡಿ ಎಂದು ಹೇಳಿದರು.

ಪುರಸಭೆ ಅಧ್ಯಕ್ಷ ಚಂದ್ರಶೇಖರ ಕಾಶಿ ಮಾತನಾಡಿ ಚಿತ್ತಾಪುರ ಶಾಂತಿಯ ತವರುರಾಗಿದೆ.ಇಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯುದಿಲ್ಲ.ತಾಲೂಕಿನ ಜನರು ಪ್ರಜ್ಞಾವಂತರು.ಕಾನೂನಿನ ಮೇಲೆ ಅಪಾರ ಗೌರವಹೊಂದಿದವರು ಸರ್ಕಾರ ಸೂಚಿಸಿರುವ ಮಾರ್ಗಸೂಚಿಯನ್ನು ಪಾಲನೆ ಮಾಡಿ ಈದ್ ಹಬ್ಬವನ್ನು ಆಚರಿಸುತ್ತಾರೆ ಎಂದು ಹೇಳಿದರು.

ಈ ಶಾಂತಿ ಸಭೆಯಲ್ಲಿ ಪುರಸಭೆ ಸದಸ್ಯರಾದ ನಾಗರಾಜ ಭಂಕಲಗಿ, ಗೋವಿಂದ ನಾಯಕ್,ಶ್ರೀನಿವಾಸರೆಡ್ಡಿ ಪಾಲಪ್,ಮಲ್ಲಿಕಾರ್ಜುನ ಕಾಳಗಿ,ಮನೋಜಕುಮಾರ ರಾಠೋಡ ಮುಖಂಡರಾದ ನಾಗರೆಡ್ಡಿ ಗೋಪಸೇನ್,ಇಕ್ಬಾಲ್,ಎ.ಎಂ.ರಶೀದ್,ಜಾಫರ್ ಸೇಠ್,ಈರಪ್ಪಾ ಭೋವಿ,ಸುರೇಶ್ ಪೂಜಾರಿ,ಅಶ್ವಥರಾಮ್ ರಾಠೋಡ, ಬಾಲಾಜಿ ಬುರ್ ಬರೆ,ಜಗದೀಶ ಚೌಹಾಣ್,ಎಂಡಿ ಯೂನಿಸ್,ಅಲೀಮ್ ಸೇಠ್ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಮಹೇಶರೆಡ್ಡಿ, ಮಲ್ಲಿಕಾರ್ಜುನ ಸೇರಿದಂತೆ ಅನೇಕರು ಇದ್ದರು. ಶಾಂತಿ ಸಭೆಯನ್ನು ಪೊಲೀಸ್ ಸಿಬ್ಬಂದಿ ಜಗದೀಶ್ ನಿರೂಪಿಸಿ ವಂದಿಸಿದರು.

emedialine

Recent Posts

ಕಲಬುರಗಿ: ಇಎಸ್ ಐಸಿ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್, ನರರೋಗ ತಜ್ಞರ ಪ್ರಾರಂಭಕ್ಕೆ ಆಗ್ರಹ

ಕಲಬುರಗಿ: ನಗರದಲ್ಲಿನ ಇಎಸ್ ಐಸಿ ವೈದ್ಯಕೀಯ ಆಸ್ಪತ್ರೆಯಲ್ಲಿ ವಿಕಿರಣಶಾಸ್ತ್ರ ವಿಭಾಗದಲ್ಲಿ ಸಿಟಿ ಸ್ಕ್ಯಾನ್ ಮಾಡುವುದಕ್ಕೆ 30 ದಿನಗಳ ಸಮಯ ತೆಗೆದುಕೊಳ್ಳುತ್ತಿರುವುದನ್ನು…

26 mins ago

ರಾಜ್ಯಮಟ್ಟದ ಗಮಕ‌ ಸಮ್ಮೇಳ‌ನ

ಕಲಬುರಗಿ: ಜೇವರ್ಗಿ ತಾಲೂಕು‌ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮೈಸೂರಿನ ಪರಂಪರೆ ಸಂಸ್ಥಯ ಸಹಯೋಗದಲ್ಲಿ ಜೇವರ್ಗಿಯ ಟೌನ್ ಹಾಲ್ ಹಳೆ…

30 mins ago

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…

11 hours ago

ಭ್ರಷ್ಟಾಚಾರ ರಹಿತ ವಿವಿಗೆ ಆದ್ಯತೆ: ರಾಘವೇಂದ್ರ ಭೈರಪ್ಪ

ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…

12 hours ago

ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…

12 hours ago

ಸಚಿವ ಸಂಪುಟ ಸಭೆಯಲ್ಲಿ ವಿವಿಧ ಬೇಡಿಕೆ ಈಡೇರಿಕ್ಕೆಗೆ ಆಗ್ರಹ

ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420